SHIVAMOGGA LIVE NEWS | 16 MARCH 2023
ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆ, 2ನೇ ಕೇಸ್ ಪತ್ತೆ
ಬಿಸಿಲ ಝಳ ಹೆಚ್ಚಾಗುತ್ತಿದ್ದಂತೆ ತೀರ್ಥಹಳ್ಳಿ ತಾಲೂಕಿನಲ್ಲಿ ಮಂಗನ ಕಾಯಿಲೆ ಆತಂಕ ಮುಂದುವರೆದಿದೆ. ತಾಲೂಕಿನಲ್ಲಿ ಎರಡನೇ ಪ್ರಕರಣ ಪತ್ತೆಯಾಗಿದೆ. ಮಹಿಳೆಯೊಬ್ಬರನ್ನು ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಮಾಹಿತಿ ಪಡೆಯಲು ನೀಲಿ ಬಟನ್ ಕ್ಲಿಕ್ ಮಾಡಿ. ಇಲ್ಲಿ ಕ್ಲಿಕ್ ಮಾಡಿ
ಕತ್ತು ಸೀಳಿ ಹತ್ಯೆ ಮಾಡಿರುವ ಶಂಕೆ
ಮಹಿಳೆಯೊಬ್ಬರ ಕತ್ತು ಸೀಳಿ ಹತ್ಯೆ ಮಾಡಿರುವ ಶಂಕೆ ಇದೆ. ರಾತ್ರಿ ಮಲಗಿದ್ದ ಮಹಿಳೆ ಬೆಳಗ್ಗೆ ಕತ್ತು ಸೀಳಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಗೆ ನೀಲಿ ಬಟನ್ ಕ್ಲಿಕ್ ಮಾಡಿ. ಇಲ್ಲಿ ಕ್ಲಿಕ್ ಮಾಡಿ
ಶಿವಮೊಗ್ಗದ ಡಾಕ್ಟರ್ ಗೆ ಶಾಕ್ ಕೊಟ್ಟ ಗೂಗಲ್ ಸರ್ಚ್
ಹಣ ಮಾಡುವುದು ಹೇಗೆ ಎಂದು ಗೂಗಲ್ ಸರ್ಚ್ ಮಾಡಿದ ವೈದ್ಯ ಕೊನೆಗೆ ಲಕ್ಷ ಲಕ್ಷ ಹಣ ಕಳೆದುಕೊಂಡಿದ್ದಾರೆ. ಆತಂಕಗೊಂಡ ಡಾಕ್ಟರ್ ಕೊನೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಗೆ ನೀಲಿ ಬಟನ್ ಕ್ಲಿಕ್ ಮಾಡಿ. ಇಲ್ಲಿ ಕ್ಲಿಕ್ ಮಾಡಿ
ಪಿಡಿಒ ವಿರುದ್ಧ ಕಿಮ್ಮನೆ ಗರಂ
ಪಿಡಿಒ ಒಬ್ಬರು ಗ್ರಾಮ ಪಂಚಾಯಿತಿ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳದ್ದಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿ ಮುಂದೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಹೋರಾಟ ನಡೆಯಿತು. ಈ ಕುರಿತು ಹೆಚ್ಚಿನ ಮಾಹಿತಿಗೆ ನೀಲಿ ಬಟನ್ ಕ್ಲಿಕ್ ಮಾಡಿ. ಇಲ್ಲಿ ಕ್ಲಿಕ್ ಮಾಡಿ
ಇವತ್ತು ಬಸ್ ಸಿಗೋದು ಕಷ್ಟವಾಗಬಹುದು
ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಸರ್ಕಾರಿ ಬಸ್ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಗೆ ನೀಲಿ ಬಟನ್ ಕ್ಲಿಕ್ ಮಾಡಿ. ಇಲ್ಲಿ ಕ್ಲಿಕ್ ಮಾಡಿ
ಥೇಟ್ ಅದೇ ಮಾದರಿಯಲ್ಲಿ ನಡೆಯಿತು ಅಟ್ಯಾಕ್
ಚೀಲೂರು ಸಮೀಪ ಹಂದಿ ಅಣ್ಣಿ ಹಂತಕರ ಮೇಲೆ ದಾಳಿಯಾಗಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಕಳೆದ ವರ್ಷ ಜುಲೈ ತಿಂಗಳಲ್ಲಿ ಹಂದಿ ಅಣ್ಣಿಯನ್ನು ಹತ್ಯೆ ಮಾಡಲಾಗಿತ್ತು. ಥೇಟ್ ಅದೆ ಮಾದರಿಯಲ್ಲಿ ಆರೋಪಿಗಳ ಮೇಲೆ ದಾಳಿ ನಡೆಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ನೀಲಿ ಬಟನ್ ಕ್ಲಿಕ್ ಮಾಡಿ. ಇಲ್ಲಿ ಕ್ಲಿಕ್ ಮಾಡಿ
ಶಿವಮೊಗ್ಗದ ರೈತರ ಮಕ್ಕಳಿಗೆ ತರಬೇತಿ
ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ ತೋಟಗಾರಿಕೆ ಇಲಾಖೆ ವತಿಯಿಂದ 10 ತಿಂಗಳ ತರಬೇತಿ ಆಯೋಜಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ನೀಲಿ ಬಟನ್ ಕ್ಲಿಕ್ ಮಾಡಿ. ಇಲ್ಲಿ ಕ್ಲಿಕ್ ಮಾಡಿ
ಮಲವಗೊಪ್ಪದಲ್ಲಿ ಬ್ರಹ್ಮ ರಥೋತ್ಸವ
ಮಲವಗೊಪ್ಪದ ಶ್ರೀ ಚನ್ನವಸವೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವವು ವಿಜೃಂಭಣೆಯಿಂದ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ರಥೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು. ಈ ಕುರಿತು ಹೆಚ್ಚಿನ ಮಾಹಿತಿಗೆ ನೀಲಿ ಬಟನ್ ಕ್ಲಿಕ್ ಮಾಡಿ. ಇಲ್ಲಿ ಕ್ಲಿಕ್ ಮಾಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200