ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಪಲ್ಟಿಯಾಗಿ ಬಸ್ಸಿಗೆ ಡಿಕ್ಕಿ ಹೊಡೆದ ಕಾರ್‌ | ಮತ್ತಷ್ಟು ಸುದ್ದಿ | ಫಟಾಫಟ್‌ ನ್ಯೂಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE| 24 JUNE 2023

ಪಲ್ಟಿಯಾಗಿ ಬಸ್ಸಿಗೆ ಡಿಕ್ಕಿ ಹೊಡೆದ ಕಾರು

SHIMOGA : ಗಾಜನೂರು (Gajanur) ಸಮೀಪ ಕಾರು ಮತ್ತು ಬಸ್‌ ಮುಖಾಮುಖಿ FATAFAT NEWS 1 jpgಡಿಕ್ಕಿಯಾಗಿವೆ (Mishap). ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಕಾರು, ಶಿವಮೊಗ್ಗ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ ಮಧ್ಯೆ ಅಪಘಾತವಾಗಿದೆ. ಮೊರಾರ್ಜಿ ಶಾಲೆ ಬಳಿ ಓವರ್‌ ಟೇಕ್‌ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮೂವರಿಗೆ ಸಣ್ಣಪುಟ್ಟ ಗಾಯವಾಗಿದೆ. ಎಲ್ಲರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. (ಫೋಟೊ, ಮಾಹಿತಿ : ಸಂಜು ಗೌಡ)

car bus mishap at gajanur road in Shimoga Thirthahalli Highway

ಲಾಡ್ಜ್‌ ಮುಂದೆ ನಿಲ್ಲಿಸಿದ್ದ ಬೈಕ್‌ ನಾಪತ್ತೆ

SHIMOGA : ಬಾಲರಾಜ ಅರಸ್‌ ರಸ್ತೆಯಲ್ಲಿರುವ ಲಕ್ಷ್ಮಿ ರಂಗನಾಥ FATAFAT NEWS 2 jpgಲಾಡ್ಜ್‌ (Lodge) ಮುಂದೆ ನಿಲ್ಲಿಸಿದ್ದ ಬೈಕ್‌ ಕಳ್ಳತನವಾಗಿದೆ. ಟ್ಯಾಂಕ್‌ ಮೊಹಲ್ಲಾದ ಮನ್ನಿ ನರಸಿಂಹಯ್ಯ ಎಂಬುವವರಿಗೆ ಸೇರಿದ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ಕಳುವಾಗಿದೆ. ಮನ್ನಿ ನರಸಿಂಹಯ್ಯ ಅವರು ಲಾಡ್ಜ್‌ನಲ್ಲಿ ತಂಗಿದ್ದ ತಮ್ಮ ಸ್ನೇಹಿತರಿಗೆ ಊಟ ಕೊಡಲು ಹೋಗಿದ್ದರು. ರಾತ್ರಿ 9.15ರ ಹೊತ್ತಿಗೆ ಬೈಕ್‌ (Bike) ನಿಲ್ಲಿಸಿ ಹೋಗಿದ್ದು, ಸ್ವಲ್ಪ ಹೊತ್ತಿನಲ್ಲೆ ಹಿಂತಿರುಗಿದ್ದು ಬೈಕ್‌ ನಾಪತ್ತೆಯಾಗಿತ್ತು ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೇವೆಯಿಂದ ವಜಾಗೊಳಿಸುವಂತೆ ಒತ್ತಾಯ

SHIMOGA : ಮೆಗ್ಗಾನ್‌ ಆಸ್ಪತ್ರೆಯ (Mc Gann Hospital) ಡಾ.ಶ್ರೀಧರ್‌ FATAFAT NEWS 3 jpgಅವರು ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಅವರನ್ನು ಕೂಡಲೆ ವಜಾಗೊಳಿಸಬೇಕು ಎಂದು ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೆಗ್ಗಾನ್‌ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿ ಸಿಮ್ಸ್‌ ನಿರ್ದೆಶಕರಿಗೆ ಮನವಿ ಸಲ್ಲಿಸಲಾಯಿತು.

ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು

GAJANUR : ಬೈಕಿನಲ್ಲಿ ಜಮೀನಿಗೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ FATAFAT NEWS 4 jpgಕಾರು ಡಿಕ್ಕಿ ಹೊಡೆದು ಸಕ್ರೆಬೈಲು (Sakrebyle) ನಿವಾಸಿ ಗಾಯಗೊಂಡಿದ್ದಾರೆ. ರಾಜಪ್ಪ, ಗಾಯಗೊಂಡವರು. ಸಕ್ರೆಬೈಲಿನಿಂದ ಗಾಜನೂರು (Gajanur) ಕಡೆಗೆ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ರಾಜಪ್ಪ ಅವರ ಬಲಗೈ, ಬಲಗಾಲು, ಹಿಮ್ಮಡಿ ಬಳಿ ಗಾಯವಾಗಿದೆ. ಕಣ್ಣಿನ ಸಮೀಪ ತರಚಿದೆ ಎಂದು ಆರೋಪಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ರಸ್ತೆ ಬದಿ ನಿಂತಿದ್ದವರಿಗೆ ಅಟೋ ಡಿಕ್ಕಿ

SANTHE KADUR : ರಸ್ತೆ ಬದಿ ದ್ವಿಚಕ್ರ ವಾಹನ ನಿಲ್ಲಿಸಿಕೊಂಡು FATAFAT NEWS 5 jpgನಿಂತಿದ್ದ ಮಹಿಳೆಗೆ ಆಟೋ (Auto) ಡಿಕ್ಕಿ ಹೊಡೆದು, ಇಬ್ಬರು ಗಾಯಗೊಂಡಿದ್ದಾರೆ. ಮಗನೊಂದಿಗೆ ಶಿವಮೊಗ್ಗಕ್ಕೆ ಬಂದು ಎನ್‌.ಆರ್‌.ಪುರದ (NR Pura) ಸಹನಾ ಎಂಬುವರು ಮನೆಗೆ ಮರಳುತ್ತಿದ್ದರು. ವ್ಯಾನಿಟಿ ಬ್ಯಾಗನ್ನು ದ್ವಿಚಕ್ರ ವಾಹನದ ಡಿಕ್ಕಿಯಲ್ಲಿ ಇಡಲೆಂದು ಸಹನಾ ಅವರ ಮಗ ಸಂತೆ ಕಡೂರು ಬಳಿ ಬೈಕ್‌ ನಿಲ್ಲಿಸಿದ್ದರು. ಈ ವೇಳೆ ಶಿವಮೊಗ್ಗ ಕಡೆಯಿಂದ ಬಂದ ಆಟೋ ಬೈಕ್‌ ಮತ್ತು ಸಹನಾ ಅವರಿಗೆ ಡಿಕ್ಕಿ ಹೊಡದು ಪಲ್ಟಿಯಾಗಿದೆ ಎಂದು ಆರೋಪಿಸಲಾಗಿದೆ. ಆಟೋ ಚಾಲಕ ಮತ್ತು ಸಹನಾ ಅವರು ಗಾಯಗೊಂಡಿದ್ದರು. ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಯಿತು. ತುಂಗಾ ನಗರ ಠಾಣೆಯಲ್ಲಿ ಆಟೋ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment