ಶಿವಮೊಗ್ಗ ಲೈವ್.ಕಾಂ | SORABA NEWS | 20 ಜುಲೈ 2021
ಕೌಟುಂಬಿಕ ಕಲಹದ ಹಿನ್ನೆಲೆ ನಡು ರಸ್ತೆಯಲ್ಲಿ ಗಂಡನೆ ಹೆಂಡತಿಯ ಕೊಲೆ ಮಾಡಲು ಯತ್ನಿಸಿದ್ದಾನೆ. ಗಂಭೀರವಾಗಿ ಗಾಯಗೊಂಡು, ಜೀವನ್ಮರಣ ಸ್ಥಿತಿಯಲ್ಲಿ ಇರುವ ಮಹಿಳೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಮೀಳಾ ಹಲ್ಲೆಗೀಡಾದ ಮಹಿಳೆ. ಈಕೆಯ ಪತಿ ತುಕಾರಾಮ ಹತ್ಯೆಗೆ ಯತ್ನಿಸಿದ್ದಾನೆ. ಸೊರಬ ಪಟ್ಟಣದ ಹಳೆ ಸೊರಬದ ಗೌರಿಕೆರೆ ಮಠದ ಬಳಿ ಮಧ್ಯಾಹ್ನ ಘಟನೆ ಸಂಭವಿಸಿದೆ.
ಕತ್ತು ಕೊಯ್ಯಲು ಯತ್ನಿಸಿದ ಪತಿರಾಯ
ಪ್ರಮೀಳಾಗೆ ಪತಿ ತುಕಾರಾಮ ಚಾಕುವಿನಿಂದ ಇರಿದಿದ್ದಾನೆ. ಗಂಟಲು ಸೀಳಿ ಹತ್ಯೆ ಮಾಡಲು ಯತ್ನಿಸಿದ್ದಾನೆ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಮೀಳಾ ಅವರನ್ನು ಕೂಡಲೆ ಸೊರಬದ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸೊರಬ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200