ಶಿವಮೊಗ್ಗ ಲೈವ್.ಕಾಂ | SHIMOGA | 25 ನವೆಂಬರ್ 2019
NEWS 1 : ಜಾಹೀರಾತು ಆಹಾರ ಪದ್ಧತಿಯಿಂದ ಕ್ಯಾನ್ಸರ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಮೊಗ್ಗ : ಜಾಹೀರಾತುಗಳಲ್ಲಿ ತೋರಿಸಿದಂತೆ ಆಹಾರ ಪದ್ಧತಿ ಅನುಸರಿಸಿ ಕ್ಯಾನ್ಸರ್ ರೋಗಕ್ಕೆ ತುತ್ತಾಗುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ದೇಸಿ ಆಹಾರ ಪದ್ಧತಿ ಅರಿತು, ರೂಢಿಸಿಕೊಂಡರೆ ಧನಾತ್ಮಕ ಬದಲಾವಣೆ ಬರಲಿದೆ ಎಂದು ಡಾ.ಖಾದರ್ ಹೇಳಿದ್ದಾರೆ. ಯೋಗ ವಿಸ್ಮಯ ಟ್ರಸ್ಟ್ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ‘ಕ್ಯಾನ್ಸರ್’ಗೆ ಕಾರಣ ಮತ್ತು ಸರಳ ಪರಿಹಾರ’ ಕುರಿತ ವಿಶೇಷ ಶಿಬಿರದಲ್ಲಿ ಹೇಳಿಕೆ. ಯೋಗ ವಿಸ್ಮಯ ಟ್ರಸ್ಟ್ ಸಂಚಾಲಕ ಅನಂತಜೀ, ಡಿ.ಎಂ.ರಂಗನಾಥಯ್ಯ, ಶಿವಬೀರಯ್ಯ ಸೇರಿದಂತೆ ಹಲವರು ಉಪಸ್ಥಿತಿ.

NEWS 2 : ಕ್ರೈಸ್ತರ ಪರಮ ಪ್ರಸಾದ ಮೆರವಣಿಗೆ
ಶಿವಮೊಗ್ಗ : ಕ್ರಿಸ್ತರಾಜರ ಹಬ್ಬದ ಅಂಗವಾಗಿ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಪರಮ ಪ್ರಸಾದದ ಮೆರವಣಿಗೆ ನಡೆಯಿತು. ಮೇಣದ ಬತ್ತಿ, ರಾಜೀ ಸಂಧಾನದ ಶಿಲುಬೆ ಹಿಡಿದು ಸೇಕ್ರೆಡ್ ಹಾರ್ಟ್ ಚರ್ಚ್’ನಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು. ಶಿವಮೊಗ್ಗ ಮತ್ತು ಭದ್ರಾವತಿ ಧರ್ಮಕ್ಷೇತ್ರದಿಂದ ಜಂಟಿಯಾಗಿ ಹಬ್ಬವನ್ನು ಆಯೋಜಿಸಲಾಗಿತ್ತು. ಶಿವಮೊಗ್ಗ ಧರ್ಮಕ್ಷೇತ್ರದ ಅಧ್ಯಕ್ಷ ಡಾ.ಫ್ರಾನ್ಸಿಸ್ ಸೆರಾವೋ, ಭದ್ರಾವತಿ ಧರ್ಮಾಧ್ಯಕ್ಷ ಡಾ.ಜೋಸೆಫ್ ಅರುಮಚಾಡತ್ ಸೇರಿದಂತೆ 70 ಗುರುಗಳು ಬಲಿಪೂಜೆ ಸಲ್ಲಿಸಿದರು.
NEWS 3 : ನ್ಯಾಯಾಂಗ ತನಿಖೆಗೆ ಆಗ್ರಹ
ಶಿವಮೊಗ್ಗ : ಮಾಜಿ ಸಚಿವ ತನ್ವೀರ್ ಸೇಠ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ಆಗ್ರಹ. ಪೊಲೀಸರ ತನಿಖಾ ಕ್ರಮವು ಸಂಶಯಾಸ್ಪದವಾಗಿದೆ. ಹಾಗಾಗಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ಪಿಎಫ್ಐ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶಾ ಆಗ್ರಹ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
A procession was held from Sacred Heart church in Shimoga. Yoga Vismaya held a seminar in Kuvempu Rangamandira.