SHIVAMOGGA LIVE NEWS
SHIMOGA |ಮೈಸೂರು – ತಾಳಗುಪ್ಪ ರೈಲಿಗೆ ರಾಷ್ಟ್ರಕವಿ ಕುವೆಂಪು (EXPRESS TRAIN) ಅವರ ಹೆಸರನ್ನು ನಾಮಕರಣ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಇತ್ತ ರೈಲ್ವೆ ಇಲಾಖೆ ನಿರ್ಧಾರವನ್ನು ಸಂಸದ ರಾಘವೇಂದ್ರ ಸ್ವಾಗತಿಸಿದ್ದಾರೆ.
ರೈಲು ಸಂಖ್ಯೆ 16221 ಮತ್ತು 16222 ತಾಳಗುಪ್ಪ – ಮೈಸೂರು ಎಕ್ಸ್ ಪ್ರೆಸ್ (EXPRESS TRAIN) ರೈಲಿಗೆ ರಾಷ್ಟ್ರಕವಿ ಕುವೆಂಪು ಎಕ್ಸ್ ಪ್ರೆಸ್ ಎಂದು ಹೆಸರಿಡಲಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಅನಾಹುತ ತಪ್ಪಿಸಿದ ಮೈಸೂರು – ತಾಳಗುಪ್ಪ ರೈಲು ಸಿಬ್ಬಂದಿಗೆ ಸನ್ಮಾನ, ಏನಾಗಿತ್ತು?
ರೈಲು ಸಂಖ್ಯೆ 16221 ತಾಳಗುಪ್ಪ ಮೈಸೂರು ರೈಲು ಬೆಳಗ್ಗೆ 6.15ಕ್ಕೆ ತಾಳಗುಪ್ಪದಿಂದ ಹೊರಡಲಿದೆ. ಬೆಳಗ್ಗೆ 8.20ಕ್ಕೆ ಶಿವಮೊಗ್ಗ ಆಗಮಿಸಲಿದೆ. ಮಧ್ಯಾಹ್ನ 3.35ಕ್ಕೆ ಮೈಸೂರು ತಲುಪಲಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಸಾಗರದಲ್ಲಿ ತಾಳಗುಪ್ಪ – ಮೈಸೂರು ಎಕ್ಸ್ ಪ್ರೆಸ್ ರೈಲು ನಿಲುಗಡೆ ಸಮಯ ಹೆಚ್ಚಳ
ರೈಲು ಸಂಖ್ಯೆ 16222 ಮೈಸೂರು ತಾಳಗುಪ್ಪ ಎಕ್ಸ್ ಪ್ರೆಸ್. ಮಧ್ಯಾಹ್ನ 2 ಗಂಟೆಗೆ ಮೈಸೂರಿನಿಂದ ಹೊರಡಲಿದೆ. ರಾತ್ರಿ 8.35ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದೆ. ರಾತ್ರಿ 11 ಗಂಟೆಗೆ ತಾಳಗುಪ್ಪ ತಲುಪಲಿದೆ.
ಸಂಸದ ರಾಘವೇಂದ್ರ ಅಭಿನಂದನೆ (EXPRESS TRAIN)
ರೈಲ್ವೆ ಇಲಾಖೆ ತಾಳಗುಪ್ಪ – ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ನಾಮಕರಣ ಮಾಡಿರುವುದಕ್ಕೆ ಸಂಸದ ಬಿ.ವೈ.ರಾಘವೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ. ‘ರೈಲ್ವೆ ಇಲಾಖೆ ಈ ಮೂಲಕ ರಾಷ್ಟ್ರಕವಿ ಕುವೆಂಪು ಅವರಿಗೆ ವಿಶೇಷವಾಗಿ ಗೌರವ ಸಲ್ಲಿಸಿದೆ. ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ಅಭಿನಂದನೆ’ ಎಂದು ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಭಾರತ್ ಜೋಡೋ ಯಾತ್ರೆಗೆ ಶಿವಮೊಗ್ಗದ ಕಾರ್ಯಕರ್ತರು, ಯಾವ್ಯಾವ ದಿನ ಯಾವ ಕ್ಷೇತ್ರದವರು ಭಾಗಿ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.