Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದ ಫಟಾಫಟ್‌ ಸುದ್ದಿಗಳು, ಇವತ್ತು ಎಲ್ಲೆಲ್ಲಿ ಏನೇನಾಯ್ತು? 3 ನಿಮಿಷದಲ್ಲಿ 10 ಸುದ್ದಿಗಳನ್ನು ಓದಿ

ಶಿವಮೊಗ್ಗದ ಫಟಾಫಟ್‌ ಸುದ್ದಿಗಳು, ಇವತ್ತು ಎಲ್ಲೆಲ್ಲಿ ಏನೇನಾಯ್ತು? 3 ನಿಮಿಷದಲ್ಲಿ 10 ಸುದ್ದಿಗಳನ್ನು ಓದಿ

24/05/2023 7:08 PM
ನಿತಿನ್‌ ಕೈದೊಟ್ಲು

FATAFAT  SHIMOGA NEWS

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

240523 Fatafat News Update Shimoga Live

ಡಿಸಿಸಿ ಬ್ಯಾಂಕಿಗೆ ಮಂಜುನಾಥಗೌಡ ರೀ ಎಂಟ್ರಿ

rm Manjunatha gowda at DCC Bank

SHIMOGA : ಆರ್.ಎಂ.ಮಂಜುನಾಥಗೌಡ ಅವರನ್ನು ಡಿಸಿಸಿ ಬ್ಯಾಂಕ್ FATAFAT NEWS 1 jpgನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಿದ್ದ ಜಂಟಿ ನಿಬಂಧಕರ ಅದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಇವತ್ತು ನ್ಯಾಯಾಲಯದ ಆದೇಶದ ಪ್ರತಿಯನ್ನು ಆರ್.ಎಂ.ಮಂಜುನಾಥ ಗೌಡ ಅವರು ಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕರಿಗೆ ತಲುಪಿಸಿದರು. ಈ ಮೂಲಕ ತಾವು ಪುನಃ ನಿರ್ದೇಶಕರಾಗಿ ಮುಂದುವರೆಯುವುದಾಗಿ ತಿಳಿಸಿದರು. ಇದೆ ವೇಳೆ ಹಲವರು ಆರ್.ಎಂ.ಮಂಜುನಾಥಗೌಡ ಅವರಿಗೆ ಅಭಿನಂದನೆ ಸಲ್ಲಿಸಿದರು.

ಕಾರು ಡಿಕ್ಕಿ ಹೊಡೆದು ಆಟೋ ಪಲ್ಟಿ

Auto Car Incident at LLR Road

SHIMOGA : ಕಾರು ಡಿಕ್ಕಿ ಹೊಡೆದು ಆಟೋ ಪಲ್ಟಿಯಾಗಿದೆ. ಶಿವಮೊಗ್ಗದ FATAFAT NEWS 2 jpgಎಲ್‌ಎಲ್‌ಆರ್‌ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಆಟೋ ಶುಭಂ ಹೊಟೇಲ್‌ ಕಡೆಯಿಂದ ಜೈಲ್‌ ಸರ್ಕಲ್‌ ಕಡೆಗೆ ತೆರಳುತ್ತಿತ್ತು. ದುರ್ಗಿಗುಡಿ ರಸ್ತೆ ಕಡೆಯಿಂದ ಬಂದ ನ್ಯಾನೋ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಆಟೋದಲ್ಲಿದ್ದ ಪ್ರಯಾಣಿಕ ಮತ್ತು ಚಾಲಕನಿಗೆ ನೋವಾಗಿದೆ. ಸ್ಥಳೀಯರು ಇಬ್ಬರನ್ನು ರಕ್ಷಿಸಿದರು.

ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಅಪಘಾತ

Cars Mishap at Sakrebyle in Shimoga

SHIMOGA : ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು FATAFAT NEWS 3 jpgಡಿಕ್ಕಿ ಹೊಡೆದಿದೆ. ಇದರಿಂದ ಎರಡು ಕಾರು ರಸ್ತೆ ಪಕ್ಕಕ್ಕೆ ಹೋಗಿ ತಿರುಗಿ ನಿಂತಿವೆ. ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯ ಸಕ್ರೆಬೈಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಫೋರ್ಡ್‌ ಇಕೋ ಕಾರಿಗೆ ಕಿಯಾ ಕಾರು ಡಿಕ್ಕಿ ಹೊಡೆದಿದೆ. ಎರಡು ಕಾರುಗಳಿಗು ಹಾನಿಯಾಗಿದೆ. ಅದೃಷ್ಟವಶಾತ್‌ ಯಾರಿಗೂ ತೊಂದರೆಯಾಗಿಲ್ಲ. (ಫೋಟೊ, ಮಾಹಿತಿ : ಸಂಜು ಗೌಡ)

