Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » GOOD MORNING ಶಿವಮೊಗ್ಗ | ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಗಿದೆ? ಒಂದೇ ಕ್ಲಿಕ್‌ನಲ್ಲಿ ಎಲ್ಲಾ ಸುದ್ದಿ

GOOD MORNING ಶಿವಮೊಗ್ಗ | ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಗಿದೆ? ಒಂದೇ ಕ್ಲಿಕ್‌ನಲ್ಲಿ ಎಲ್ಲಾ ಸುದ್ದಿ

28/08/2024 8:47 AM
ನಿತಿನ್‌ ಕೈದೊಟ್ಲು

GOOD MORNING NEWS, 28 AUGUST 2024

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

#fed740 - SHUBODAYA-SHIVAMOGGA

ಸಣ್ಣ ವಿಷಯಗಳನ್ನು ಆನಂದಿಸಲು ಆರಂಭಿಸಿ, ನಿಮ್ಮ ದಿನವು ಪ್ರಕಾಶಮಾನವಾಗಿರುತ್ತದೆ.


WEATHER-REPORT

ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮಳೆಯಾಗುತ್ತಿದೆ. ಇದರಿಂದ ವಾತಾವರಣ ತಂಪಾಗಿದೆ. ತಾಪಮಾನವು ತುಸು ಇಳಿಕೆಯಾಗಿದೆ. ಇವತ್ತು ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ, ತೀರ್ಥಹಳ್ಳಿ ಗರಿಷ್ಠ 30 ಡಿಗ್ರಿ, ಕನಿಷ್ಠ 23 ಡಿಗ್ರಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.


ಇದನ್ನೂ ಓದಿ ⇒ ದಿನ ಭವಿಷ್ಯ | 28 ಆಗಸ್ಟ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ?

 ಚಿನ್ನದ ದರ 

22 ಕ್ಯಾರೆಟ್‌ ಚಿನ್ನ24 ಕ್ಯಾರೆಟ್‌ ಚಿನ್ನ
‌₹ 6694₹ 7303

* ಕಡೆ ಕ್ಷಣದ ಬದಲಾವಣೆ ಹೊರತುಪಡಿಸಿ. ಮಾರುಕಟ್ಟೆಯಲ್ಲಿ ಈ ದರ ಆಗಾಗ ಬದಲಾಗುತ್ತದೆ.


 ಅಡಿಕೆ ಧಾರಣೆ 

ಶಿವಮೊಗ್ಗ ಮಾರುಕಟ್ಟೆ

ಗೊರಬಲು1600035169
ಬೆಟ್ಟೆ4201454701
ರಾಶಿ3000048100
ಸರಕು4600080321

ಸಾಗರ ಮಾರುಕಟ್ಟೆ

ಕೆಂಪುಗೋಟು3029930299
ಕೋಕ1698916989
ಚಾಲಿ2658832409
ಬಿಳೆ ಗೋಟು2320924609
ರಾಶಿ3529947329
ಸಿಪ್ಪೆಗೋಟು1474417315

ಇತರೆ ಮಾರುಕಟ್ಟೆ

ಚನ್ನಗಿರಿರಾಶಿ3400048621
ತೀರ್ಥಹಳ್ಳಿಸಿಪ್ಪೆಗೋಟು1500015000
ಭದ್ರಾವತಿರಾಶಿ3519948300

ಇದನ್ನೂ ಓದಿ ⇒ ಸಿಟಿ ಬಸ್ಸಿನಲ್ಲಿ ಟಿಕೆಟ್‌ ಹಣಕ್ಕೆ ವ್ಯಾನಿಟಿ ಬ್ಯಾಗ್‌ ತೆಗೆಯಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್

  » SHIMOGA CITY NEWS 

#d4dcdc

ಸಹ್ಯಾದ್ರಿ ಕಾಲೇಜು : ಪರೀಕ್ಷಾ ವೇಳಾಪಟ್ಟಿ ಅವೈಜ್ಞಾನಿಕವಾಗಿದೆ. ಕೂಡಲೆ ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡಸಿದರು. ಪ್ರಾಂಶುಪಾಲರ ಮೂಲಕ ಕಲಪತಿಗೆ ಮನವಿ ಸಲ್ಲಿಸಿದರು.

#d4dcdcಬಿಜೆಪಿ ಕಚೇರಿ : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿ ‍ನಲ್ಕೂವರೆ ತಿಂಗಳಾಗಿದೆ. ಪ್ರಥಮ ಪದವಿ ಪ್ರವೇಶಕ್ಕೆ ಈವರೆಗೂ ಕುವೆಂಪು ವಿವಿ ಪ್ರಕಟಣೆ ಹೊರಡಿಸಿಲ್ಲ. ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ ಗರಂ.

