ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 14 ಡಿಸೆಂಬರ್ 2018
ಆರು ತಿಂಗಳಿಂದ ಅನಾರೋಗ್ಯಕ್ಕೀಡಾಗಿದ್ದ ಮಾಜಿ ಶಾಸಕ ಕರಿಯಣ್ಣ (74), ಇವತ್ತು ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಕರಿಯಣ್ಣ ಚಿಕಿತ್ಸೆ ಪಡೆಯುತ್ತಿದ್ದರು.
ಅನಾರೋಗ್ಯದ ನಡುವೆಯೂ ಬಿರುಸಿನ ಪ್ರಚಾರ
ಆರೋಗ್ಯದಲ್ಲಿ ಸಮಸ್ಯೆಯಿದ್ದರೂ, ಕಳೆದ ವಿಧಾನಸಭೆ ಚುನಾವಣೆ ಸಂದರ್ಭ, ಕರಿಯಣ್ಣ, ಬಿರುಸಿನ ಪ್ರಚಾರ ನಡೆಸಿದ್ದರು. ತಮ್ಮ ಮಗ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ತಿ ಡಾ.ಶ್ರೀನಿವಾಸ್ ಪರವಾಗಿ ಹಗಲು ರಾತ್ರಿಯನ್ನದೆ ಪ್ರಚಾರ ನಡೆಸಿದ್ದರು. ಆ ಬಳಿಕ ಕರಿಯಣ್ಣ ಹೊರಗೆ ಕಾಣಿಸಿಕೊಂಡಿದ್ದು ವಿರಳ.

ಮಾಜಿ ಶಾಸಕ ಕರಿಯಣ್ಣ ಕುರಿತ ಹತ್ತು ಪ್ರಮುಖಸಂಗತಿ
- ಲೆಕ್ಕಪರಿಶೋಧಕ ಇಲಾಖೆಯಲ್ಲಿ ಕರಿಯಣ್ಣ ಅವರುಗುಮಾಸ್ತರಾಗಿ ಕೆಲಸ ಮಾಡಿದ್ದರು.
- ಕಾಂಗ್ರೆಸ್ಪಕ್ಷದ ಹಿರಿಯ ಮುಖಂಡ ಕೆ.ಹೆಚ್.ಶ್ರೀನಿವಾಸ್ ಅವರು ಕರಿಯಣ್ಣ ಅವರನ್ನ ಕಾಂಗ್ರೆಸ್ ಪಕ್ಷಕ್ಕೆಕರೆತಂದು, ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ನಾಯಕನಾಗಿ ಗುರುತಿಸಿದರು.
- 1978ರಲ್ಲಿ ಕರಿಯಣ್ಣ ಅವರನ್ನು ಶಿವಮೊಗ್ಗ ನಗರಾಭಿವೃದ್ದಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.ಅಲ್ಲಿಂದ ಸಕ್ರಿಯ ರಾಜಕಾರಣ ಆರಂಭವಾಯಿತು.
- 1983ರಲ್ಲಿಕರಿಯಣ್ಣ, ಶಿವಮೊಗ್ಗ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು.
- 1989ಮತ್ತು 1999ರಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ (ಅಂದಿನ ಹೊಳೆಹೊನ್ನೂರು) ಕಾಂಗ್ರೆಸ್ಅಭ್ಯರ್ಥಿ ಯಾಗಿ ಗೆಲುವು ಸಾಧಿಸಿದ್ದರು.

- ಎಸ್.ಎಂಕೃಷ್ಣ ಸರ್ಕಾರದಲ್ಲಿ ಮಂತ್ರಿಯಾಗುವ ಅವಕಾಶ ಒದಗಿ ಬಂದಿತ್ತಾದರೂ ಕೊನೆ ಕ್ಷಣದಲ್ಲಿ ಕೈತಪ್ಪಿತ್ತು.
- ಅನುಸೂಚಿತಜಾತಿ/ ಪಂಗಡಗಳ ಅನುದಾನ ಪರಿಶೀಲನಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
- ಮಲ್ಲಿಕಾರ್ಜುನಖರ್ಗೆ ಅವರ ಆಪ್ತರಾಗಿದ್ದ ಕರಿಯಣ್ಣ ಅವರು ರಾಜ್ಯ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿದ್ದರು.ಈಮೊದಲು ಜಿಲ್ಲಾ ಕಾಂಗ್ರೆಸ್’ನ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿಭಾಯಿಸಿದ್ದರು.
- ಶಿವಮೊಗ್ಗದಸಿಟಿ ಕೋ-ಆಪರೇಟೀವ್ ಬ್ಯಾಂಕ್, ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ, ಕೋಟೆ ಶ್ರೀ ಮಾರಿಕಾಂಬದೇವಸ್ಥಾನ ಸಮಿತಿ, ರವೀಂದ್ರನಗರ ಗಣಪತಿ ದೇವಸ್ಥಾನ ಸಮಿತಿಗಳ ಅಧ್ಯಕ್ಷರಾಗಿ, ಸಕ್ರಿಯಪದಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
- ಹರಿಜನ – ಗಿರಿಜನ ಅಭಿವೃದ್ದಿ ವಿದ್ಯಾಸಂಸ್ಥೆ ಸ್ಥಾಪಿಸುವಮೂಲಕ ಕರಿಯಣ್ಣ ಅವರು ನಗರದಲ್ಲಿ ಎರಡು ಹೈಸ್ಕೂಲ್ ನಡೆಸುತ್ತಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494ಈ ಮೇಲ್ | shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















