Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಫಟಾಫಟ್‌ ನ್ಯೂಸ್‌ 8 AM – ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಟಾಪ್‌ 10 ನ್ಯೂಸ್

ಫಟಾಫಟ್‌ ನ್ಯೂಸ್‌ 8 AM – ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಟಾಪ್‌ 10 ನ್ಯೂಸ್

23/05/2023 7:12 AM
ನಿತಿನ್‌ ಕೈದೊಟ್ಲು

Good Morning Shivamogga

Fatafat-Morning-8-am-update

ಇದನ್ನೂ ಓದಿ – ದಿನ ಭವಿಷ್ಯ | ಇವತ್ತು ಈ ರಾಶಿಯವರು ಪೊಲೀಸ್‌ ಠಾಣೆ ಮೆಟ್ಟಿಲೇರಬೇಕಾಗುತ್ತದೆ, ಯಾವ್ಯಾವ ರಾಶಿಗೆ ಈ ದಿನ ಹೇಗಿದೆ?

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಸಚಿವ ಸ್ಥಾನ ನೀಡದಿದ್ದರೆ ಭದ್ರಾವತಿಯಲ್ಲಿ ಹೋರಾಟ

ZP-Member-Manishekar-Shadakshari-urge-minister-post-for-Sangameshwara

SHIMOGA : ಭದ್ರಾವತಿ ಶಾಸಕ ಸಂಗಮೇಶ್ವರ್‌ ಅವರಿಗೆ ಸಚಿವ ಸ್ಥಾನ FATAFAT NEWS 1 jpgನೀಡಬೇಕು. ಇಲ್ಲವಾದಲ್ಲಿ ಕ್ಷೇತ್ರದಲ್ಲಿ ಹೋರಾಟ ನಡೆಸಲಾಗುತ್ತದೆ ಎಂದು ಸಂಗಮೇಶ್ವರ್‌ ಅವರ ಬೆಂಬಲಿಗರು ಮತ್ತು ಕಾಂಗ್ರೆಸ್‌ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಷಡಾಕ್ಷರಿ, ಮಣಿಶೇಖರ್‌, ಪ್ರಮುಖರಾದ ರವಿಕುಮಾರ್‌ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

ಇದನ್ನೂ ಓದಿ – ʼಮಂತ್ರಿ ಆಗ್ತಾರೆ ಅಂತಾ ಜನ ಮತ ನೀಡಿದ್ದಾರೆ, ಕೈ ತಪ್ಪಿದರೆ ಹೋರಾಟಕ್ಕೆ ಸಿದ್ಧವಾಗಲಿದೆ ರೂಪುರೇಷೆʼ

Shivamogga Live | Number 1 Website

ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಪ್ರತಿಭಾ ಪುರಸ್ಕಾರ

SHIMOGA : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ FATAFAT NEWS 2 jpgವತಿಯಿಂದ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90 ಮೇಲ್ಪಟ್ಟು ಅಂಕ ಪಡೆದವರಿಗೆ ರಾಜ್ಯ ಸಂಘದಿಂದ ಮತ್ತು ಶೇ.80% ಮೇಲ್ಪಟ್ಟು ಅಂಕ ಪಡೆದವರಿಗೆ ಜಿಲ್ಲಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮಾಡಲು ನಿರ್ಣಯಿಸಲಾಗಿದೆ. ಮಕ್ಕಳ ಅಂಕಪಟ್ಟಿ, ಸದಸ್ಯತ್ವ ಕಾರ್ಡ್ ಜೆರಾಕ್ಸ್, ಆಧಾರ್ ಕಾರ್ಡ್ ಪ್ರತಿಯೊಂದಿಗೆ ಜಿಲ್ಲಾ ಸಂಘದ ಅಧ್ಯಕ್ಷರು / ಕಾರ್ಯದರ್ಶಿ ಬಳಿ ಮೇ 25ರೊಳಗೆ ತಲುಪಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ಅರುಣ್ ವಿ.ಟಿ ತಿಳಿಸಿದ್ದಾರೆ.

