Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಭೀಕರ ಅಪಘಾತ, ಮೃತ 13 ಮಂದಿಯ ಗುರುತು ಪತ್ತೆ, ಎಮ್ಮೆಹಟ್ಟಿಯಲ್ಲಿ ಹೇಗಿದೆ ಪರಿ‍ಸ್ಥಿತಿ?

ಭೀಕರ ಅಪಘಾತ, ಮೃತ 13 ಮಂದಿಯ ಗುರುತು ಪತ್ತೆ, ಎಮ್ಮೆಹಟ್ಟಿಯಲ್ಲಿ ಹೇಗಿದೆ ಪರಿ‍ಸ್ಥಿತಿ?

28/06/2024 10:16 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 28 JUNE 2024

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

BHADRAVATHI / HAVERI : ಮನೆ ದೇವರ (temple) ದರ್ಶನ ಮಾಡಿ, ಹೊಸ ವಾಹನದ ಪೂಜೆ ಮುಗಿಸಿ ಊರಿಗೆ ಮರಳುವ ಹೊತ್ತಿಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 13 ಮಂದಿ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿರುವ ನಾಲ್ವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಹೊಸ ಟಿಟಿಗೆ ಮನೆ ದೇವರಿಂದ ಪೂಜೆ

ಭದ್ರಾವತಿ ತಾಲೂಕು ಎಮ್ಮೆಹಟ್ಟಿಯ ಆದರ್ಶ, ಚಾಲಕ ವೃತ್ತಿ ಮಾಡುತ್ತಿದ್ದರು. ಈಚೆಗೆ ಟಿಟಿ ವಾಹನ ಖರೀದಿ ಮಾಡಿದ್ದರು. ಈ ಹಿನ್ನೆಲೆ ಕುಟುಂಬದವರ ಜೊತೆಗೆ ಮನೆ ದೇವರು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿ ಟಿಟಿ ವಾಹನಕ್ಕೆ ಪೂಜೆ ಸಲ್ಲಿಸಿ, ಬಳಿಕ ವಿವಿಧ ದೇಗುಲಗಳಿಗೆ ಭೇಟಿ ನೀಡಿದ್ದರು. ಇವತ್ತು ಬೆಳಗ್ಗೆ ಎಮ್ಮೆಹಟ್ಟಿ ಗ್ರಾಮಕ್ಕೆ ಮರಳಬೇಕಿತ್ತು. ಆದರೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್‌ ಬಳಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿಯಾಗಿ 13 ಮಂದಿ ಸಾವನ್ನಪ್ಪಿದ್ದಾರೆ.

tempo-traveller-incident-at-Haveri-driver-adarsh.

ಒಂದೇ ಕುಟುಂಬ, ಒಂದೇ ಗ್ರಾಮ

ಅಪಘಾತದಲ್ಲಿ ಮೃತಪಟ್ಟವರೆಲ್ಲ ಒಂದೇ ಕುಟುಂಬದವರು. ಟಿಟಿ ಚಾಲಕ ಆದರ್ಶ ಅವರ ತಂದೆ, ತಾಯಿ ಮತ್ತು ಸಂಬಂಧಿಕರು ಜೊತೆಗೆ ಪ್ರವಾಸಕ್ಕೆ ತೆರಳಿದ್ದರು. ಮೃತರನ್ನು ಆದರ್ಶ (23), ಪರಶುರಾಮ್ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (50), ಸುಭದ್ರಾ ಭಾಯಿ (65), ಪುಣ್ಯಾ ಬಾಯಿ (50), ಮಂಜುಳಾ ಬಾಯಿ (57), ಮಾನಸಾ (24), ರೂಪಾ (40), ಮಂಜುಳಾ (50), 4 ವರ್ಷದ ಮಗು ಮತ್ತು 6 ವರ್ಷದ ಮಗು ಮೃತರು ಎಂದು ಗುರುತಿಸಲಾಗಿದೆ.

