ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 AUGUST 2023
ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮಹಿಳೆ ದೂರು

SHIMOGA : ಫೇಸ್ಬುಕ್ನಲ್ಲಿ (Facebook) ಅವಹೇಳನ ಮಾಡಿದ
ಆರೋಪ ಸಂಬಂಧ ಚಕ್ರವರ್ತಿ ಸೂಲಿಬೆಲೆ (Chakravathi Sulibele) ವಿರುದ್ಧ ಮಹಿಳೆಯೊಬ್ಬರು (Woman) ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೆಪಿಸಿಸಿ ಸಾಮಾಜಿಕ ಜಲಾತಾಣ ವಿಭಾಗದ ಸೌಗಂಧಿಕಾ.ಎಸ್.ಆರ್ ಅವರಿಗೆ ವೈಯಕ್ತಿಕ ತೇಜೋವಧೆ ಮಾಡಲಾಗಿದೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ. ಈ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆಯರೊಂದಿಗೆ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ.
ಇದನ್ನೂ ಓದಿ – ನಿಧಿ ಆಸೆ, ಬೆಂಗಳೂರಿನ ವ್ಯಕ್ತಿಗೆ ಶಿವಮೊಗ್ಗದಲ್ಲಿ ಲಕ್ಷ ಲಕ್ಷ ರೂ. ವಂಚನೆ, ಹೇಗಾಯ್ತು ಮೋಸ?

ಎನ್ಇಪಿ ರದ್ದು ವಿರುದ್ಧ ಪ್ರತಿಭಟನೆ

SHIMOGA : ಹೊಸ ಶಿಕ್ಷಣ ನೀತಿ (NEP) ರದ್ದುಗೊಳಿಸಿ ರಾಜ್ಯ
ಸರ್ಕಾರ ಕರ್ನಾಟಕದ ವಿದ್ಯಾರ್ಥಿಗಳನ್ನು ಕತ್ತಲೆಗೆ ದೂಡುತ್ತಿದೆ ಎಂದು ಆರೋಪಿಸಿ ABVP ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಮುಂದೆ ದೇಶಾದ್ಯಂತ ಎನ್ಇಪಿ ಶಿಕ್ಷಣ ವ್ಯವಸ್ಥೆ ಜಾರಿಗೆ ಬರಲಿದೆ. ಎನ್ಇಪಿ ರದ್ದುಗೊಳಿಸಿದರೆ, ಐಐಟಿ, ಐಐಎಂ ಸೇರಿದಂತೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನಕ್ಕೆ ತೆರಳಲು ರಾಜ್ಯದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ. ಎನ್ಇಪಿಯನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳುವುದು ಸರಿಯಲ್ಲ ಎಂದು ಆರೋಪಿಸಿದರು.
ಇದನ್ನೂ ಓದಿ – ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ ಕೇಸ್, ಚಿತ್ರದುರ್ಗದ ಇಬ್ಬರು ಅರೆಸ್ಟ್, ಆರೋಪಿಗಳ ಹಿನ್ನೆಲೆ ಏನು?

ಪಾಲಿಕೆ ವತಿಯಿಂದ ಕೊಟ್ಟಿಗೆ ತೆರವು ಕಾರ್ಯಾಚರಣೆ

SHIMOGA : ಮಹಾನಗರ ಪಾಲಿಕೆ (Mahanagara Palike) ಜಾಗದಲ್ಲಿ ಅರಣ್ಯ ಇಲಾಖೆ ನಿವೃತ್ತ
ನೌಕರರೊಬ್ಬರು ನಿರ್ಮಿಸಿಕೊಂಡಿದ್ದ ಕೊಟ್ಟಿಗೆಯನ್ನು ತೆರವು ಮಾಡಲಾಯಿತು. ವಿನೋಬನಗರ (Vinobanagara) 60 ಅಡಿ ರೆಸ್ತೆಯ 8ನೇ ತಿರುವಿನಲ್ಲಿ ಪೊಲೀಸರ ರಕ್ಷಣೆಯಲ್ಲಿ ಜೆಸಿಬಿ ಮೂಲಕ ಕೊಟ್ಟಿಗೆ ತೆರವುಗೊಳಿಸಲಾಯಿತು. ಅರಣ್ಯ ಇಲಾಖೆ ನಿವೃತ್ತ ನೌಕರ ಬೀರಪ್ಪ ಎಂಬುವವರು ಕೊಟ್ಟಿಗೆ ನಿರ್ಮಿಸಿಕೊಂಡಿದ್ದರು. ಇದರಲ್ಲಿ ಮೂರು ಹಸುಗಳನ್ನು ಸಾಕಿಕೊಂಡಿದ್ದರು. ಪಾಲಿಕೆ ಹಲವು ಬಾರಿ ನೊಟೀಸ್ ನೀಡಿದ್ದರು ಕೊಟ್ಟಿಗೆ ತೆರವುಗೊಳಿಸಿರಲಿಲ್ಲ. ಈ ಹಿನ್ನೆಲೆ ಅಧಿಕಾರಿಗಳು ಪೊಲೀಸ್ ಭದ್ರತೆಯಲ್ಲಿ ಇವತ್ತು ತೆರವು ಕಾರ್ಯಾಚರಣೆ ಮಾಡಿದರು.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