ಶಿವಮೊಗ್ಗ – ಭದ್ರಾವತಿ ಅಭಿವೃ‍ದ್ಧಿಗೆ ಪ್ರಾಧಿಕಾರಕ್ಕೆ ಡಿಸಿ ಅಧ್ಯಕ್ಷರು

Shimoga-DC-Dr-selamani-IAS-in-Press-Trust

SHIMOGA : ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ FATAFAT NEWS 4 jpgಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರ ವಹಿಸಿಕೊಂಡರು. ಸರ್ಕಾರದ ಸುತ್ತೋಲೆ ಅನ್ವಯ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿ, ಪ್ರಾಧಿಕಾರದ ಕೆಲಸ ಕಾರ್ಯಗಳು, ಅರೆ ಸರ್ಕಾರಿ ಪತ್ರಗಳು, ಗೌಪ್ಯ ಪತ್ರಗಳನ್ನು ಜಿಲ್ಲಾಧಿಕಾರಿ ಅವರ ಗಮನಕ್ಕೆ ತರಬಹುದು ಎಂದು ತಿಳಿಸಿದ್ದಾರೆ.

ರೈಲ್ವೆ ಯೋಜನೆಗಳ ಕುರಿತು ಮಹತ್ವದ ಮೀಟಿಂಗ್

BY Raghavendra meeting with railway officials

HUBBALLI : ಶಿವಮೊಗ್ಗ ಜಿಲ್ಲೆಯ ರೈಲ್ವೆ ಯೋಜನೆಗಳ ಕುರಿತು ಸಂಸದ FATAFAT NEWS 5 jpgಬಿ.ವೈ.ರಾಘವೇಂದ್ರ ಅವರು ನೈಋತ್ಯ ರೈಲ್ವೆ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಿದರು. ಶಿವಮೊಗ್ಗ, ಸಾಗರ, ತಾಳಗುಪ್ಪ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ, ರೈಲುಗಳ ವೇಳಾಪಟ್ಟಿಯಲ್ಲಿ ಸಣ್ಣಪುಟ್ಟ ಬದಲಾವಣೆ, ಗೂಡ್ಸ್‌ ಯಾರ್ಡ್‌ ಅಭಿವೃದ್ಧಿ, ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗ, ವಂದೇ ಭಾರತ್‌ ರೈಲು ಆರಂಭದ ಕುರಿತು ಚರ್ಚೆ ನಡೆಸಿದರು. ರೈಲ್ವೆಯ ಮಹಾ ಪ್ರಬಂಧಕ ಸಂಜೀವ್‌ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.‌

ಶಿವಮೊಗ್ಗ – ಬೆಂಗಳೂರು ವಂದೇ ಭಾರತ್‌ ರೈಲಿಗೆ ಮನವಿ

MP-BY-Raghavendra-urges-for-Vande-Bharat-Express

HUBBALLI : ಭವಿಷ್ಯದಲ್ಲಿ ವಂದೇ ಭಾರತ್ ರೈಲುಗಳು ಶಿವಮೊಗ್ಗದಲ್ಲಿ FATAFAT NEWS 6 jpgಕಾರ್ಯಾಚರಣೆ ಮಾಡಲು ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ರೈಲ್ವೆ ಅಧಿಕಾರಿಗಳಿಗೆ ಮನವಿ ಮಾಡಿದರು. ಬೆಂಗಳೂರು ಮತ್ತು ಶಿವಮೊಗ್ಗ ನಗರಗಳ ಮಧ್ಯೆ ವಂದೇ ಭಾರತ ರೈಲು ಸೇವೆ ಆರಂಭಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಹುಬ್ಬಳ್ಳಿಯಲ್ಲಿ ನಡೆದ ರೈಲ್ವೆ ಅಧಿಕಾರಿಗಳ ಸಭೆಯಲ್ಲಿ ಸಂಸದ ರಾಘವೇಂದ್ರ ಮನವಿ ಮಾಡಿದ್ದು, ಈ ಕುರಿತಂತೆ ರೈಲ್ವೆ ಮಂಡಳಿಯ ಅನುಮೋದನೆ ಪಡೆಯಲು ಕ್ರಮ ಕೈಗೊಳ್ಳುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಫುಲ್‌ ನ್ಯೂಸ್‌ ಓದಲು ಇಲ್ಲಿ ಕ್ಲಿಕ್‌ ಮಾಡಿ – ಶಿವಮೊಗ್ಗ – ಬೆಂಗಳೂರು ಮಧ್ಯೆ ಸಂಚರಿಸುತ್ತಾ ವಂದೇ ಭಾರತ್‌ ರೈಲು? ಸಂಸದ ರಾಘವೇಂದ್ರ ಮೀಟಿಂಗ್‌, ಏನೇನು ಚರ್ಚೆಯಾಯ್ತು?

