SHIVAMOGGA LIVE NEW S | 20 FEBRUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಭದ್ರಾ ನದಿ ಮತ್ತು ನಾಲೆಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ನದಿ ಮತ್ತು ನಾಲೆ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಫೆ.26ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ನಿಷೇಧಾಜ್ಞೆ ವಿಧಿಸಿದ್ದು ಏಕೆ?
ಹಾವೇರಿ ಮತ್ತು ಗದಗ ನಗರದ ಕುಡಿಯುವ ನೀರಿಗಾಗಿ ಫೆ.5ರಿಂದ ಭದ್ರಾ ಜಲಾಶಯದಿಂದ ನೀರು ಹರಿಸಲಾಗುತ್ತಿದೆ. ಆದರೆ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕರೆ ಮಾಡಿ ನೀರು ತಲುಪಿಲ್ಲ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ತಿಳಿಸಿದ್ದಾರೆ.
ನದಿ ಪಾತ್ರದಲ್ಲಿ 20 ಸಾವಿರಕ್ಕೂ ಹೆಚ್ಚು ಪಂಪ್ಸೆಟ್ಗಳನ್ನು ಹಾಕಿ ನೀರೆತ್ತಲಾಗುತ್ತಿದೆ. ಕೆಲವು ಕಡೆ ನದಿಗೆ ಅಡ್ಡಲಾಗಿ ಅನಧಿಕೃತವಾಗಿ ಮಣ್ಣಿನ ಏರಿ ನಿರ್ಮಿಸಿ ನೀರೆತ್ತಲಾಗುತ್ತಿದೆ. ಆದ್ದರಿಂದ ಹೊಳೆಯ ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲ.
ಜಿಲ್ಲಾಧಿಕಾರಿ ಆದೇಶದಲ್ಲಿ ಏನೇನಿದೆ?
ಭದ್ರಾ ನದಿ ಮತ್ತು ಕಾಲುವೆಯಿಂದ ಅನಧಿಕೃತವಾಗಿ ಪಂಪ್ಸೆಟ್ ಬಳಸಿ ಹೊಲಕ್ಕೆ ನೀರು ಹಾಯಿಸುವುದು ನಿಷೇಧಿಸಲಾಗಿದೆ. ನದಿ ಮತ್ತು ಕಾಲುವೆ ಬಳಿ ಐದಕ್ಕಿಂತಲು ಹೆಚ್ಚು ಜನ ಗುಂಪು ಸೇರುವಂತ್ತಿಲ್ಲ. ನಿಷೇಧಾಜ್ಞೆ ವಿಧಿಸಿದ ಪ್ರದೇಶದಲ್ಲಿ ಘೋಷಣೆ ಕೂಗುವುದು, ಮಾರಕಾಸ್ತ್ರ ಹಿಡಿದು ಓಡಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಪೊಲೀಸ್ ನೇಮಕಾತಿ ಪರೀಕ್ಷೆ, ರೈಲ್ವೆ ಇಲಾಖೆಯಿಂದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






