Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಗುಡ್‌ ಮಾರ್ನಿಂಗ್‌ ಶಿವಮೊಗ್ಗ | ಒಂದೇ ಕ್ಲಿಕ್‌ನಲ್ಲಿ ಇಡೀ ಜಿಲ್ಲೆಯ ಸುದ್ದಿ

ಗುಡ್‌ ಮಾರ್ನಿಂಗ್‌ ಶಿವಮೊಗ್ಗ | ಒಂದೇ ಕ್ಲಿಕ್‌ನಲ್ಲಿ ಇಡೀ ಜಿಲ್ಲೆಯ ಸುದ್ದಿ

22/08/2024 7:44 AM
ನಿತಿನ್‌ ಕೈದೊಟ್ಲು

GOOD MORNING NEWS, 22 AUGUST 2024

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

#fed740 - SHUBODAYA-SHIVAMOGGA

ಸಣ್ಣ ವಿಷಯಗಳನ್ನು ಆನಂದಿಸಲು ಪ್ರಾರಂಭಿಸಿ. ನಿಮ್ಮ ದಿನವು ಪ್ರಕಾಶಮಾನವಾಗಿರುತ್ತದೆ.


ಇದನ್ನೂ ಓದಿ ⇒ ದಿನ ಭವಿಷ್ಯ | 22 ಆಗಸ್ಟ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಶುಭ ಸಂಖ್ಯೆ ಎಷ್ಟು?

WEATHER-REPORT

ಶಿವಮೊಗ್ಗದಲ್ಲಿ ಮಳೆ ಕಡಿಮೆಯಾಗಿದೆ. ಆದರೆ ಧಗೆ ಹೆಚ್ಚಿದೆ. ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರತ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.


 SHIMOGA CITY NEWS 

#d4dcdcನೆಹರು ಕ್ರೀಡಾಂಗಣ : ಇಂದಿನಿಂದ ಭಾರತೀಯ ಸೇನೆಯ ಅಗ್ನಿವೀರ್‌ ನೇಮಕಾತಿ ಆರಂಭ. ಆ.31ರವರೆಗೆ 11 ಜಿಲ್ಲೆಯ ಅಭ್ಯರ್ಥಿಗಳ ನೇಮಕಾತಿ ರಾಲಿ ನಡೆಯಲಿದೆ.

ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಇದೇ ಮೊದಲು ಸೇನೆಗೆ ಅಗ್ನಿವೀರರ ನೇಮಕಾತಿ ರ‍್ಯಾಲಿ, ನಾಳೆಯಿಂದ ಆಯ್ಕೆ ಶುರು, ಹೇಗಿದೆ ಸಿದ್ಧತೆ?

#d4dcdcಬಿಜೆಪಿ ಕಚೇರಿ : ಪರಿಶಿಷ್ಟ ಜಾತಿ, ಪಂಗಡದ ಎಲ್ಲ ಅನುದಾನಗಳಿಗೆ ರಾಜ್ಯ ಸರ್ಕಾರ ಕತ್ತರಿ ಹಾಕಿದೆ. ಗ್ಯಾರಂಟಿ ಯೋಜನೆಗೆ ಆ ಅನುದಾನ ಬಳಕೆಯಾಗುತ್ತಿದೆ. ಮಾಜಿ ಸಚಿವ ಎನ್‌.ಮಹೇಶ್‌ ಆರೋಪ.

#d4dcdcಪತ್ರಿಕಾ ಭವನ : ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಧಾನ ಪರಿಷತ್‌ ಸದಸ್ಯ ಐವಾನ್‌ ಡಿಸೋಜ ಬಂಧಿಸಬೇಕು. ಮಾಜಿ ಸಚಿವ ಈಶ್ವರಪ್ಪ ಆಗ್ರಹ.

#d4dcdcಡಿಸಿ ಕಚೇರಿ : ಕೇರಳದ ವಯನಾಡ್‌ ಮಾದರಿ ಭೂಕುಸಿತ ತಪ್ಪಿಸಲು ಮಾಧವ್‌ ಗಾಡ್ಗೀಳ್‌ ವರದಿ ಜಾರಿಗೊಳಿಸಬೇಕು. ಪರಿಸರಕ್ಕಾಗಿ ನಾವು ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ.

