ಶಿವಮೊಗ್ಗ LIVE
ಭದ್ರಾವತಿ: ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಹೊಟೇಲ್ (Hotel) ಮಾಲೀಕನತ್ತ ಮಚ್ಚು ಬೀಸಿದ್ದಾನೆ. ಆದೃಷ್ಟವಶಾತ್ ಹೊಟೇಲ್ ಮಾಲೀಕ ಪಾರಾಗಿದ್ದಾರೆ. ಭದ್ರಾವತಿಯ ವೀರಶೈವ ಸಭಾಭವನದ ಸಮೀಪ ರಾಮಾವರಂ ಹೊಟೇಲ್ನಲ್ಲಿ ಘಟನೆ ನಡೆದಿದೆ.
ರಾತ್ರಿ 10 ಗಂಟೆ ಹೊತ್ತಿಗೆ ಹೊಟೇಲ್ ಬಂದ್ ಮಾಡುವಾಗ ವ್ಯಕ್ತಿಯೊಬ್ಬ ಮಚ್ಚು ಹಿಡಿದು ಬಂದಿದ್ದ. ಊಟ ಕೊಡುವಂತೆ ಕೇಳಿದ್ದ. ಹೊಟೇಲ್ ಬಂದ್ ಮಾಡುತ್ತಿರುವುದರಿಂದ ಊಟವಿಲ್ಲ ಎಂದು ಮಾಲೀಕ ರವೀಂದ್ರ ತಿಳಿಸಿದ್ದರು. ಹೊಟೇಲ್ ಬಾಗಿಲು ಹಾಕಿ ಮಾಲೀಕ ರವೀಂದ್ರ ಹೊರಗೆ ತೆರಳುತ್ತಿದ್ದಂತೆ ಅಲ್ಲಿಯೇ ಇದ್ದ ವ್ಯಕ್ತಿ ಏಕಾಏಕಿ ಮಚ್ಚು ಬೀಸಿದ್ದಾನೆ. ರವೀಂದ್ರ ಪಾರಾಗಿದ್ದು ಕೆಳಗೆ ಬಿದ್ದಿದ್ದಾರೆ.

ಹೊಟೇಲ್ ಸಿಬ್ಬಂದಿ ತಕ್ಷಣ ರಕ್ಷಣೆಗೆ ಧಾವಿಸಿದ್ದರು. ಆಗ ಮಚ್ಚು ಹಿಡಿದುಕೊಂಡಿದ್ದ ವ್ಯಕ್ತಿ ಕಾರಿನಲ್ಲಿ ತೆರಳಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಭದ್ರಾವತಿ ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ‘ಕರಿ ಟೋಪಿ, ಗಣವೇಷವೇ ಕಾಂಗ್ರೆಸ್ಗೆ ಕೊನೆಯ ಮೊಳೆ ಹೊಡೆಯಲಿದೆʼ
Hotel
LATEST NEWS
- BREAKING NEWS – ತೀರ್ಥಹಳ್ಳಿಯಲ್ಲಿ ಭೀಕರ ಅಪಘಾತ

- ಕೆಂಚನಾಲ ಮಾರಿಕಾಂಬ ಜಾತ್ರೆ, ರಾಜ್ಯದ ಎಲ್ಲೆಡೆಗಿಂತಲು ವಿಭಿನ್ನ, ಹೇಗಿರುತ್ತೆ ಮಹೋತ್ಸವ?

- ಒಂದು ಲಕ್ಷದ ಸನಿಹಕ್ಕೆ ಅಡಿಕೆ ರೇಟ್ | 13 ಜನವರಿ 2026 | ಇವತ್ತಿನ ಅಡಿಕೆ ಧಾರಣೆ

- ಶಬರಿಮಲೈ ಸಮೀಪ ಶಿವಮೊಗ್ಗ, ಭದ್ರಾವತಿ ಮಾಲಾಧಾರಿಗಳಿಂದ ದಿಢೀರ್ ಪ್ರತಿಭಟನೆ, ಕಾರಣವೇನು?
- ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೈಬರ್ ವಂಚಕರ ಕಾಟ, ಆಗಿದ್ದೇನು? ಪ್ರಕಟಣೆಯಲ್ಲಿ ಡಿಸಿ ಹೇಳಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