#d4dcdcಬಿಜೆಪಿ ಕಚೇರಿ : ಸದಸ್ಯತ್ವ ಅಭಿಯಾನ ಕಾರ್ಯಾಗಾರ. ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಉದ್ಘಾಟನೆ. ಸಂಸದ ರಾಘವೇಂದ್ರ, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಸೇರಿ ಹಲವರು ಭಾಗಿ.  

#d4dcdcಪತ್ರಿಕಾ ಭವನ : ರಾಜ್ಯ ಒಕ್ಕಲಿಗರ ಸಂಘದ ಮಹಿಳಾ ಘಟಕ ಮತ್ತು ಜಿಲ್ಲಾ ಘಟಕದ ವತಿಯಿಂದ ಸೆ.1ರಂದು ಶ್ರಾವಣ ಮಾಸ ಕುರಿತು ಗಾಯನ ಸ್ಪರ್ಧೆ, ವಿದ್ಯಾರ್ಥಿಗಳನ್ನು ಪುರಸ್ಕಾರಿಸು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷೆ ಪ್ರತಿಮಾ ಡಾಕಪ್ಪ ತಿಳಿಸಿದರು.

#d4dcdcಪತ್ರಿಕಾ ಭವನ : ಸಹಚೇತನ ನಾಟ್ಯಾಲಯ ವತಿಯಿಂದ ಆ.30 ರಿಂದ ಸೆ.1ರವರೆಗೆ ಕುವೆಂಪು ರಂಗಮಂದಿರದಲ್ಲಿ 13ನೇ ವರ್ಷದ ನಾಟ್ಯಾರಾಧನೆ ರಾಷ್ಟ್ರೀಯ ನೃತ್ಯ ಮಹೋತ್ಸವ ಆಯೋಜಿಸಲಾಗಿದೆ ಎಂದು ಸಹನಾ ಚೇತನ್‌ ತಿಳಿಸಿದರು.

#d4dcdcಶಿವಮೊಗ್ಗ : ಆ.28 ರಿಂದ 30ರವರೆಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆವರಣದಲ್ಲಿ ಟ್ರೇಡ್‌ ಲೈಸೆನ್ಸ್‌ ಮೇಳ ಆಯೋಜಿಸಲಾಗಿದೆ ಎಂದು ಸಂಘದ ಸಾರ್ವಜನಿಕ ಸಂಪರ್ಕಾಧಿಕಾರಿ ಜಿ.ವಿಜಯಕುಮಾರ್‌ ತಿಳಿಸಿದ್ದಾರೆ.

#d4dcdcಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಯಾಗಬೇಕಿದೆ. ಕಾಂಗ್ರೆಸ್‌ ನಾಯಕರು ಕ್ಷುಲಕ ಹೇಳಿಕೆ ನಿಲ್ಲಿಸಿಬೇಕು. ಸಿಎಂ ರಾಜೀನಾಮೆ ನೀಡಿ ತನಿಖೆ ಎದುರಿಸಲಿ. ಸಂಸದ ರಾಘವೇಂದ್ರ ಆಗ್ರಹ.

#d4dcdcಜಿಲ್ಲಾಧಿಕಾರಿ ಕಚೇರಿ : ರೈತರು ಮೊಬೈಲ್‌ ಆಪ್‌ ಮೂಲಕ ಬೆಳೆ ಸಮೀಕ್ಷೆ ನಡೆಸಲು ಅವಕಾಶವಿದೆ.  ಸೆ.30ರವರೆಗೆ ಬೆಳೆ ಸಮೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

#d4dcdcಕೇಂದ್ರ ಕಾರಾಗೃಹ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ನನ್ನು ಬಳ್ಳಾರಿ ಜೈಲಿಗೆ ರವಾನಿಸಲಾಗಿದೆ. ಸಹಚರರಾದ ಜಗದೀಶ್‌ ಮತ್ತು ಲಕ್ಷ್ಮಣ್‌ನನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ.

ಇದನ್ನೂ ಓದಿ ⇒ ಸೇತುವೆಯಿಂದ ಕೆಳಗೆ ಹಾರಿದ ಕಾರು | ಬಸ್‌ ಗುದ್ದಿ ಎಮ್ಮೆಗಳು ಸಾವು – 3 ಫಟಾಫಟ್‌ ನ್ಯೂಸ್‌

  » TALUK NEWS 

#d4dcdc

ಸಾಗರ : ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ. ಇದರಿಂದ ಜೋಗ ಜಲಪಾತ ಮೈದುಂಬಿಕೊಂಡಿದೆ.

#d4dcdcಜೋಗ – ಕಾರ್ಗಲ್‌ : ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಎಂ.ರಾಜು, ಉಪಾಧ್ಯಕ್ಷರಾಗಿ ಬಿಜೆಪಿಯ ಜಯಲಕ್ಷ್ಮಿ ಆಯ್ಕೆಯಾಗಿದ್ದಾರೆ. ಬಿಜೆಪಿಗೆ ಬಹುಮತ ಇದ್ದರು ಕಾಂಗ್ರೆಸ್‌ ಅಧ್ಯಕ್ಷ ಗಾದಿ ಹಿಡಿದಿದ್ದಾರೆ.  