#d4dcdcಪತ್ರಿಕಾ ಭವನ : ಶ್ರೀಗಂಧ ಸಂಸ್ಥೆ ವತಿಯಿಂದ ಆ.24ರಂದು ವಿನೋಬನಗರ ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಚಾಲಕ ಕೃಷ್ಣಾನಂದ ತಿಳಿಸಿದರು.

#d4dcdcಜೆಎನ್‌ಎನ್‌ ಕಾಲೇಜು : ಅವರಣದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನೂತನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ. ಸೂಡಾ ಅಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಅವರಿಂದ ಗುದ್ದಲಿ ಪೂಜೆ.

#d4dcdcಪತ್ರಿಕಾ ಭವನ : ಕಾಗೋಡು ತಿಮ್ಮಪ್ಪ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು, ಯಡೆಹಳ್ಳಿಯಲ್ಲಿ ರೈತರ ಮೇಲಿನ ದೌರ್ಜನ್ಯ ವಿರೋಧಿಸಿ ಮಾನವ ಹಕ್ಕುಗಳು ಹೋರಾಟ ಸಮಿತಿಯಿಂದ ಆ.27ರಂದು ಡಿಸಿ ಕಚೇರಿ ಮುಂದೆ ಪ್ರತಿಭಟನೆ.

#d4dcdcಕುರುಬರ ಸಂಘ : ಬಾಲರಾಜ್‌ ಅರಸ್‌ ರಸ್ತೆಯಲ್ಲಿ ಕುರುಬರ ಸಂಘದ ನೂತನ ಸಮುದಾಯ ಭವನ ಕಟ್ಟಡಕ್ಕೆ ಶಂಕುಸ್ಥಾಪನೆ.


 SHIMOGA | BHADRAVATHI | THIRTHAHALLI NEWS 

#d4dcdcಉಂಬ್ಳೆಬೈಲು : ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ನೊಟೀಸ್‌. ಎಂಎಡಿಬಿ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಭೇಟಿಯಾದ ರೈತರು.

#d4dcdcಆಯನೂರು : ಬೇಕರಿಯಲ್ಲಿ ಅಗ್ನಿ ಅವಘಡ. ಮೂರು ಬಾರಿ ಸ್ಪೋಟ. ಸುಟ್ಟು ಕರಕಲಾದ ವಸ್ತುಗಳು


#d4dcdcತೀರ್ಥಹಳ್ಳಿ : ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ. ಶಿಕ್ಷಕನ ಬಂಧನ. ಪೊಲೀಸ್‌ ಠಾಣೆಗೆ ಶಾಸಕ ಆರಗ ಜ್ಞಾನೇಂದ್ರ, ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಭೇಟಿ.

#d4dcdcತೀರ್ಥಹಳ್ಳಿ : ಪತ್ರಕರ್ತ ನಿರಂಜನ್‌ ಮೇಲೆ ಇನ್ಸ್‌ಪೆಕ್ಟರ್‌ ಅಶ್ವಥಗೌಡ ಹಲ್ಲೆ ಯತ್ನ. ಮೊಬೈಲ್‌ ಕಸಿದುಕೊಂಡ ಆರೋಪ. ಠಾಣೆ ಮುಂದೆ ಪತ್ರಕರ್ತರ ಧರಣಿ. ಪತ್ರಕರ್ತ ಸಂಘದಿಂದ ಘಟನೆಗೆ ಖಂಡನೆ.

#d4dcdcಹೊಳೆಹೊನ್ನೂರು : ಜಂಬರಗಟ್ಟ ಗ್ರಾಮದಲ್ಲಿ ವಿದ್ಯುತ್‌ ತಂತಿ ತಗುಲಿ ಉಪ್ಪಾರ ಬೀದಿ ವಾಸಿ ಶಿಲ್ಪಿ ಹೆಚ್‌.ಎನ್.‌ಶರತ್‌ ಸಾವು.

#d4dcdcಹೊಳೆಹೊನ್ನೂರು : ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಕೆ.ರಂಗಸ್ವಾಮಿ ಭೇಟಿ, ಪರಿಶೀಲನೆ. ಸಿಬ್ಬಂದಿ ಕಾರ್ಯವೈಖರಿ ಕುರಿತ ಮಾಹಿತಿ ಸಂಗ್ರಹ.