ಬೇಳೂರು ನಡೆಗೆ ಕನ್ನಡಿಗರಿಂದ ಶಹಬ್ಬಾಸ್‌ಗಿರಿ

BANGALORE : ಕಾಂಗ್ರೆಸ್‌ ಸರ್ಕಾರದ ಮೊದಲ ಅಧಿವೇಶನ FATAFAT NEWS 7 jpgನಡೆಯುತ್ತಿದೆ. ಶಾಸಕರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸದನದಲ್ಲಿ ಮರಾಠಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲು ಮುಂದಾದ ಖಾನಾಪುರ ಕ್ಷೇತ್ರದ ಶಾಸಕ ವಿಠ್ಠಲ ಹಲಗೆಕರ್‌ ಅವರಿಗೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತಡೆಯೊಡ್ಡಿದ್ದಾರೆ. ಕನ್ನಡ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿ ಎಂದು ತಿಳಿಸಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕನ್ನಡಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಂತರಘಟ್ಟಮ್ಮ ದೇವಿ ರಾಜಬೀದಿ ಮೆರವಣಿಗೆ

Shimoga Hosamane Antaraghattamma temple Procession

SHIMOGA : ಶಿವಮೊಗ್ಗದ ಹೊಸಮನೆ ಬಡಾವಣೆಯ ಅಂತರಘಟ್ಟಮ್ಮ FATAFAT NEWS 8 jpgಜಾತ್ರೆ ಹಿನ್ನೆಲೆ ಉತ್ಸವ ಮೂರ್ತಿಯ ರಾಜಬೀದಿ ಉತ್ಸವ ನಡೆಯಿತು. ದುರ್ಗಿಗುಡಿ, ಜೈಲ್‌ ಸರ್ಕಲ್‌ ಮಾರ್ಗವಾಗಿ ಹೊಸಮನೆ ಬಡಾವಣೆಗೆ ಮೆರವಣಿಗೆ ನಡೆಯಿತು. ಭಕ್ತರು ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಕಲಾ ತಂಡಗಳು, ದೊಡ್ಡ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. ರಸ್ತೆಯ ಇಕ್ಕೆಲದಲ್ಲಿ ನಿಂತು ಜನರು ದೇವಿಗೆ ನಮನ ಸಲ್ಲಿಸಿದರು.

SHIVAMOGGA-LIVE-NITIN-KAIDOTLU

ಹೊಸಮನೆಯಲ್ಲಿ ಜಾತ್ರೆ, ಭಕ್ತಿಯಿಂದ ಪೂಜೆ

SHIMOGA : ಹೊಸಮನೆ ಬಡಾವಣೆಯ ಅಂತರಘಟ್ಟಮ್ಮ ದೇವಿಯ FATAFAT NEWS 9 jpgಜಾತ್ಸೋತ್ಸವ ವೈಭವದಿಂದ ನೆರೆವೇರಿತು. ದೊಡ್ಡ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು. “ಕೋವಿಡ್‌ ಹಿನ್ನೆಲೆ ಕಳೆದ ಎರಡು ವರ್ಷದಿಂದ ಉತ್ಸವ ನಡೆದಿರಲಿಲ್ಲ. ದೇವಿಯ ಕೃಪೆಯಿಂದ ಕೋವಿಡ್‌ನಿಂದಾಗಿ ಈ ಭಾಗದಲ್ಲಿ ಯಾವುದೆ ಸಾವು ನೋವು ಆಗಲಿಲ್ಲ. ಈ ಜಾತ್ರೋತ್ಸವಕ್ಕೆ 400 ವರ್ಷಗಳಷ್ಟು ಇತಿಹಾಸವಿದೆ” ಎಂದು ದೇವಸ್ಥಾನದ ಪ್ರಮುಖರಾದ ಕೆ.ದೇವೇಂದ್ರಪ್ಪ ತಿಳಿಸಿದರು.