Emmehatti

ಎಮ್ಮೆಹಟ್ಟಿ ಗ್ರಾಮದಲ್ಲಿ ದಿಗ್ಭ್ರಮೆ, ಸ್ಥಳಕ್ಕೆ ದೌಡು

ಹಾವೇರಿಯಲ್ಲಿ ಟಿಟಿ ವಾಹನ ಅಪಘಾತಕ್ಕೀಡಾದ ವಿಷಯ ತಿಳಿಯುತ್ತಿದ್ದಂತೆ ಹೊಳೆಹೊನ್ನೂರು ಠಾಣೆ ಪೊಲೀಸರು ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಪ್ರವಾಸಕ್ಕೆ ತೆರಳಿದ್ದವರ ಕುರಿತು ಗ್ರಾಮಸ್ಥರಿಂದ ಮಾಹಿತಿ ಸಂಗ್ರಹಿಸಿದರು. ವಿಚಾರ ತಿಳಿದು ಗ್ರಾಮಸ್ಥರಲ್ಲಿ ದಿಗ್ಭ್ರಮೆ ಉಂಟಾಗಿದೆ. ಗ್ರಾಮದ ಪ್ರಮುಖು, ಮೃತರ ಸಂಬಂಧಿಗಳು, ಸ್ನೇಹಿತರು ಕೂಡಲೆ ಹಾವೇರಿಗೆ ತೆರಳಿದ್ದಾರೆ. ಸದ್ಯ ಎಮ್ಮಹಟ್ಟಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

Emmehatti

ಹಾವೇರಿ ರಕ್ಷಣಾಧಿಕಾರಿ ಏನಂದ್ರು?‌

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಹಾವೇರಿ ಜಿಲ್ಲಾ ರಕ್ಷಣಾಧಿಕಾರಿ ಅಂಶುಕುಮಾರ್‌, ರಸ್ತೆ ಬದಿಯಲ್ಲಿ ಲಾರಿ ನಿಲ್ಲಿಸಲಾಗಿತ್ತು. ಹಿಂಬದಿಯಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಪೈಕಿ ಇಬ್ಬರು ಪುರುಷರು, ಇಬ್ಬರು ಮಕ್ಕಳು, ಉಳಿದವರೆಲ್ಲ ಮಹಿಳೆಯರು. ಆಸ್ಪತ್ರೆಯಲ್ಲಿ ಒಬ್ಬ ವೃದ್ಧೆ ಮತ್ತು ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಗಂಭೀರವಾಗಿದೆ. ಟಿಟಿ ವಾಹನ ಹಿಂಬದಿಯಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ತಿಳಿಸಿದರು.

Emmehatti

ಇದನ್ನೂ ಓದಿ – ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ, ಶಿವಮೊಗ್ಗ ಮೂಲದ 13 ಮಂದಿ ಸಾವು

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article JOG-FALLS-IN-SAGARA-2024. ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಜೋಗ, ಮೈದುಂಬಿದ ರಾಜ, ರಾಣಿ, ರೋರರ್‌, ರಾಕೆಟ್‌
Next Article haveri-mishap. ಟಿಟಿ ಭೀಕರ ಅಪಘಾತ ಪ್ರಕರಣ, ಮೃತರ ಪೈಕಿ ಶಿವಮೊಗ್ಗ, ಕಡೂರಿನವರು ಇದ್ದಾರೆ, ಅಂತಿಮ ದರ್ಶನಕ್ಕೆ ಸಿದ್ಧತೆ

ಇದನ್ನೂ ಓದಿ

Bommanakatte-incident-police-investigation-on
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ವ್ಯಕ್ತಿಯ ಹತ್ಯೆ, ಕೆರೆ ಏರಿ ಬಳಿ ಮೃತದೇಹ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/06/2025
WEATHER-REPORT-SHIMOGA-
WEATHER REPORT

ಶಿವಮೊಗ್ಗದ ಹವಾಮಾನ ವರದಿ | 20 ಜೂನ್‌ 2025 | ಕಡಿಮೆಯಾದ ಮಳೆ, ಎಲ್ಲೆಲ್ಲಿ ತಾಪಮಾನ ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/06/2025
ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 19 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/06/2025
Shimoga-News-update
FATAFAT NEWS

ಡಾ. ಜಿ.ಎಸ್‌.ಶಿವರುದ್ರಪ್ಪ ಪ್ರತಿಷ್ಠಾನಕ್ಕೆ ಸಾಸ್ವೆಹಳ್ಳಿ ಸತೀಶ್‌ ನೇಮಕ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/06/2025
Bhadra-Dam-General-Image
BHADRAVATHI

ಭದ್ರಾ ಜಲಾಶಯಕ್ಕೆ ಇವತ್ತು ಎಷ್ಟಿದೆ ಒಳ ಹರಿವು? ನೀರಿನ ಮಟ್ಟ ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/06/2025
Holehonnuru-residents-protest-against-road-crack
BHADRAVATHI

ಒಂದು ತಿಂಗಳ ಹಿಂದೆ ಉದ್ಘಾಟನೆಯಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು, ಜನರ ಆಕ್ರೋಶ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?