ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜೂನ್ 2020
ಅಮೃತ್ ಯೋಜನೆಯಡಿ ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಹತ್ತಿರ ಮಿಳ್ಳಘಟ್ಟಕ್ಕೆ ಹೋಗುವ ರಸ್ತೆಯಲ್ಲಿ ಎಂಎಸ್.ಕೊಳವೆ ಮಾರ್ಗ ಅಳವಡಿಸಿದೆ. ಈಗಿರುವ ಆರ್.ಎಂ.7 ಕೊಳವೆ ಮಾರ್ಗಕ್ಕೆ ಲಿಂಕ್ ಮಾಡಿ ಚಾಲನೆಗೊಳಿಸಬೇಕಾಗಿದೆ. ಆದ್ದರಿಂದ ಜೂನ್ 10 ಮತ್ತು 11 ರಂದು ನಗರದ ವಿವಿಧೆಡೆ ನೀರು ಸರಬರಾಜು ಇರುವುದಿಲ್ಲ.
ಎಲ್ಲೆಲ್ಲಿ ನೀರು ಬರಲ್ಲ?
ಪೊಲೀಸ್ ಕ್ವಾರ್ಟಸ್, ಟಿಪ್ಪುನಗರ, ತುಂಗಾನಗರ, ಜಿಲ್ಲಾ ಪಂಚಾಯತ್ ಕಚೇರಿ ಎದುರು, ಶಿವಮೂರ್ತಿ ಸರ್ಕಲ್, ಬಸವನಗುಡಿ, ರವೀಂದ್ರನಗರ, ಡಿ.ಸಿ.ಕಾಂಪೌಂಡ್, ಶೇಷಾದ್ರಿಪುರಂ ಟ್ಯಾಂಕ್ಗಳಿಂದ ದೈನಂದಿನ ನೀರು ಪೂರೈಕೆಯಾಗುವ ಪ್ರದೇಶಗಳಿಗೆ ನೀರು ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ KUWS ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200