ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021
ರಸ್ತೆ ಬದಿ ಮೊಬೈಲ್ ಫೋನ್’ನಲ್ಲಿ ಮಾತನಾಡುತ್ತಿದ್ದ ವೇಳೆ ಬೈಕ್’ನಲ್ಲಿ ಬಂದ ಇಬ್ಬರು ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಗೋಪಾಳದ ದ್ರೌಪದಮ್ಮ ಸರ್ಕಲ್ ಬಳಿಕ ಘಟನೆ ಸಂಭವಿಸಿದೆ. ಪ್ರಭಾಕರ್ ಎಂಬುವವರು ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಮೊಬೈಲ್ ರಿಂಗಾಗಿದೆ. ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ ಫೋನ್’ನಲ್ಲಿ ಮಾತನಾಡುತ್ತಿದ್ದರು.
ಹಿಂದಿನಿಂದ ಬೈಕ್’ನಲ್ಲಿ ಬಂದ ಇಬ್ಬರು ಪ್ರಭಾಕರ್ ಅವರ ಮೊಬೈಲ್ ಕಿತ್ತುಕೊಂಡು ಆಲ್ಕೊಳಕ್ಕೆ ಹೋಗುವ ಡಬಲ್ ರಸ್ತೆಯಲ್ಲಿ ತೆರಳಿದ್ದಾರೆ. ಈ ಸಂಬಂಧ ಪ್ರಭಾಕರ್ ಅವರು ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200