 HOSANAGARA | SAGARA NEWS 

#d4dcdcಆನಂದಪುರ : ಸುತ್ತಮುತ್ತಲು ಭಾರಿ ಮಳೆ. ಮನೆಗಳು, ಮಳಿಗೆಗಳಿಗೆ ನುಗ್ಗಿದ ನೀರು. ಹೆದ್ದಾರಿ ಮೇಲೆ ಹರಿದ ಚರಂಡಿ ನೀರು.

#d4dcdcಸಾಗರ : ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯೋಜನೆ ಅವೈಜ್ಞಾನಿಕ. ಹೋರಾಟಗಾರರಿಗೆ ಪಕ್ಷಾತೀತ ಬೆಂಬಲ. ಮಾಜಿ ಸಚಿವ ಹರತಾಳು ಹಾಲಪ್ಪ ಘೋಷಣೆ.

#d4dcdcಹೊಸನಗರ : ಸೆ.1ರಿಂದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ. ಅಥ್ಲೆಟಿಕ್ಸ್‌, ವಾಲಿಬಾಲ್‌, ಕಬಡ್ಡಿ, ಥ್ರೋಬಾಲ್‌, ಕೊಕ್ಕೊ ಪಂದ್ಯಾವಳಿ ಇರಲಿದೆ.

#d4dcdcಸಾಗರ : ಗಾಂಧಿ ಮೈದಾನದಲ್ಲಿ ಆ. 24ರಂದು ಚರಕ, ಜೀವನ್ಮುಖಿ ಸಂಸ್ಥೆಯಿಂದ ‘ಅವ್ವ’ ಮಹಿಳಾ ಮಹಾಸಂತೆ ನಡೆಯಲಿದೆ ಎಂದು ಆಯೋಜಕರಾದ ಎಂ.ವಿ.ಪ್ರತಿಭಾ ತಿಳಿಸಿದ್ದಾರೆ.

#d4dcdcಕಾರ್ಗಲ್‌ : ಆ.27ರಂದು ಜೋಗ – ಕಾರ್ಗಲ್‌ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ನಿಗದಿಯಾಗಿದೆ.

#d4dcdcಕಾರ್ಗಲ್‌ : ಬಿದರೂರು ಗ್ರಾಮದ ತಳಕಳಲೆ ಹಿನ್ನೀರು ಪಕ್ಕದ ಕರಿಚಾನಲ್‌ನಲ್ಲಿ ಮೊಸಳೆ ಪ್ರತ್ಯಕ್ಷ. ಕೂಡಲೆ ಮೊಸಳೆ ಸೆರೆ ಹಿಡಿಯುವಂತೆ ಗ್ರಾಮಸ್ಥರ ಆಗ್ರಹ.


 SORABA | SHIKARIPURA NEWS 

#d4dcdcಶಿಕಾರಿಪುರ : ಪುರಸಭೆ ನೂತನ ಅಧ್ಯಕ್ಷೆಯಾಗಿ ಬಿಜೆಪಿಯ ಶೈಲಾ, ಉಪಾಧ್ಯಕ್ಷೆಯಾಗಿ ಎಂ.ಎಸ್‌.ರೂಪಾ ಆಯ್ಕೆ. ಸಂಸದ ರಾಘವೇಂದ್ರ, ಶಾಸಕ ಬಿ.ವೈ.ವಿಜಯೇಂದ್ರ ಅಭಿನಂದನೆ.

#d4dcdcಶಿರಾಳಕೊಪ್ಪ : ಪುರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಮಮತಾ ನಿಂಗಪ್ಪ, ಉಪಾಧ್ಯಕ್ಷರಾಗಿ ಮುದಾಸೀರ್‌ ಅಹಮ್ಮದ್‌ ಆಯ್ಕೆ. ಕಾಂಗ್ರೆಸ್‌ ಮುಖಂಡ ನಾಗರಾಜಗೌಡ ಅಭಿನಂದನೆ.

#d4dcdcಸೊರಬ : ಕೈಗಾರಿಕಾ ವಸಾಹತು ಸಮೀಪ ರೈತರ ಗದ್ದೆಯಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ನಾಟಿ ಸಂಭ್ರಮ. ಪ್ರಗತಿಪರ ರೈತರು ಸೇರಿದ ಹಲವರು ಭಾಗಿ.

