ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 14 ಡಿಸೆಂಬರ್ 2019
ಮಂದಗತಿಯಲ್ಲಿ ಸಾಗುತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಚುರುಕು ಮುಟ್ಟಿಸೋಕೆ, ಇವತ್ತು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಆರು ತಿಂಗಳಲ್ಲಿ ಶಿವಮೊಗ್ಗಕ್ಕೆ ವಿಮಾನ ಬರಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ.
ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೇರಿದಂತೆ ಹಲವರು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ಏನೆಲ್ಲ ಚರ್ಚೆಯಾಯ್ತು?
ವಿಮಾನ ನಿಲ್ದಾಣ ಕಾಮಾಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು ಕಾಮಗಾರಿ ವೇಗ ಹೆಚ್ಚಿಸಲು ಸಭೆಯಲ್ಲಿ ಸೂಚಿಸಲಾಯಿತು.
ಕಾಮಾಗಾರಿ ವೇಗ ಹೆಚ್ಚಿಸಲು 4 ಜಿ ಅನುಮತಿ ನೀಡಲು ಸಭೆಯಲ್ಲಿ ಸೂಚಿಸಲಾಯಿತು.
ರನ್ ವೇಯನ್ನು 1.2 ಕಿಲೋಮೀಟರ್ ನಿಂದ 2.1 ಕಿಲೋಮೀಟರ್ ಗೆ ಹೆಚ್ಚಿಸಲು ಅನುಮತಿ ನೀಡಲಾಯಿತು.

ಕಾಮಗಾರಿಗೆ ಈಗಾಗಲೇ 40 ಕೋಟಿ ಹಣವನ್ನು ನೀಡಲಾಗಿದ್ದು ತಕ್ಷಣವೇ ಕೆಲಸ ಆರಂಭಿಸಬೇಕು.
ಕಾಮಗಾರಿಗೆ ಈಗಾಗಲೇ 40 ಕೋಟಿ ಹಣವನ್ನು ನೀಡಲಾಗಿದ್ದು ತಕ್ಷಣವೇ ಕೆಲಸ ಆರಂಭಿಸಬೇಕು. ಅದನ್ನು 150 ಕೋಟಿ ರೂ.ಗೆ ಪರಿಷ್ಕರಿಸಲು ಅಗತ್ಯ ಕ್ರಮ ಕೈಗೊಲ್ಳುವುದು.
ಲೋಕೋಪಯೋಗಿ ಇಲಾಖೆ ವತಿಯಿಂದ ವಿಮಾನ ನಿಲ್ದಾಣ ನಿರ್ಮಾಣ. ಎರಡು ಹಂತದಲ್ಲಿ ಕಾಮಗಾರಿಯ ಅನುಷ್ಠಾನ.
ಡಿಸೆಂಬರ್ ಅಂತ್ಯಕ್ಕೆ ವಿಮಾನ ನಿಲ್ದಾಣ ಕಾಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿ ಪ್ರಾರಂಭ, 2020ರ ಫೆಬ್ರವರಿ ಅಂತ್ಯಕ್ಕೆ ನಿಲ್ದಾಣ ಕಾಮಗಾರಿ ಶುರುಮಾಡಲು ಸಮಯ ನಿಗದಿ.

ಒಂದು ವಾರದೊಳಗೆ ಎಲ್ಲ ರೀತಿಯ ಪೇಪರ್ ವರ್ಕ್ ಮುಗಿಸಿ ಕೆಲಸ ಆರಂಭಿಸಲು ಸೂಚನೆ.
ಇನ್ನು 6 ತಿಂಗಳ ಒಳಗೆ ಶಿವಮೊಗ್ಗದಲ್ಲಿ ವಿಮಾನಗಳು ಹಾರಾಡಬೇಕು. ಇಲ್ಲದಿದ್ದರೆ ಅದಕ್ಕೆ ನೀವೇ ಜವಬ್ದಾರರಾಗುತ್ತೀರ ಅಂತ ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ ನೀಡಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
Chief Minister B S Yedyurappa holds a special meeting with the officials and Shimoga MP BY Raghavendra, MLC Rudregowda, DC KB Shivakumar on Airport in Bengaluru.
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