Shivamogga Live | Number 1 Website

ಶಿವಮೊಗ್ಗದಲ್ಲಿ ಸಿಹಿ ಹಂಚಿದ ವಕೀಲರು

Shimoga Advocates distribute sweets as Siddaramaiah takes charge as CM

SHIMOGA : ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, FATAFAT NEWS 3 jpgಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ವಕೀಲರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಭವನದಲ್ಲಿ ಸಿಹಿ ಹಂಚಲಾಯಿತು. ಕೆಪಿಸಿಸಿ ಸಂಚಾಲಕ ಎಸ್.ಎನ್. ಮೂರ್ತಿ, ಹಿರಿಯ ವಕೀಲರಾದ ಜೆ. ಸೋಮಶೇಖರ್, ಹರಿಪ್ರಸಾದ್ ಕೆ.ಎನ್, ಭರತ್ ಬೆಳ್ಳಿಯಪ್ಪ, ವೈ.ಬಿ. ಚಂದ್ರಕಾಂತ್, ಪೂರ್ಣೇಶ್, ಚಂದ್ರಕುಮಾರ್ ಮತ್ತಿತರರಿದ್ದರು.

Shivamogga Live | Number 1 Website

ಜೈಲ್‌ ಸರ್ಕಲ್‌ನಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ

Protest-in-Jail-Circle-Against-Smart-city-officers

SHIMOGA : ಜೈಲ್‌ ಸರ್ಕಲ್‌ನಲ್ಲಿರುವ ಕರ್ನಾಟಕದ ಧ್ವಜ ಸ್ತಂಭ ತೆರವು FATAFAT NEWS 4 jpgಮಾಡಲು ಮುಂದಾದ ಸ್ಮಾರ್ಟ್‌ ಸಿಟಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಯಿತು. ಧ್ವಜ ಸ್ತಂಭ ತೆರವುಗೊಳಿಸುವುದನ್ನು ವಿರೋಧಿಸಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, ಪಾಲಿಕೆ ಸದಸ್ಯೆ ರೇಖಾ ರಂನಗಾಥ್‌ ಅವರು ಪ್ರತಿಭಟನೆಯಲ್ಲಿದ್ದರು. ಧ್ವಜ ಸ್ತಂಭದ ಕಟ್ಟೆಯನ್ನು ಜೆಸಿಬಿ ಮೂಲಕ ಒಡೆಯಲಾಗಿತ್ತು. ಪ್ರತಿಭಟನೆ ಹಿನ್ನೆಲೆ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ – ಜೈಲ್‌ ಸರ್ಕಲ್‌ನಲ್ಲಿ ದಿಢೀರ್‌ ಪ್ರತಿಭಟನೆ, ಟೈರ್‌ಗೆ ಬೆಂಕಿ ಹಚ್ಚಿ ಸ್ಮಾರ್ಟ್‌ ಸಿಟಿ ಅಧಿಕಾರಿಗಳ ವಿರುದ್ಧ ಘೋಷಣೆ, ಆಗಿದ್ದೇನು?

Shivamogga Live | Number 1 Website

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು

Car-hits-electric-pole-at-Taluve-village-in-Thirthahalli-Taluk

THIRTHAHALLI : ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್‌  FATAFAT NEWS 5 jpgಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್‌ ಯಾರಿಗೂ ತೊಂದರೆಯಾಗಿಲ್ಲ. ತಳುವೆಯ ಶಾಲೆ ಸಮೀಪ ಘಟನೆ ಸಂಭವಿಸಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದರು ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿಯಿಂದ ಕೊಪ್ಪ ಕಡೆಗೆ ತೆರಳುತ್ತಿದ್ದಾಗ ಅಪಘಾತವಾಗಿದೆ. ಕಾರಿನಲ್ಲಿ ಏರ್‌ ಬ್ಯಾಗ್‌ ಓಪನ್‌ ಆಗಿದ್ದರಿಂದ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ. ಅವರನ್ನು ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ – ತೀರ್ಥಹಳ್ಳಿಯಲ್ಲಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು

Shivamogga Live | Number 1 Website

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

Shivamogga Live | Number 1 Website

ನೆಜ್ಜೂರು ದೇವಸ್ಥಾನದ ಪ್ರತಿಷ್ಠಾಪನಾ ಮಹೋತ್ಸವ

SAGARA : ಮೇ 23 ರಿಂದ 25ರವರೆಗೆ ನೆಜ್ಜೂರು ಗಂಗಾ ಪರಮೇಶ್ವರಿ FATAFAT NEWS 6 jpgದೇವಸ್ಥಾನದ ಪ್ರತಿಷ್ಟಾಪನಾ ಮಹೋತ್ಸವ ನಡೆಯಲಿದೆ. 25 ಲಕ್ಷ ರೂ. ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ಪ್ರತಿಷ್ಠಾಪನಾ ಮಹೋತ್ಸವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಗಣ್ಯರಿಗೆ ಸನ್ಮಾನ, ಮೆರವಣಿಗೆ ನಡೆಯಲಿದೆ ಎಂದು ರಾಷ್ಟ್ರೀಯ ಮೀನುಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಡಿ.ರವಿಕುಮಾರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Shivamogga Live | Number 1 Website