#d4dcdcಆನವಟ್ಟಿ : ಕುರುಬರ ಓಣಿಯ ಪಿತ್ರಾರ್ಜಿತ ಆಸ್ತಿಯನ್ನು  ಅಧಿಕಾರಿಗಳು ಬೇನಾಮಿ ವ್ಯಕ್ತಿಯ ಹೆಸರಿಗೆ ಖಾತೆ ಬದಲಾವಣೆ ಮಾಡುತ್ತಿದ್ದಾರೆಂದು ಆರೋಪ. ಪಟ್ಟಣ ಪಂಚಾಯಿತಿ ಮುಂದೆ ಪ್ರತಿಭಟನೆ.

#d4dcdcಸೊರಬ : ಒಂದು ಗಂಟೆಗು ಹೆಚ್ಚು ಹೊತ್ತು ಸುರಿದ ಮಳೆ. ಪಟ್ಟಣದ ವಿವಿಧೆಡೆ ಚರಂಡಿಗಳು ಭರ್ತಿಯಾಗಿ ರಸ್ತೆ ಮೇಲೆ ಹರಿದ ನೀರು. ಕೆಲ ಹೊತ್ತು ಸಂಚಾರ ಅಸ್ತವ್ಯಸ್ತ.

ಇದನ್ನೂ ಓದಿ ⇒ ಮೆಗ್ಗಾನ್‌ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಬಳಿಕ ಮಹಿಳೆಗೆ ಬಂತು ಸಾಲು ಸಾಲು ಮೆಸೇಜ್‌, ಆಮೇಲೆ ಕಾದಿತ್ತು ಶಾಕ್

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Tunga-Nagara-Police-Station-Shimoga ಬೆಳಗ್ಗೆ ಎದ್ದು ಬಂದಾಗ ಓಪನ್‌ ಆಗಿತ್ತು ಮನೆ ಬಾಗಿಲು, ರೂಂಗೆ ಹೋದಾಗ ಕುಟುಂಬದವರಿಗೆ ಆಘಾತ, ಆಗಿದ್ದೇನು?
Next Article Former-Minister-Haratalu-Halappa-BJP ‘ರಕ್ತ ಕೊಟ್ಟೇವು, ನೀರು ಕೊಡುವುದಿಲ್ಲ’ ಅಂದವರು ಈಗ ಧ್ವನಿ ಎತ್ತಬೇಕು, ಮಾಜಿ ಮಿನಿಸ್ಟರ್‌ ಆಗ್ರಹ

ಇದನ್ನೂ ಓದಿ

GOOD-MORNING-SHIVAMOGGA-NEWS-UPDATE
50 WORDS NEWS

GOOD MORNING SHIMOGA | ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/10/2024
Shivamogga Live Today News
50 WORDS NEWS

ಶಿವಮೊಗ್ಗ ಜಿಲ್ಲೆಯ ಈವರೆಗಿನ ಟಾಪ್‌ 10 ಸುದ್ದಿಗಳು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/10/2024
GOOD-MORNING-SHIVAMOGGA-NEWS-UPDATE
50 WORDS NEWS

GOOD MORNING SHIMOGA | ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/10/2024
GOOD-MORNING-SHIVAMOGGA-NEWS-UPDATE
50 WORDS NEWS

GOOD MORNING | ಒಂದೇ ಕ್ಲಿಕ್‌ನಲ್ಲಿ SHIMOGA ಜಿಲ್ಲೆಯ ಸುದ್ದಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
27/09/2024
Shivamogga Live Today News
50 WORDS NEWS

ಶಿವಮೊಗ್ಗದ ಈವರೆಗಿನ ಸುದ್ದಿಗಳು – ಓದಲು ಇಲ್ಲಿ ಕ್ಲಿಕ್‌ ಮಾಡಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/09/2024
Cops-fined-biker-for-stunt-on-road.
50 WORDS NEWSSHIVAMOGGA CITY

ಶಿವಮೊಗ್ಗದಲ್ಲಿ ಬೈಕ್‌ ಸ್ಟಂಟ್‌ ಮಾಡಿ ಲೈಕ್‌ ಗಿಟ್ಟಿಸುತ್ತಿದ್ದವನು ಈಗ ಟ್ರೋಲ್‌ ಆಗ್ತಿದ್ದಾನೆ – 3 ಫಟಾಫಟ್‌ ನ್ಯೂಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/09/2024
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?