SHIVAMOGGA LIVE NEW S | 20 FEBRUARY 2024
SHIMOGA : ಭದ್ರಾ ನದಿ ಮತ್ತು ನಾಲೆಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ನದಿ ಮತ್ತು ನಾಲೆ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಫೆ.26ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ನಿಷೇಧಾಜ್ಞೆ ವಿಧಿಸಿದ್ದು ಏಕೆ?
ಹಾವೇರಿ ಮತ್ತು ಗದಗ ನಗರದ ಕುಡಿಯುವ ನೀರಿಗಾಗಿ ಫೆ.5ರಿಂದ ಭದ್ರಾ ಜಲಾಶಯದಿಂದ ನೀರು ಹರಿಸಲಾಗುತ್ತಿದೆ. ಆದರೆ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕರೆ ಮಾಡಿ ನೀರು ತಲುಪಿಲ್ಲ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ತಿಳಿಸಿದ್ದಾರೆ.
ನದಿ ಪಾತ್ರದಲ್ಲಿ 20 ಸಾವಿರಕ್ಕೂ ಹೆಚ್ಚು ಪಂಪ್ಸೆಟ್ಗಳನ್ನು ಹಾಕಿ ನೀರೆತ್ತಲಾಗುತ್ತಿದೆ. ಕೆಲವು ಕಡೆ ನದಿಗೆ ಅಡ್ಡಲಾಗಿ ಅನಧಿಕೃತವಾಗಿ ಮಣ್ಣಿನ ಏರಿ ನಿರ್ಮಿಸಿ ನೀರೆತ್ತಲಾಗುತ್ತಿದೆ. ಆದ್ದರಿಂದ ಹೊಳೆಯ ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲ.
ಜಿಲ್ಲಾಧಿಕಾರಿ ಆದೇಶದಲ್ಲಿ ಏನೇನಿದೆ?
ಭದ್ರಾ ನದಿ ಮತ್ತು ಕಾಲುವೆಯಿಂದ ಅನಧಿಕೃತವಾಗಿ ಪಂಪ್ಸೆಟ್ ಬಳಸಿ ಹೊಲಕ್ಕೆ ನೀರು ಹಾಯಿಸುವುದು ನಿಷೇಧಿಸಲಾಗಿದೆ. ನದಿ ಮತ್ತು ಕಾಲುವೆ ಬಳಿ ಐದಕ್ಕಿಂತಲು ಹೆಚ್ಚು ಜನ ಗುಂಪು ಸೇರುವಂತ್ತಿಲ್ಲ. ನಿಷೇಧಾಜ್ಞೆ ವಿಧಿಸಿದ ಪ್ರದೇಶದಲ್ಲಿ ಘೋಷಣೆ ಕೂಗುವುದು, ಮಾರಕಾಸ್ತ್ರ ಹಿಡಿದು ಓಡಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಪೊಲೀಸ್ ನೇಮಕಾತಿ ಪರೀಕ್ಷೆ, ರೈಲ್ವೆ ಇಲಾಖೆಯಿಂದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200