ಮಲೆನಾಡಿನಲ್ಲಿ ಶ್ರದ್ಧಾ ಭಕ್ತಿಯ ಭೂಮಿ ಹುಣ್ಣಿಮೆ, ಹೇಗಿರುತ್ತೆ ಸಿದ್ಧತೆ? ಆಚರಣೆ ವಿಧಾನವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಅಕ್ಟೋಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮಲೆನಾಡಿನ ರೈತರು ಶ್ರದ್ಧಾ, ಭಕ್ತಿಯಿಂದ ಭೂಮಿ ಹುಣ್ಣಿಮೆಯನ್ನು ಆಚರಿಸಿದರು. ಹೊಲದಲ್ಲಿ ಬೆಳೆದು ನಿಂತ ಫಸಲಿಗೆ ಪೂಜೆ ಸಲ್ಲಿಸಿ, ಉತ್ತಮ ಬೆಳೆಗಾಗಿ ಪ್ರಾರ್ಥಿಸಿದರು. ಮಲೆನಾಡು ಭಾಗದ ರೈತರು ಆಚರಿಸುವ ಶೀಗಿ ಹುಣ್ಣಿಮೆ ಅಥವಾ ಭೂಮಿ ಹುಣ್ಣಿಮೆ ಹಲವು ವಿಶೇಷತೆಗಳನ್ನು ಒಳಗೊಂಡಿದೆ.

ತುಂಬು ಗರ್ಭಿಣಿಗೆ ಸೀಮಂತ ಶಾಸ್ತ್ರ ಮಾಡುವಂತೆ ಭೂಮಿ ತಾಯಿಗೆ ಪೂಜೆ ಸಲ್ಲಿಸಲಾಗುತ್ತದೆ. ವಿಶೇಷ ಖಾದ್ಯಗಳನ್ನು ತಯಾರಿಸಿ, ಭೂಮಣ್ಣಿ ಬುಟ್ಟಿಗಳಲ್ಲಿ ಕೊಂಡೊಯ್ದು ಎಡೆ ಇಡಲಾಗುತ್ತದೆ. ಭೂಮಿ ತಾಯಿಗೆ ಪೂಜೆ ಸಲ್ಲಿಸಿ, ಹಬ್ಬದ ಅಡುಗೆಯನ್ನು ಎಲ್ಲೆಡೆ ಬೀರಲಾಗುತ್ತದೆ.

ಮನೆಯವರೆಲ್ಲ ಹೊಲದಲ್ಲೇ ಕುಳಿತು ಊಟ ಮಾಡಿ ಮನೆಗೆ ಮರಳುತ್ತಾರೆ. ಅನ್ನದಾತರು ಶ್ರದ್ಧಾ ಭಕ್ತಿಯಿಂದ ಈ ಪೂಜೆ ಸಲ್ಲಿಸುತ್ತಾರೆ. ಭೂಮಿ ತಾಯಿಗೆ ವಿಶೇಷ ಗೌರವ ಸಲ್ಲಿಸುವ ಆಚರಣೆ ಇದಾಗಿದೆ. ಇದಕ್ಕಾಗಿ ಒಂದು ವಾರದ ಸಿದ್ಧತೆಯೂ ಇರಲಿದೆ.

ಭೂಮಣ್ಣಿ ಬುಟ್ಟಿ ತಯಾರಿ

ಭೂಮಿ ಹುಣ್ಣಿಮೆಯಲ್ಲಿ ಭೂಮಣ್ಣಿ ಬುಟ್ಟಿಗೆ ವಿಶೇಷ ಸ್ಥಾನ. ಬುಟ್ಟಿಗೆ ಸಗಣಿ, ಕೆಮ್ಮಣ್ಣು ಹಚ್ಚಲಾಗುತ್ತದೆ. ಅದರ ಮೇಲೆ ಅಕ್ಕಿ ಹಿಟ್ಟಿನಲ್ಲಿ ಹಸೆ ಚಿತ್ತಾರಗಳನ್ನು ಬಿಡಿಸಲಾಗುತ್ತದೆ. ಒಂದು ದೊಡ್ಡ ಬುಟ್ಟಿ ಮತ್ತೊಂದು ಚಿಕ್ಕ ಬುಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಎರಡು ಬುಟ್ಟಿಗಳಿಗೆ ಮಹಿಳೆಯರು ಅಲಂಕಾರ ಮಾಡುತ್ತಾರೆ. ದಸರಾ ಹಬ್ಬ ಮುಗಿಯುತ್ತಿದ್ದಂತೆ ಭೂಮಣ್ಣಿ ಬುಟ್ಟಿ ಸಿದ್ಧತಾ ಕಾರ್ಯ ಶುರುವಾಗಲಿದೆ.

