ಮೊದಲ ದಿನ ಪೋಷಕರಿಂದ ಮಕ್ಕಳಿಗೆ ಅಕ್ಷರಭ್ಯಾಸ, ಶಾರದಾಂಬೆ ಸನ್ನಿಧಿಯಲ್ಲಿ ಪ್ರತಿ ವಿದ್ಯಾರ್ಥಿ ಹೆಸರಿನಲ್ಲಿ ಸಂಕಲ್ಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 JUNE 2024

EDUCATION NEWS : ರಾಜ್ಯಾದ್ಯಂತ ಶಾಲೆಗಳು ಪುನಾರಂಭವಾಗಿವೆ. ಶಿಕ್ಷಕರು, ಶಾಲೆ ಆಡಳಿತ ಮಂಡಳಿ ವಿಭಿನ್ನವಾಗಿ ವಿದ್ಯಾರ್ಥಿಗಳನ್ನು ಸ್ವಾಗತಿಸುತ್ತಿರುವುದು ವರದಿಯಾಗುತ್ತಿವೆ. ಶಿವಮೊಗ್ಗದ ಶಾಲೆಯೊಂದರ ಆಡಳಿತ ಮಂಡಳಿ ಮೊದಲ ದಿನ (First Day) ವಿಶೇಷ ಪೂಜೆ ನೆರವೇರಿಸಿ, ಪೋಷಕರಿಂದ ಅಕ್ಷರಭ್ಯಾಸ ಮಾಡಿಸಿದೆ.

ನಗರದ ಜೈನ್‌ ಪಬ್ಲಿಕ್‌ ಶಾಲೆಯಲ್ಲಿ ಮೊದಲ ದಿನ ಸರಸ್ವತಿ ಪೂಜೆ ನೆರವೇರಿಸಲಾಯಿತು. ಪೋಷಕರು ತಮ್ಮ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು. ಶೃಂಗೇರಿಯ ಶ್ರೀ ಶಾರದಾಂಬೆ ಸನ್ನಿಧಿಯಲ್ಲಿ ಪ್ರತಿ ವಿದ್ಯಾರ್ಥಿ ಹೆಸರಿನಲ್ಲಿ ಸಂಕಲ್ಪ ಮಾಡಿಸಲಾಗಿತ್ತು. ಅದರ ಪ್ರಸಾದ ವಿನಿಯೋಗ ನೆರವೇರಿಸಲಾಯಿತು. ಪ್ರತಿ ಮಗುವಿನ ಹಸ್ತಪ್ರತಿ ತೆಗೆದು ಪೋಷಕರಿಗೆ ಉಡುಗೊರೆಯಾಗಿ ನೀಡಲಾಯಿತು.

ಇದನ್ನೂ ಓದಿ – ಮುಂಗಾರು ಮಳೆ ಕುರಿತು ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ

ಪ್ರಾಂಶುಪಾಲರಾದ ಪ್ರಿಯದರ್ಶಿನಿ, ಸಿಒಒ ಸುಮಂತ್‌, ಸೌಲಭ್ಯ ವ್ಯವಸ್ಥಾಪಕ ವಿಜಯ್‌ ಕುಮಾರ್‌, ಪೋಷಕರು, ಶಿಕ್ಷಕರು, ಶಾಲೆ ಸಿಬ್ಬಂದಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment