SHIVAMOGGA LIVE NEWS, 28 NOVEMBER 2024
ನವದೆಹಲಿ : ಕೇಂದ್ರದ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ ಮಲೆನಾಡು, ಕರಾವಳಿ ಭಾಗದ ಸಂಸದರ ಹಾಗೂ ಬೆಳೆಗಾರರ ನಿಯೋಗ ಅಡಿಕೆ (Adike) ಬೆಳೆಯುವವರು ಎದುರಿಸುತ್ತಿರುವ ಸಮಸ್ಯೆಗಳ ವಿಷಯವಾಗಿ ಚರ್ಚಿಸಿತು. ಬೆಳೆಗಾರರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಸಚಿವರಿಗೆ ನಿಯೋಗ ಮನವಿ ಮಾಡಿತು.
ಶಿವಮೊಗ್ಗದಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರವನ್ನು ಶೀಘ್ರ ಸ್ಥಾಪಿಸಲು ಮನವಿ ಮಾಡಲಾಯಿತು. ಡಿ. 6ರಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆಯಲಿರುವ ಅಡಿಕೆ ಬೆಳೆಗಾರರ ಸಭೆಗೆ ಸಚಿವರನ್ನು ಆಹ್ವಾನಿಸಲಾಯಿತು.
ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ, ಬೆಳೆಗಾರರಾದ ಹೆಚ್.ಎಸ್.ಮಂಜಪ್ಪ, ಯು.ಹೆಚ್.ರಾಮಪ್ಪ, ಅನಿಲ್ ವೋಡೆಯಾರ್, ಮಲ್ಲಿಕಾರ್ಜುನ ಗೋಪಾಲಕೃಷ್ಣ ವೈದ್ಯ, ಪ್ರಕಾಶ ಹೆಗಡೆ, ಗಿರೀಶ್ ಹೆಗಡೆ ಮತ್ತು ನರಸಿಂಹ ಹೆಗಡೆ ಈ ಸಂದರ್ಭದಲ್ಲಿ ಇದ್ದರು.
ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ಹೆದ್ದಾರಿ, ಅಪಾಯಕಾರಿ ಸ್ಥಿತಿಯಲ್ಲಿದ್ದ ಕಂಬಗಳು ಸುಸ್ಥಿತಿಗೆ
Adike Growers
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200