ಶಿವಮೊಗ್ಗ ಲೈವ್.ಕಾಂ | SHIMOGA NEWS | 07 ಅಕ್ಟೋಬರ್ 2021
ಶಿವಮೊಗ್ಗ ದಸರಾ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಡಹಬ್ಬದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿಯ ಮೆರವಣಿಗೆ ಶುರುವಾಗಿದೆ.
ಮಹಾನಗರ ಪಾಲಿಕೆಯಿಂದ ಕೋಟೆ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದವರೆಗೆ ನಾಡದೇವಿಯ ಮೆರವಣಿಗೆ ನಡೆಯಲಿದೆ.
ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಆಡಳಿತ ಮತ್ತು ವಿರೋಧ ಪಕ್ಷದ ಕಾರ್ಪೊರೇಟರ್’ಗಳು ನಾಡದೇವತೆ ಮೂರ್ತಿಗೆ ಪೂಜೆ ಸಲ್ಲಿಸಿದರು. ಪಾಲಿಕೆ ಆವರಣದಿಂದ ಮೆರವಣಿಗೆ ಆರಂಭವಾಗಿದೆ.
ಮಹಾನಗರ ಪಾಲಿಕೆಯಲ್ಲಿ ನಾಡದೇವಿ ಚಾಮುಂಡೇಶ್ವರಿಯ ಬೆಳ್ಳಿ ಲೇಪಿತ ಮೂರ್ತಿ ಮತ್ತು ಅಂಬಾರಿಯನ್ನು ಇರಿಸಲಾಗಿದೆ. ಅಲ್ಲಿಂದ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದವರೆಗೆ ಮೆರವಣಿಗೆ ನಡೆಸಲಾಗುತ್ತದೆ. ದೇಗುಲದ ಆವರಣದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಒಂಭತ್ತು ದಿನ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200