SHIVAMOGGA LIVE NEWS | 11 ಮಾರ್ಚ್ 2022
ಸ್ಥಳೀಯರ ಆಕ್ರೋಶ, ಪ್ರತಿಭಟನೆ ಬೆನ್ನಿಗೆ ಕೃಷಿ ಮತ್ತು ತೋಟಗಾರಿಕೆ ವಿಶ್ವಾವಿದ್ಯಾಲಯದ ನಾಮಫಲಕ ಬದಲಾವಣೆ ಮಾಡಲಾಗಿದೆ.
ಸಾಗರ ತಾಲೂಕು ಇರುವಕ್ಕಿಯ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪನಾಯಕ ಅವರ ಹೆಸರಿನ ನಾಮಫಲಕ ಅಳವಡಿಸಲಾಗಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಅವರ ಹೆಸರನ್ನು ಘೋಷಿಸಿದ್ದರು.
ಇದನ್ನೂ ಓದಿ | ವರ್ಷ ಕಳೆದರೂ ಬದಲಾಗದ ನಾಮಫಲಕ, ಇರುವಕ್ಕಿಯಲ್ಲಿ ಸ್ಥಳೀಯರಿಂದ ರಸ್ತೆ ತಡೆ
ಒಂದು ವರ್ಷ ಕಳೆದರೂ ನಾಮಫಲಕ ಅಳವಡಿಸದೆ ಇರುವುದಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ವಿಶ್ವವಿದ್ಯಾಲಯದ ಮುಂದೆ ಪ್ರತಿಭಟನೆ ನಡೆಸಿ, ರಸ್ತೆ ತಡೆ ಮಾಡಿದ್ದರು. ಪ್ರತಭಟನೆಯಾಗಿ 24 ಗಂಟೆಯೊಳಗೆ ನಾಮಫಲಕ ಬದಲಾವಣೆ ಮಾಡಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200