ಬಂದೂಕು ಹಿಂಪಡೆಯುವಂತೆ ಪೊಲೀಸರ ಸೂಚನೆ

THIRTHAHALLI : ವಿಧಾನಸಭೆ ಚುನಾವಣೆ ಹಿನ್ನೆಲೆ ಪರವಾನಗಿ FATAFAT NEWS 7 jpgಹೊಂದಿರುವ ಬಂದೂಕುಗಳುನ್ನು ಪೊಲೀಸ್‌ ಠಾಣೆಯಲ್ಲಿ ಇರಿಸಲಾಗಿತ್ತು. ತೀರ್ಥಹಳ್ಳಿ ತಾಲೂಕಿನಲ್ಲಿ 880 ಬಂದೂಕುಗಳನ್ನು ಡೆಪಾಸಿಟ್‌ ಮಾಡಲಾಗಿತ್ತು. ಮೇ 23ರಿಂದ ಬಂದೂಕುಗಳನ್ನು ಪರವಾನಗಿ ಹೊಂದಿರುವವರಿಗೆ ಮರಳಿಸಲಾಗುತ್ತದೆ. ಆಧಾರ್‌ ಕಾರ್ಡ್‌ ನಂಬರ್‌, ಪಾಸ್‌ ಪೋರ್ಟ್‌ ಅಳತೆಯ ಫೋಟೊದೊಂದಿಗೆ ಬಂದು ಬಂದೂಕು ಹಿಂಪಡೆಯಬಹುದು ಎಂದು ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Shivamogga Live | Number 1 Website

ಮತದಾರರು, ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತಾ ಸಮಾವೇಶ

BY Vijayendra Felicitated in Shikaripura, BS Yedyurappa, BY Raghavendra were present

SHIKARIPURA : ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ FATAFAT NEWS 8 jpgಬಿ.ವೈ.ವಿಜಯೇಂದ್ರ ಅವರ ಗೆಲುವು ಹಿನ್ನೆಲೆ ಮತದಾರರು ಮತ್ತು ಕಾರ್ಯಕರ್ತರಿಗೆ ಕೃತಜ್ಞತಾ ಸಮಾರಂಭ ಆಯೋಜಿಸಲಾಗಿತ್ತು. ಶಿಕಾರಿಪುರದ ಮಂಗಳ ಭವನದ ಹಿಂಭಾಗ ಮೈದಾನದಲ್ಲಿ ಸಮಾರಂಭ ನಡೆಯಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೆ ವೇಳೆ ನೂತನ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ಸನ್ಮಾನಿಸಲಾಯಿತು.

Shivamogga Live | Number 1 Website

ಅಪಪ್ರಚಾರಕ್ಕೆ ಕಿವಿಗೊಡದೆ ತಕ್ಕ ಉತ್ತರ ಕೊಟ್ಟಿದ್ದಾರೆ

BS Yedyurappa and BY Raghavendra Speaking at Shikaripura

SHIKARIPURA : ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿ FATAFAT NEWS 9 jpgಬಿ.ವೈ.ವಿಜಯೇಂದ್ರ ವಿರುದ್ಧ ಅಪಪ್ರಚಾರ ನಡೆಸಲಾಯಿತು. ಆದರೆ ಮತದಾರರು ಇದ್ಯಾವುದಕ್ಕು ಕಿವಿಗೊಡದೆ ವಿಜಯೇಂದ್ರ ಅವರನ್ನು ಗೆಲ್ಲಿಸಿ ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಕೃತಜ್ಞತಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲೂಕು ಕಚೇರಿಯಲ್ಲಿ ಶಾಸಕರ ಕಚೇರಿ ತೆರೆಯಲಾಗುತ್ತದೆ. ಅಲ್ಲಿ ವಿಜಯೇಂದ್ರ ಅವರು ಜನರ ಅಹವಾಲು ಆಲಿಸಲಿದ್ದಾರೆ. ಮುಂದೆ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಸವಾಲಾಗಿ ಸ್ವೀಕರಿಸಿ ಪಕ್ಷವನ್ನು ಗೆಲ್ಲಿಸಬೇಕಿದೆ ಎಂದರು.

