SHIMOGA NEWS, 18 OCTOBER 2024 : ಕೃಷಿ ಇಲಾಖೆಯ ಕೃಷಿ (Farmers) ಸಂಸ್ಕರಣೆ ಯೋಜನೆಯಡಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಿಟ್ಟಿನ ಗಿರಣಿ, ಖಾರ ಕುಟ್ಟುವ ಯಂತ್ರ, ಶಾವಿಗೆ ಯಂತ್ರ, ಭತ್ತದ ಮಿಲ್, ರೊಟ್ಟಿ ಮಾಡುವ ಯಂತ್ರ ಹಾಗೂ ಸಣ್ಣ ಎಣ್ಣೆ ಗಾಣಗಳು ಸರ್ಕಾರ ಸಹಾಯಧನದಲ್ಲಿ ಲಭ್ಯವಿದೆ. ಇದಕ್ಕೆ ರೈತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಿಗೆ ಸಂಪರ್ಕಿಸಬಹುದಾಗಿದೆ. ಅಲ್ಲಿಯೇ ಅರ್ಜಿ ಸಲ್ಲಿಸಿ ಈ ಯೋಜನೆಯ ಉಪಯೋಗ ಪಡೆಯುವಂತೆ ಜಂಟಿ ಕೃಷಿ ನಿರ್ದೇಶಕರ ಡಾ. ಎಂ. ಕಿರಣ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನೂ ಓದಿ » ರೈಲ್ವೆ ಟಿಕೆಟ್ ಬುಕಿಂಗ್, ನವೆಂಬರ್ 1ರಿಂದ ಹೊಸ ನಿಯಮ ಜಾರಿಗೆ