ADVT JULY NANJAPPA HOSPITAL HOME LAB TESTING

ಇಡಿ ರಾತ್ರಿ ಅಡುಗೆ

ಭೂಮಿ ಹುಣ್ಣಿಮೆ ಪೂಜೆ ಹಿನ್ನೆಲೆ ಮಹಿಳೆಯರು ರಾತ್ರಿ ಪೂರ್ತಿ ಅಡುಗೆ ಮಾಡುತ್ತಾರೆ. ವಿಶೇಷ ಖಾದ್ಯಗಳನ್ನು ತಯಾರಿಸುತ್ತಾರೆ. ಹಲವು ತರಕಾರಿಗಳು, ಸೊಪ್ಪುಗಳನ್ನು ಹಾಕಿ ಬೇಯಿಸಿ ಹಚ್ಚಂಬಲಿ ತಯಾರಿ ಮಾಡುತ್ತಾರೆ. ಹಚ್ಚಂಬಲಿಯನ್ನು ಬುಟ್ಟಿಯಲ್ಲಿ ಇರಿಸಿಕೊಂಡು, ಪೂಜೆಯಾದ ಬಳಿಕ ಗದ್ದೆಯ ತುಂಬೆಲ್ಲ ಬೀರಲಾಗುತ್ತದೆ. ‘ಹಚ್ಚಂಬಲಿ.. ಹಾಲಂಬಲಿ.. ಗುಡ್ಡದ ಮೇಲಿನ ನೂರೊಂದು ಕುಡಿ ಭೂ ತಾಯಿ ಬಂದು ಉಂಡೋಗಲಿ’ ಎಂದು ಹಾಡುತ್ತ ಹಚ್ಚಂಬಲಿಯನ್ನು ಬೀರಲಾಯಿತು.

AVvXsEjXw JFDtUEW6JU2vQswJ4ZAi0vqiIIjsFVf1y6hGqB5rbess6fqXoabKrOT3IpuGVt31JeacII90GJiV4SgCf4SIiBQKRMvPcQqzo sxs82xTMNhgJsQgCEswKSaXaxRweAMHWMIFo9EHWYHt3U Kc9qZ3A4BPDA6jKao19GdD5VY8cbYtsMH6 VF4yQ=s926

ಫಸಲಿಗೆ ತಾಳಿ ಕಟ್ಟುತ್ತಾರೆ

ಬೆಳೆದು ನಿಂತ ಫಸಲಿಗೆ ಒಂದು ಕಡೆಯಲ್ಲಿ ಪುಟ್ಟ ಮಂಟಪ ನಿರ್ಮಿಸಿ, ಹೂವು ಕಟ್ಟಿ, ಬಾಳೆಗೊನೆಯನ್ನು ನಿಲ್ಲಿಸಿ ಪೂಜೆ ಸಲ್ಲಿಸಲಾಗುತ್ತದೆ. ಈ ವೇಳೆ ಫಸಲಿಗೆ ತಾಳಿಯನ್ನು ಕಟ್ಟಕಲಾಗುತ್ತದೆ. ಕೆಲವು ಕಡೆ ಮಹಿಳೆಯರು ತಮ್ಮದೇ ತಾಳಿಯನ್ನು ತೆಗೆದು ಭೂಮಿ ತಾಯಿಗೆ ಕಟ್ಟುತ್ತಾರೆ. ಉಳಿದ ಕಡೆಯಲ್ಲಿ ದೇವರ ಮನೆಯಲ್ಲಿರಿಸಿದ ತಾಳಿಯನ್ನು ಫಸಲಿಗೆ ಕಟ್ಟಲಾಗುತ್ತದೆ.

