ಸಾಗರ: ದೇವರ (God) ಹೆಸರಿನಲ್ಲಿ ಹೇಳಿ ಹಣ, ಸರ, ಕಾಲು ಚೈನ್ ಪಡೆದ ಇಬ್ಬರು ಪರಾರಿಯಾಗಿದ್ದಾರೆ. ಸಾಗರ ತಾಲೂಕಿನ ಖೈರಾ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಪ್ರಜ್ವಲ್ ಎಂಬುವವರ ಮನೆಗೆ ಬೆಳಗ್ಗೆ 7 ಗಂಟೆ ಹೊತ್ತಿಗೆ ಬಂದ ಇಬ್ಬರು ಅಪರಿಚಿತರು ದೇವರ ಹೆಸರು ಹೇಳಿ 1000 ರೂ. ಹಣ ಪಡೆದಿದ್ದಾರೆ. ಅಲ್ಲದೆ 3000 ರೂ. ಮೌಲ್ಯದ ಸರವನ್ನ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಇನ್ನು, ನೇತ್ರಾವತಿ ಎಂಬುವವರ ಮನೆ ಬಳಿ ಹೋಗಿ, ಅವರಿಗೆ ಮೋಸ ಮಾಡಿ 700 ರೂ. ನಗದು, ಕಾಲಚೈನ್ಗಳನ್ನು ಪಡೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಪಾಕ್ ಮೇಲೆ ದಾಳಿ, ಶಿವಮೊಗ್ಗದಲ್ಲಿ ನಡೆಯಿತು ಮಾಕ್ ಡ್ರಿಲ್, ಎಲ್ಲಿ? ಏನೆಲ್ಲ ಚಟುವಟಿಕೆ ನಡೆಯಿತು?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200