SHIVAMOGGA LIVE NEWS
ಶಿವಮೊಗ್ಗ| ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ನಿಧನರಾಗಿದ್ದಾರೆ. ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಅವರು ಕೊನೆಯುಸಿರೆಳೆದರು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇವತ್ತು ಶಿವಮೊಗ್ಗ ಸುಬ್ಬಣ್ಣ (SHIMOGA SUBBANNA) ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
![]() |
ಗೊತ್ತಿರಬೇಕಾದ ಸಂಗತಿಗಳಿವು
ವಿಚಾರ 1 ಶಿವಮೊಗ್ಗ ಸುಬ್ಬಣ್ಣ ಅವರ ನಿಜ ಹೆಸರು ಜಿ.ಸುಬ್ರಹ್ಮಣ್ಯಂ. ಹೊಸನಗರ (HOSANAGARA) ತಾಲೂಕು ನಗರ ಗ್ರಾಮದಲ್ಲಿ 1938ರಲ್ಲಿ ಜನನ. ತಂದೆ ಗಣೇಶ್ ರಾವ್ ಮತ್ತು ತಾಯಿ ರಂಗನಾಯಕಮ್ಮ.
ವಿಚಾರ 2 ಸುಬ್ಬಣ್ಣ ಅವರ ತಾತ ಶಾಮಣ್ಣ ಅವರು ಸಂಗೀತ ವಿಧ್ವಾಂಸರು. ಇವರ ಬಳಿಯೆ ಸುಬ್ಬಣ್ಣ ಅವರು ಸಂಗೀತ ಅಭ್ಯಾಸ ಮಾಡಿದರು. ಶಾಮಣ್ಣ ಅವರ ಬಳಿ ಸಂಗೀತ ಕಲಿತ ಹಲವರು ಸಂಗೀತ ಕ್ಷೇತ್ರದಲ್ಲಿ ಪ್ರಖ್ಯಾತರಾಗಿದ್ದಾರೆ. ಕರ್ನಾಟಕ ಕೋಗಿಲೆ ಬಿ.ಕೆ.ಸುಮಿತ್ರಾ (B K SUMITHRA) ಅವರು ಶಾಮಣ್ಣ ಅವರ ಬಳಿ ಸಂಗೀತ ಕಲಿತವರು.
ವಿಚಾರ 3 ಶಿವಮೊಗ್ಗ ಸುಬ್ಬಣ್ಣ ಅವರು ಬಿ.ಎ, ಬಿ.ಕಾಂ, ಎಲ್.ಎಲ್.ಬಿ ಪದವಿ ಪಡೆದಿದ್ದರು. ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ನೋಟರಿಯಾಗಿ (NOTARY) ನೇಮಕವಾಗಿ, ಕೆಲಸ ಮಾಡಿದ್ದರು.
ವಿಚಾರ 4 ವಕೀಲಿ ವೃತ್ತಿಯ ಜೊತೆಗೆ ಹಲವು ಕಾರ್ಯಕ್ರಮಗಳಲ್ಲಿ ಆಗಾಗ ಹಾಡುಗಳನ್ನು ಹೇಳುತ್ತಿದ್ದರು. ಸಭೆ, ಸಮಾರಂಭಗಳಲ್ಲಿ ಸುಬ್ಬಣ್ಣ ಅವರ ಸುಗಮ ಸಂಗೀತ ಕಾರ್ಯಕ್ರಮಗಳು ಬೇಕು ಅನ್ನುವಷ್ಟರ ಮಟ್ಟಿಗೆ ಪ್ರಖ್ಯಾತರಾಗಿದ್ದರು.
