ಕುವೆಂಪು ವಿವಿ: ಮೂವರಿಗೆ ಗೌರವ ಡಾಕ್ಟರ್‌, ರಾಜ್ಯಪಾಲರ ಅನುಮೋದನೆ, ಹೆಸರು ಘೋಷಣೆ

ಶಂಕರಘಟ್ಟ: ಸಮಾಜವಾದಿ ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಕೋಣಂದೂರು ಲಿಂಗಪ್ಪ, ರಂಗಕರ್ಮಿ ಮತ್ತು ನೀನಾಸಂ ನಿರ್ದೇಶಕ ಕೆ. ವಿ. ಅಕ್ಷರ ಮತ್ತು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್)‌ ನ ಮಾಜಿ ನಿರ್ದೇಶಕ ಪ್ರೊ. ಹೆಚ್.‌ ಎ. ರಂಗನಾಥ್‌ ಅವರಿಗೆ ಕುವೆಂಪು ವಿ‍ಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ (Honorary Doctorate) ಘೋಷಣೆಯಾಗಿದೆ.

ಮೇ 6ರಂದು ಕುವೆಂಪು ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 35ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುತ್ತದೆ ಎಂದು ಕುವೆಂಪು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

Kuvempu-University-Board

ಗೌರವ ಡಾಕ್ಟರೇಟ್‌ ನೀಡಲು ರಾಜ್ಯಪಾಲರಿಂದ ಅಧಿಕೃತ ಅನುಮೋದನೆ ದೊರೆತಿದೆ. ರಾಜ್ಯದ ಮೂವರು ಸಾಧಕರಿಗೆ ಕುವೆಂಪು ವಿವಿ ಗೌರವ ಸಲ್ಲಿಸಲಿದೆ ಎಂದು ತಿಳಿಸಲಾಗಿದೆ. ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದ ಸೇವೆಗಾಗಿ ಕೋಣಂದೂರು ಲಿಂಗಪ್ಪ, ರಂಗಭೂಮಿಯ ಸೇವೆಗೆ ಕೆ. ವಿ. ಅಕ್ಷರ ಹಾಗೂ ಶಿಕ್ಷಣ ಕ್ಷೇತ್ರದ ಸೇವೆಗೆ ಪ್ರೊ. ಎಚ್. ಎ. ರಂಗನಾಥ್‌ ಅವರು ಈ ಗೌರವಕ್ಕೆ ಭಾಜನರಾಗಿದ್ದಾರೆ.

ಇದನ್ನೂ ಓದಿ : ಕುವೆಂಪು ವಿವಿಯ 79 ವಿದ್ಯಾರ್ಥಿಗಳಿಗೆ 155 ಚಿನ್ನದ ಪದಕ, ಯಾರೆಲ್ಲ ಎಷ್ಟು ಸ್ವಣ ಪದಕ ಪಡೆದಿದ್ದಾರೆ?

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 4, 2026 at 3:30 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 4, 2026