ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 AUGUST 2023
ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ
SHIMOGA : ನಮೋ ಬ್ರಿಗೇಡ್, ಅಜೇಯ ಸಂಸ್ಕೃತಿ ಬಳಗದ ವತಿಯಿಂದ
ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಉಪನ್ಯಾಸ (Lecture) ಕಾರ್ಯಕ್ರಮ ಆಯೋಜಿಸಲಾಗಿದೆ. ಆ.28ರಿಂದ 30ರವರೆಗೆ ಪ್ರತಿದಿನ ಸಂಜೆ 6.30 ರಿಂದ 8 ಗಂಟೆವರೆಗೆ ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿರುವ ಆಚಾರ್ಯತ್ರಯರ ಭವನದಲ್ಲಿ ಉಪನ್ಯಾಸ ನಡೆಯಲಿದೆ ಎಂದು ಅಜೇಯ ಸಂಸ್ಕೃತಿ ಬಳಗದ ಅಧ್ಯಕ್ಷ ರಾಮಾಚಾರ್ ತಿಳಿಸಿದರು. ‘ಇನ್ನು ಮಲಗಿದರೆ ಏಳುವಾಗ ಭಾರತ ಇರುವುದಿಲ್ಲ’ ಶೀರ್ಷಿಕೆ ಅಡಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ನೀಡಲಿದ್ದಾರೆ ಎಂದು ಯುವ ಬ್ರಿಗೇಡ್ ಪ್ರಮುಖ ವಿನಯ್ ತಿಳಿಸಿದರು.

ವುಶು ಕ್ರೀಡಾಕೂಟಕ್ಕೆ ಶಿವಮೊಗ್ಗದ 18 ಯುವತಿಯರು
SHIMOGA : ಆ.29ರಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ
ಭಾರತೀಯ ಕ್ರೀಡಾ ಪ್ರಾಧಿಕಾರ ಮಹಿಳೆಯರಿಗಾಗಿ ಖೇಲೋ ಇಂಡಿಯಾ ಮಹಿಳಾ ವುಶು ಕ್ರೀಡಾಕೂಟ ಆಯೋಜಿಸಿದೆ. ಶಿವಮೊಗ್ಗದ ಜಿಲ್ಲೆಯ ವಿವಿಧ ಶಾಲೆಗಳ 18 ಯುವತಿಯರು ಭಾಗಿಯಾಗಲಿದ್ದಾರೆ ಎಂದು ಜಿಲ್ಲಾ ವುಶು ಅಸೋಸಿಯೇಷನ್ ಅಧ್ಯಕ್ಷ ಅಬ್ದುಲ್ ಘನಿ ತಿಳಿಸಿದರು. ಈ ಕ್ರೀಡೆ ರಾಷ್ಟ್ರೀಯ ಪ್ರಾಧಾನ್ಯತೆ ಸಿಕ್ಕಿದೆ. ಅಂತಾರಾಷ್ಟ್ರೀಯ ಕ್ರೀಡೆಯಾಗಿ ಬೆಳೆಯುತ್ತಿದೆ ಎಂದರು.

ಶಿವಮೊಗ್ಗದಲ್ಲಿ ಮೂರು ದಿನ ರಾಯರ ಆರಾಧನೆ
SHIMOGA : ನಗರದ ಬೊಮ್ಮನಕಟ್ಟೆ ದೇವಂಗಿ ರತ್ನಾಕರ ಲೇಔಟ್ನಲ್ಲಿರುವ
ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆ.31ರಿಂದ ಸೆ.2ರವರೆಗೆ ಮೂರು ದಿನ ಶ್ರೀ ರಾಘವೇಂದ್ರರ 352ನೇ ಆರಾಧನ ಮಹೋತ್ಸವ ನಡೆಯಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಆ.30ರಂದು ಸಂಜೆ ಗೋಪೂಜೆ, ಧ್ವಜಾರೋಹಣ, ಧನ, ಧಾನ್ಯ ಪೂಜೆ, ಮಹಾ ಮಂಗಳಾರತಿ ನಡೆಯಲಿದೆ. ಆ.31ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ, ಸೆ.1ರಂದು ಮಧ್ಯಾರಾಧನೆ, ಸೆ.2ರಂದು ಉತ್ತರಾರಾಧನೆ ನಡೆಯಲಿದೆ. ಮೂರು ದಿನ ಪ್ರವಚನಗಳು (Lecture) ನಡೆಯಲಿದೆ ಎಂದು ತಿಳಿಸಿದರು.
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















