ಬ್ಯಾಕೋಡಿನಲ್ಲಿ ಕಳವು ಪ್ರಕರಣ, ಆರೋಪಿ ಅರೆಸ್ಟ್
ಸಾಗರ : ಡಿಸೆಂಬರ್ನಲ್ಲಿ ಬ್ಯಾಕೋಡು ಸೇವಾ ಸಹಕಾರಿ ಸಂಘ ಮತ್ತು ಹಾಲೆಮನೆ ಜೈನ ಬಸದಿ ಕಳವು ಪ್ರಕರಣದ ಪ್ರಮುಖ ಆರೋಪಿ ಪಡುಬಿದ್ರಿ ಮೂಲದ ಜಾಹಿದ್ ಸಿನಾನ್ (48) ಎಂಬಾತನನ್ನು ಕಾರ್ಗಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತನಿಂದ 20 ಸಾವಿರ ರೂ. ನಗದು, ಜೈನ ಬಸದಿಯಲ್ಲಿ ದೋಚಿದ್ದ ಬಂಗಾರ ಸೇರಿ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಹುಡುಕಾಟ ನಡೆದಿದೆ. ತೀರ್ಥಹಳ್ಳಿ, ಉತ್ತರ ಕನ್ನಡ, ಉಡುಪಿ ಸೇರಿದಂತೆ ವಿವಿಧೆಡೆ ಸರ್ಕಾರಿ ಶಾಲೆಗಳ ಕಳವು ಪ್ರಕರಣಗಳಲ್ಲಿ ಈತನ ಕೈವಾಡ ಇರುವುದು ಗೊತ್ತಾಗಿದೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200