1632381453891714 0

ಕಾಗೆ, ಇಲಿಗಳಿಗೆ ಎಡೆ

ಭೂಮಿ ಹುಣ್ಣಿಮೆಯಂದು ರೈತರು ಕಾಗೆಗಳು, ಇಲಿಗಳಿಗೆ ಎಡೆ ಇಡುತ್ತಾರೆ. ನಿಧನರಾದ ಕುಟುಂಬದ ಹಿರಿಯರಿಗೆ ಎಡೆ ಅರ್ಪಿಸಲಾಗುತ್ತದೆ. ಅದಕ್ಕಾಗಿ ಕಾಗೆಗಳಿಗೆ ಒಂದೆಡೆ ಎಡೆ ಇಡಲಾಗುತ್ತದೆ. ಇನ್ನು, ಬೆಳೆ ಹಾನಿ ಮಾಡುವ ಇಲಿಗಳಿಗೂ ಎಡೆಯಲ್ಲಿ ಪಾಲು ಕೊಡಲಾಗುತ್ತದೆ. ತಮ್ಮ ಬೆಳೆಗಳನ್ನು ಹಾನಿ ಮಾಡಬೇಡ ಎಂದು ಪ್ರಾರ್ಥಿಸಿ ರೈತರು ಇಲಿಗಳಿಗೆ ಎಡೆ ಅರ್ಪಿಸುತ್ತಾರೆ.

ಹೊಲದಲ್ಲಿ ಕಡಬು ಹುಗಿಯುತ್ತಾರೆ

ಪೂಜೆಗೆ ತಂದ ಕಡಬನ್ನು ಗದ್ದೆಯ ಒಂದು ಭಾಗದಲ್ಲಿ ಹೂಳಲಾಗುತ್ತದೆ. ಭತ್ತದ ಕೊಯ್ಲಿನ ಸಂದರ್ಭ ಈ ಕಡಬನ್ನು ಹೊರಗೆ ತೆಗೆಯುತ್ತಾರೆ. ಆ ದಿನ ಅಡುಗೆ ವೇಳೆ ಆ ಕಡಬು ಹಾಕಲಾಗುತ್ತದೆ. ಕೊಯ್ಲಿಗೆ ಬಂದವರಿಗೆಲ್ಲ ಪ್ರಸಾದದ ರೀತಿಯಲ್ಲಿ ಕೊಡಲಾಗುತ್ತದೆ.

SHIVAMOGGA LIVE CONTATCT

ಒಗ್ಗೂಡಿ ಊಟ ಮಾಡುತ್ತಾರೆ

ಭೂಮಿ ಹುಣ್ಣೆಮೆಯನ್ನು ರೈತ ಕುಟುಂಬಗಳು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತವೆ. ದೂರದೂರುಗಳಲ್ಲಿ ಇರುವ ಕುಟುಂಬದ ಸದಸ್ಯರು ಪೂಜೆಗಾಗಿ ಊರಿಗೆ ಮರಳುತ್ತಾರೆ. ಎಲ್ಲರೂ ಒಗ್ಗೂಡಿ ಹೊಲಗಳಿಗೆ ತೆರಳಿ ಪೂಜೆ ಸಲ್ಲಿಸಿ, ಒಟ್ಟಿ ಕುಳಿತು ಹೊಲದಲ್ಲಿ ಊಟ ಮಾಡುತ್ತ್ತಾರೆ. ಉತ್ತಮ ಬೆಳೆ ನೀಡುವಂತೆ ಎಲ್ಲರೂ ಭೂಮಿ ತಾಯಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ.

ಕೃಷಿ ಚಟುವಟಿಕೆ ಮತ್ತು ನಿಸರ್ಗಕ್ಕೆ ಪೂಜನೀಯ ಸ್ಥಾನ ನೀಡಿ, ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಆಧುನಿಕತೆಯ ಅಬ್ಬರದ ನಡುವೆಯು, ಭೂಮಿ ಪೂಜೆ ಸಂಪ್ರದಾಯ ಮುಂದುವರೆಯುತ್ತಿದೆ. ಹೆಚ್ಚು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ.

AVvXsEh1MSdwcqOUG hfMK9ObUTmqXRdSFuozE5Ru3nEd9vpPuPb5NEirHoKGgX8bcMAkY34A6X8QwPL2S15eoi57e8bcb9 EXGOpOiV H2GB8cgDveU3rd6X5cG2LwuhK0ZO8SGJH8Whlc53HSy0z8fy0Hn47lKBVL4 igLunvIMdLjV9kWE1WXhuAo19RbA=s926

AVvXsEgKVFyOzfAYQTTrqfztRfWO7KeJFYVxjjEXezXckGHjeuyjP2ut85qNSGA3Yw68srskjYj47n5ap5iCc AcDlxWrhCnDFsu2ZJRtt8ptDRh4JE2boOodI3XMyN8H1URDy34fAWGd

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment