SHIVAMOGGA LIVE NEWS | 5 APRIL 2024
SHIMOGA : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕನೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಕೂಡಲಿ ಗ್ರಾಮದ ತುಂಗಭದ್ರಾ ಸಂಗಮದಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗದ ಅಣ್ಣಾನಗರದ ಮುಬಾರಕ್ (18) ಸಾವಿಗೀಡಾದವನು. ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಎಂದಿನಂತೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಕೂಡಲಿ ಸಂಗಮದಲ್ಲಿ ಸ್ನಾನ ಮಾಡಲು ಸ್ನೇಹಿತರೊಂದಿಗೆ ತೆರಳಿದ್ದಾಗ ಅವಘಡ ನಡೆದಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಮದುವೆಗೆ ವಾದ್ಯ ನುಡಿಸಲು ತೆರಳುತ್ತಿದ್ದವರಿಗೆ ಬುಳ್ಳಾಪುರ ಬಳಿ ಎದುರಾದ ಜವರಾಯ, ಇಬ್ಬರು ಸಾವು, ಆಗಿದ್ದೇನು?