Shivamogga Live | Number 1 Website

ವಿಡಿಯೋ ಮಾಡಿ ಅಪಪ್ರಚಾರ ನಡೆಸಿದ್ದರು

BY Ragahavendra spoke at Thanks giving ceremony after Legislative Polls Win in Shikaripura

SHIKARIPURA : ವಿಧಾನಸಭೆ ಚುನಾವಣೆ ವೇಳೆ ನಮ್ಮ ಕುಟುಂಬದ FATAFAT NEWS 10 jpgವಿರುದ್ಧ ವಿಡಿಯೋಗಳನ್ನು ಮಾಡಿ ಅಪಪ್ರಚಾರ ನಡೆಸಲಾಯಿತು. ಆದರೆ ಕಾರ್ಯಕರ್ತರು, ಮತದಾರರು ಏಳು ಸುತ್ತಿನ ಕೋಟೆಯ ಹಾಗೆ ನಿಂತು ಶ್ರೀರಕ್ಷೆ ನೀಡಿದ್ದಾರೆ. ಸರ್ಕಾರ ಬದಲಾಗಿದ್ದರೂ ಕ್ಷೇತ್ರದ ಅಭಿವೃದ್ಧಿಗೆ ಹಿನ್ನಡೆ ಆಗದಂತೆ ಕೆಲಸ ನಿರ್ವಹಿಸುತ್ತೇವೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

Shivamogga Live | Number 1 Website

SHIVAMOGGA-LIVE-NITIN-KAIDOTLU

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article DINA-BHAVISHYA ದಿನ ಭವಿಷ್ಯ | ಇವತ್ತು ಈ ರಾಶಿಯವರು ಪೊಲೀಸ್‌ ಠಾಣೆ ಮೆಟ್ಟಿಲೇರಬೇಕಾಗುತ್ತದೆ, ಯಾವ್ಯಾವ ರಾಶಿಗೆ ಈ ದಿನ ಹೇಗಿದೆ?
Next Article Petrol-Tanker-Upside-at-nagara-in-Hosanagara ಹೈವೆ ರಸ್ತೆಯಲ್ಲಿ ಪೆಟ್ರೋಲ್ ಟ್ಯಾಂಕರ್‌ ಪಲ್ಟಿ

ಇದನ್ನೂ ಓದಿ

GOOD-MORNING-SHIVAMOGGA-NEWS-UPDATE
1 MINUTE NEWS

ಶುಭೋದಯ ಶಿವಮೊಗ್ಗ – ಜಿಲ್ಲೆಯ ಪ್ರಮುಖ ಸುದ್ದಿಗಳು ಒಂದೇ ಕ್ಲಿಕ್‌ನಲ್ಲಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
28/04/2025
9-AM-FATAFAT-NEWS.webp
1 MINUTE NEWSBHADRAVATHISAGARA

ಅಡಿಕೆ ಖೇಣಿದಾರರ ಸಮಾವೇಶ | ಕಾಗೋಡು ತಿಮ್ಮಪ್ಪಗೆ ಸನ್ಮಾನ – 3 ಫಟಾಫಟ್‌ ಸುದ್ದಿಗಳು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/03/2025
5-PM-FATAFAT-NEWS.webp
1 MINUTE NEWSSHIVAMOGGA CITY

ಅರ್ಚಕ ವಿನಾಯಕ ಬಾಯರಿ ನಿಧನ | ನಾಳೆ ಜನತಾ ಪ್ರಣಾಳಿಕ ಬಿಡುಗಡೆ – 5 ಫಟಾಫಟ್‌ ಸುದ್ದಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
01/03/2025
9-AM-FATAFAT-NEWS.webp
1 MINUTE NEWSSHIVAMOGGA CITY

ಶಿವಮೊಗ್ಗದ ಪತ್ರಕರ್ತರಿಗೆ ಪ್ರಶಸ್ತಿ ಪ್ರಕಟ | ಮುದಸ್ಸಿರ್‌ ಅಹ್ಮದ್‌ಗೆ ಪ್ರಶಸ್ತಿ ಪ್ರದಾನ | ಬೆಜ್ಜವಳ್ಳಿಯಲ್ಲಿ ಜನ ಸಂಪರ್ಕ ಸಭೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
01/03/2025
9-AM-FATAFAT-NEWS.webp
1 MINUTE NEWS

ತುಂಗಾ ಡ್ಯಾಂಗೆ 11 ಲಕ್ಷ ಮೀನು ಮರಿ | ಆಶ್ರಯ ಸಮಿತಿಗೆ ನೇಮಕ | ವಾಹನ ಡಿಕ್ಕಿ, ಜಿಂಕೆ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/02/2025
GOOD-MORNING-SHIVAMOGGA-NEWS-UPDATE
1 MINUTE NEWS

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/12/2024
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?