ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಕರ್ನಾಟಕದ ಅನುದಾನ ಕೂಡಲೆ ಬಿಡುಗಡೆ ಮಾಡಬೇಕು

SHIMOGA : ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪ ನಿಲ್ಲಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯುವಲ್ಲಿ ಒಕ್ಕೂಟ ಸರ್ಕಾರ ಅಡ್ಡಿಯಾಗಬಾರದು. ಈ ಹಿನ್ನಲೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರಬೇಕಾದ ಅನುದಾನವನ್ನು ಕೂಡಲೆ ಬಿಡುಗಡೆ ಮಾಡಬೇಕು. ಬರ ಪರಿಹಾರ ನೀಡಬೇಕು. ತನ್ನ ಮನಸ್ಸಿಗೆ ತೋಚಿದಂತೆ ರಾಜ್ಯ ಸರ್ಕಾರಗಳು ಸಾಲ ಪಡೆಯುವುದನ್ನು ನಿಲ್ಲಿಸಬೇಕು. ಕೇಂದ್ರ ಪ್ರಾಯೋಜಿತ ಯೋಜನೆಗಳು ರಾಜ್ಯಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಒಕ್ಕೂಟ ಸರ್ಕಾರ ಮಧ್ಯಪ್ರವೇಶ ಮಾಡಬಾರದು ಎಂದು ಆಗ್ರಹಿಸಿದರು. ಮುಖಂಡರಾದ ಎಂ.ನಾರಾಯಣ, ಕೆ.ಪ್ರಭಾಕರನ್, ಎಂ. ಅನಂತರಾಮ್, ಕೆ.ಮಂಜಣ್ಣ, ತುಳಸೀಪ್ರಭ, ಜಾರ್ಜ್ ಸಲ್ಡಾನಾ, ಅಬ್ದುಲ್ ಸುಭಾನ್, ರೇಣುಕಮ್ಮ, ಮುನಿರಾಜು ಇದ್ದರು.
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ ⇓
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು







