ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 28 NOVEMBER 2024
ನವದೆಹಲಿ : ಕೇಂದ್ರದ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ ಮಲೆನಾಡು, ಕರಾವಳಿ ಭಾಗದ ಸಂಸದರ ಹಾಗೂ ಬೆಳೆಗಾರರ ನಿಯೋಗ ಅಡಿಕೆ (Adike) ಬೆಳೆಯುವವರು ಎದುರಿಸುತ್ತಿರುವ ಸಮಸ್ಯೆಗಳ ವಿಷಯವಾಗಿ ಚರ್ಚಿಸಿತು. ಬೆಳೆಗಾರರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಸಚಿವರಿಗೆ ನಿಯೋಗ ಮನವಿ ಮಾಡಿತು.
ಶಿವಮೊಗ್ಗದಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರವನ್ನು ಶೀಘ್ರ ಸ್ಥಾಪಿಸಲು ಮನವಿ ಮಾಡಲಾಯಿತು. ಡಿ. 6ರಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆಯಲಿರುವ ಅಡಿಕೆ ಬೆಳೆಗಾರರ ಸಭೆಗೆ ಸಚಿವರನ್ನು ಆಹ್ವಾನಿಸಲಾಯಿತು.

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ, ಬೆಳೆಗಾರರಾದ ಹೆಚ್.ಎಸ್.ಮಂಜಪ್ಪ, ಯು.ಹೆಚ್.ರಾಮಪ್ಪ, ಅನಿಲ್ ವೋಡೆಯಾರ್, ಮಲ್ಲಿಕಾರ್ಜುನ ಗೋಪಾಲಕೃಷ್ಣ ವೈದ್ಯ, ಪ್ರಕಾಶ ಹೆಗಡೆ, ಗಿರೀಶ್ ಹೆಗಡೆ ಮತ್ತು ನರಸಿಂಹ ಹೆಗಡೆ ಈ ಸಂದರ್ಭದಲ್ಲಿ ಇದ್ದರು.
ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ಹೆದ್ದಾರಿ, ಅಪಾಯಕಾರಿ ಸ್ಥಿತಿಯಲ್ಲಿದ್ದ ಕಂಬಗಳು ಸುಸ್ಥಿತಿಗೆ
Adike Growers
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