ವಿಚಾರ 5 1963ರಲ್ಲಿ ಶಿವಮೊಗ್ಗ ಸುಬ್ಬಣ್ಣ ಅವರು ಆಕಾಶವಾಣಿ ಗಾಯಕರಾಗಿ ಆಯ್ಕೆಯಾದರು. ಆಕಾಶವಾಣಿ (AKASHAVANI) ಎಂ.ಎಸ್.ಐ.ಎಲ್. ಪ್ರಾಯೋಜಕತ್ವದಲ್ಲಿ ಪ್ರಸಾರ ಮಾಡಿದ ಜನಪ್ರಿಯ ಕಾರ್ಯಕ್ರಮದಲ್ಲಿ ‘ಕೋಡಗನ ಕೋಳಿ ನುಂಗಿತ್ತಾ’, ‘ಅಳಬೇಡಾ ತಂಗಿ ಅಳಬೇಡ’ ‘ಬಿದ್ದೀಯಬ್ಬೇ ಮುದುಕಿ’ ಮೊದಲಾದ ಶಿಶುನಾಳ ಷರೀಫರ ಗೀತೆಗಳನ್ನು ಹಾಡಿದ ಸುಬ್ಬಣ್ಣ ಅವರು ಮನೆ ಮಾತಾಗಿದ್ದರು.
ವಿಚಾರ 6 ನಾಟಕಕಾರ, ಚಿತ್ರ ನಿರ್ದೇಶಕ ಚಂದ್ರಶೇಖರ ಕಂಬಾರ ಅವರ ‘ಕರಿಮಾಯಿ’ ಸಿನಿಮಾ ಮೂಲಕ ಶಿವಮೊಗ್ಗ ಸುಬ್ಬಣ್ಣ ಅವರು ಸಿನಿಮಾ ಹಿನ್ನಲೆ ಗಾಯಕರಾದರು. ‘ಕಾಡು ಕುದುರೆ’ (KAADU KUDURE) ಸಿನಿಮಾದ ಟೈಟಲ್ ಸಾಂಗ್ ‘ಕಾಡು ಕುದುರೆ ಓಡಿ ಬಂದಿತ್ತಾ’ ಹಾಡನ್ನು ಶಿವಮೊಗ್ಗ ಸುಬ್ಬಣ್ಣ ಅವರು ಹಾಡಿದ್ದರು. ಈ ಹಾಡು ಜನಪ್ರಿಯವಾಯಿತು. ಅಲ್ಲದೆ ರಾಷ್ಟ್ರಪ್ರಶಸ್ತಿಯನ್ನು ಪಡೆಯಿತು. ಹಿನ್ನೆಲೆ ಗಾಯನಕ್ಕೆ ರಾಷ್ಟ್ರಪ್ರಶಸ್ತಿ ಪಡೆದ ಮೊದಲ ಗಾಯಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
ವಿಚಾರ 7 ಶಿವಮೊಗ್ಗ ಸುಬ್ಬಣ್ಣ ಅವರಿಗೆ ರಾಜ್ಯ ಸರ್ಕಾರ ಪ್ರತಿಷ್ಠಿತ ‘ಸಂತ ಶಿಶುನಾಳ ಷರೀಫ ಪ್ರಶಸ್ತಿ’, ‘ರಾಜ್ಯೋತ್ಸವ ಪ್ರಶಸ್ತಿ’, ಸಂಗೀತ ಅಕಾಡಮಿಯ ‘ಕರ್ನಾಟಕ ಕಲಾ ತಿಲಕ ಪ್ರಶಸ್ತಿ’ ನೀಡಿ ಗೌರವಿಸಿದೆ. ರಾಜ್ಯದ ವಿವಿಧ ಸಂಘ – ಸಂಸ್ಥೆಗಳು, ಸಾರ್ವಜನಿಕರು ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸಿದ್ದರು.
ವಿಚಾರ 8 ಕುವೆಂಪು ವಿಶ್ವವಿದ್ಯಾಲಯ (KUVEMPU UNIVERSITY) 2008ರಲ್ಲಿ 18ನೇ ಘಟಿಕೋತ್ಸವದಲ್ಲಿ ಶಿವಮೊಗ್ಗ ಸುಬ್ಬಣ್ಣ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿತ್ತು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ವರ್ಗಾವಣೆ, ಎಲ್ಲಿಗೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200