SHIMOGA NEWS – ಜಿಲ್ಲೆಯ ಟಾಪ್‌ 10 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

FATAFAT-NEWS-BAND.webp

ಶಾಮನೂರು ಶಿವಶಂಕರಪ್ಪಗೆ ಗುರುಬಸವಶ್ರೀ ಪ್ರಶಸ್ತಿ

FATAFAT-NEWS-1ಶಿವಮೊಗ್ಗ : ಬೆಕ್ಕಿನ ಕಲ್ಮಠದ ಗುರುಬಸವ ಭವನದಲ್ಲಿ ಜ.25 ಮತ್ತು 26ರಂದು ಶ್ರೀ ಗುರುಬಸವ ಮಹಾಸ್ವಾಮಿಯವರ 112ನೇ ಪುಣ್ಯ ಸ್ಮರಣೋತ್ಸವ, ಶರಣ ಸಾಹಿತ್ಯ ಸಮ್ಮೇಳನ, ಭಾವೈಕ್ಯ ಸಮ್ಮೇಳನ ಆಯೋಜಿಸಲಾಗಿದೆ. ಜ.25ರಂದು ಬೆಳಗ್ಗೆ ವಚನ ಗಾಯನ ಸ್ಪರ್ಧೆ, ವಚನ ಕಂಠಪಾಠ ಸ್ಪರ್ಧೆ ನಡೆಯಲಿದೆ. ಸಂಜೆ ಸಾಹಿತ್ಯ ಸಮ್ಮೇಳನ, ಅಲ್ಲಮಪ್ರಭು, ಅಕ್ಕಮಹಾದೇವಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಜ.26ರಂದು ಭಾವೈಕ್ಯ ಸಮ್ಮೇಳನ ನಡೆಯಲಿದೆ. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ಗುರುಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಬೆಕ್ಕಿನ ಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ತಿಳಿಸಿದ್ದಾರೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment