ಶಿವಮೊಗ್ಗ ಲೈವ್.ಕಾಂ | SHIRALAKOPPA | 7 ನವೆಂಬರ್ 2019
ಶಿರಾಳಕೊಪ್ಪದ ಆನವಟ್ಟಿ ರಸ್ತೆಯಲ್ಲಿ ಕಬ್ಬಿನ ಹಾಲು ವ್ಯಾಪಾರಿಗೆ ಹಾಡಹಗಲೇ ಚಾಕುವಿನಿಂದ ಇರಿದು, ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ.
ಸೈಯದ್ ಜಾಫರ್ ಮುನ್ನಾ (26) ಹತ್ಯೆಗೀಡಾದ ಯುವಕ. ಬುಧವಾರ ಸಂಜೆ ಘಟನೆ ನಡೆದಿದೆ. ಈತನ ಕಬ್ಬಿನ ಹಾಲಿನ ಅಂಗಡಿ ಪಕ್ಕದಲ್ಲಿ ಕುಷನ್ ಅಂಗಡಿ ನಡೆಸುತ್ತಿರುವ ಜಾವೇದ್ ಬೇಗ್ (19) ಎಂಬಾತ ಈ ಕೃತ್ಯ ಎಸಗಿದ್ದಾನೆ.
ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ಜಗಳ ನಡೆದು ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಸ್ಥಳಕ್ಕೆ ಎಎಸ್ಪಿ ಕೆ.ಶ್ರೀನಿವಾಸುಲು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]