ಕೆಂಡ ಹಾಯ್ದು ಭಕ್ತಿ ಸಮಪರ್ಣೆ

Hosamange Antaraghattamma temple kendarchane

SHIMOGA : ಶಿವಮೊಗ್ಗದ ಹೊಸಮನೆ ಬಡಾವಣೆಯ ಅಂತರಘಟ್ಟಮ್ಮ FATAFAT NEWS 10 jpgದೇವಸ್ಥಾನದ ಜಾತ್ರೆ ಮಹೋತ್ಸವದ ಹಿನ್ನೆಲೆ ಕೆಂಡಾರ್ಚನೆ ನೆರವೇರಿಸಲಾಯಿತು. ಭಕ್ತರು ಹರಕೆ ಹೊತ್ತು ಕೆಂಡ ಹಾಯ್ದು ಭಕ್ತಿ ಸಮರ್ಪಣೆ ಮಾಡಿದರು. ಕೆಲವರು ಪೂರ್ಣ ಕುಂಭದೊಂದಿಗೆ ಕೆಂಡ ಹಾಯ್ದರು. ಮಾಜಿ ಸಚಿವ ಕೆ.ಎಸ್.ಈ‍ಶ್ವರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ.ಕಾಂತೇಶ್‌ ಜಾತ್ರೆಯಲ್ಲಿ ಭಾಗಹಿಸಿದ್ದರು.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article MP-BY-Raghavendra-urges-for-Vande-Bharat-Express ಶಿವಮೊಗ್ಗ – ಬೆಂಗಳೂರು ಮಧ್ಯೆ ಸಂಚರಿಸುತ್ತಾ ವಂದೇ ಭಾರತ್‌ ರೈಲು? ಸಂಸದ ರಾಘವೇಂದ್ರ ಮೀಟಿಂಗ್‌, ಏನೇನು ಚರ್ಚೆಯಾಯ್ತು?
Next Article Areca Price in Shimoga APMC ಅಡಕೆ ಧಾರಣೆ | 24 ಮೇ 2023 | ಯಾವ್ಯಾವ ಮಾರುಕಟ್ಟೆಗಳಲ್ಲಿ ಇವತ್ತು ಎಷ್ಟಿದೆ ಅಡಕೆ ರೇಟ್?

ಇದನ್ನೂ ಓದಿ

GOOD-MORNING-SHIVAMOGGA-NEWS-UPDATE
1 MINUTE NEWS

ಶುಭೋದಯ ಶಿವಮೊಗ್ಗ – ಜಿಲ್ಲೆಯ ಪ್ರಮುಖ ಸುದ್ದಿಗಳು ಒಂದೇ ಕ್ಲಿಕ್‌ನಲ್ಲಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
28/04/2025
9-AM-FATAFAT-NEWS.webp
1 MINUTE NEWSBHADRAVATHISAGARA

ಅಡಿಕೆ ಖೇಣಿದಾರರ ಸಮಾವೇಶ | ಕಾಗೋಡು ತಿಮ್ಮಪ್ಪಗೆ ಸನ್ಮಾನ – 3 ಫಟಾಫಟ್‌ ಸುದ್ದಿಗಳು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/03/2025
5-PM-FATAFAT-NEWS.webp
1 MINUTE NEWSSHIVAMOGGA CITY

ಅರ್ಚಕ ವಿನಾಯಕ ಬಾಯರಿ ನಿಧನ | ನಾಳೆ ಜನತಾ ಪ್ರಣಾಳಿಕ ಬಿಡುಗಡೆ – 5 ಫಟಾಫಟ್‌ ಸುದ್ದಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
01/03/2025
9-AM-FATAFAT-NEWS.webp
1 MINUTE NEWSSHIVAMOGGA CITY

ಶಿವಮೊಗ್ಗದ ಪತ್ರಕರ್ತರಿಗೆ ಪ್ರಶಸ್ತಿ ಪ್ರಕಟ | ಮುದಸ್ಸಿರ್‌ ಅಹ್ಮದ್‌ಗೆ ಪ್ರಶಸ್ತಿ ಪ್ರದಾನ | ಬೆಜ್ಜವಳ್ಳಿಯಲ್ಲಿ ಜನ ಸಂಪರ್ಕ ಸಭೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
01/03/2025
9-AM-FATAFAT-NEWS.webp
1 MINUTE NEWS

ತುಂಗಾ ಡ್ಯಾಂಗೆ 11 ಲಕ್ಷ ಮೀನು ಮರಿ | ಆಶ್ರಯ ಸಮಿತಿಗೆ ನೇಮಕ | ವಾಹನ ಡಿಕ್ಕಿ, ಜಿಂಕೆ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/02/2025
GOOD-MORNING-SHIVAMOGGA-NEWS-UPDATE
1 MINUTE NEWS

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/12/2024
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?