#d4dcdcಆನಂದಪುರ : ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಮಹಿಳಾ ದೌರ್ಜನ್ಯ ಖಂಡಿಸಿ ವಿವಿಧ ಸಂಘಟನೆಗಳಿಂದ ಬಸ್‌ ನಿಲ್ದಾಣದ ಸರ್ಕಲ್‌ನಲ್ಲಿ ಪ್ರತಿಭಟನೆ.

#d4dcdcತೀರ್ಥಹಳ್ಳಿ : ಪಟ್ಟಣ ಪಂಚಾಯಿತಿಗೆ ಅಧ್ಯಕ್ಷರಾಗಿ ಕಾಂಗ್ರೆಸ್‌ನ ರಹಮತ್‌ ಉಲ್ಲಾ ಅಸಾದಿ, ಉಪಾಧ್ಯಕ್ಷರಾಗಿ ಗೀತಾ ರಮೇಶ್‌ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಅವಧಿಯಲ್ಲಿ ಅಸಾದಿ ಅವರು ಉಪಾಧ್ಯಕ್ಷರಾಗಿದ್ದು, ಗೀತಾ ಅವರು ಅಧ್ಯಕ್ಷರಾಗಿದ್ದರು. ಈಗ ಸ್ಥಾನ ಬದಲಾಗಿದೆ.  

#d4dcdcಭದ್ರಾವತಿ : ಗಾಂಧಿ ನಗರದ ವೆಳಾಂಗಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರದಲ್ಲಿ ಆ.29 ರಿಂದ ಸೆ.8ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಧರ್ಮಗುರು ಸ್ಟೀವನ್‌ ಡೆಸಾ ತಿಳಿಸಿದ್ದಾರೆ.

#d4dcdcಭದ್ರಾವತಿ : ಎಪಿಎಂಸಿ ಪ್ರಾಂಗಣದಲ್ಲಿರುವ ವರ್ತಕರ ಸಂಘದ ಕಚೇರಿಯನ್ನು ಶಾಸಕ ಬಿ.ಕೆ.ಸಂಗಮೇಶ್ವರ್‌ ಉದ್ಘಾಟಿಸಿದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article car incident near agaradalli at holehonnuru station limits ಸೇತುವೆಯಿಂದ ಕೆಳಗೆ ಹಾರಿದ ಕಾರು | ಬಸ್‌ ಗುದ್ದಿ ಎಮ್ಮೆಗಳು ಸಾವು – 3 ಫಟಾಫಟ್‌ ನ್ಯೂಸ್‌
Next Article 210724 Police Raid on Shimoga central Jail at Sogane ದರ್ಶನ್‌ ಸಹಚರರು ಆಗಮನಕ್ಕು ಮುನ್ನವೆ ಶಿವಮೊಗ್ಗ ಜೈಲಿನ ಮೇಲೆ 120 ಪೊಲೀಸರಿಂದ ದಾಳಿ

ಇದನ್ನೂ ಓದಿ

GOOD-MORNING-SHIVAMOGGA-NEWS-UPDATE
50 WORDS NEWS

GOOD MORNING SHIMOGA | ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/10/2024
Shivamogga Live Today News
50 WORDS NEWS

ಶಿವಮೊಗ್ಗ ಜಿಲ್ಲೆಯ ಈವರೆಗಿನ ಟಾಪ್‌ 10 ಸುದ್ದಿಗಳು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/10/2024
GOOD-MORNING-SHIVAMOGGA-NEWS-UPDATE
50 WORDS NEWS

GOOD MORNING SHIMOGA | ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/10/2024
GOOD-MORNING-SHIVAMOGGA-NEWS-UPDATE
50 WORDS NEWS

GOOD MORNING | ಒಂದೇ ಕ್ಲಿಕ್‌ನಲ್ಲಿ SHIMOGA ಜಿಲ್ಲೆಯ ಸುದ್ದಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
27/09/2024
Shivamogga Live Today News
50 WORDS NEWS

ಶಿವಮೊಗ್ಗದ ಈವರೆಗಿನ ಸುದ್ದಿಗಳು – ಓದಲು ಇಲ್ಲಿ ಕ್ಲಿಕ್‌ ಮಾಡಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/09/2024
Cops-fined-biker-for-stunt-on-road.
50 WORDS NEWSSHIVAMOGGA CITY

ಶಿವಮೊಗ್ಗದಲ್ಲಿ ಬೈಕ್‌ ಸ್ಟಂಟ್‌ ಮಾಡಿ ಲೈಕ್‌ ಗಿಟ್ಟಿಸುತ್ತಿದ್ದವನು ಈಗ ಟ್ರೋಲ್‌ ಆಗ್ತಿದ್ದಾನೆ – 3 ಫಟಾಫಟ್‌ ನ್ಯೂಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/09/2024
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?