ಶಿವಮೊಗ್ಗ: ಏಡ್ಸ್ ವಿರುದ್ಧ ಜಾಗೃತಿಗೆ ನಗರದ ATNCC ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿ, ಬೀದಿ ನಾಟಕ ಮಾಡಿದರು. ಎಟಿಎನ್ಸಿ ಕಾಲೇಜು ಆವರಣದಿಂದ ಬಸವೇಶ್ವರ ವೃತ್ತದವರೆಗೆ ಪಥ ಸಂಚಲನ ಮಾಡಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಗಾಂಧಿ ಪಾರ್ಕ್ ಮುಂಭಾಗ ಬಸವೇಶ್ವರ ಪ್ರತಿಮೆ ಎದುರು ಹೆಚ್ಐವಿ, ಏಡ್ಸ್ ಪೀಡಿತರ ವಿರುದ್ಧದ ತಾರತಮ್ಯ ತೊಡೆದು ಹೋಗುವುದಾಗಿ ಪ್ರಮಾಣವಚನ ಬೋಧಿಸಲಾಯಿತು.
ಯಾರೆಲ್ಲ ಏನೆಲ್ಲ ಹೇಳಿದರು?
ಹೆಚ್ಐವಿ, ಏಡ್ಸ್ಗೆ ಯುವಜನರು ಬಲಿ ಆಗುತ್ತಿದ್ದಾರೆ. ಇದು ಅತ್ಯಂತ ಕಳವಳಕಾರಿಯಾಗಿದೆ. ಜಾಗೃತಿಯಿಂದ ಮಾತ್ರ ಇದನ್ನು ತಡೆಯಲು ಸಾಧ್ಯ. ಸೊಳ್ಳೆ ಕಚ್ಚುವುದು, ಗಾಳಿ, ನೀರಿನಿಂದ, ಕೈ ಕುಲುಕುವುದರಿಂದ ಈ ರೋಗ ಹರಡುವುದಿಲ್ಲ.
- ಪ್ರೊ. ಮಮತಾ.ಪಿ.ಆರ್, ಎಟಿಎನ್ಸಿ ಕಾಲೇಜು ಪ್ರಾಂಶಪಾಲರು
![]()
ಏಡ್ಸ್ ಕುರಿತು ಅರಿವಿನ ಕೊರತೆಯೆ ಹೆಚ್ಚು ಯುವಕರು ಈ ಕಾಯಿಲೆ ತುತ್ತಾಗಿ ಬಲಿಯಾಗುತ್ತಿದ್ದಾರೆ. ಆದ್ದರಿಂದ ಕಾಲೇಜು ಹಂತದಲ್ಲಿಯೇ ಹೆಚ್ಐವಿ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಏಡ್ಸ್ ರೋಗಿ ಬಳಸಿದ ಚುಚ್ಚುಮದ್ದನ್ನು ಮತ್ತೊಬ್ಬರು ಬಳಸಿದರೆ ಹೆಚ್ಐವಿ ಸೋಂಕು ಹರಡಲಿದೆ. ಅವರನ್ನು ಮುಟ್ಟುವುದರಿಂದ, ಮಾತನಾಡವುದರಿಂದ ರೋಗ ಹರಡುವುದಿಲ್ಲ.
- ಮಂಗಳಾ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಅಧಿಕಾರಿ
![]()

ಎಟಿಎನ್ಸಿ ಕಾಲೇಜಿನ ಎನ್ಎಸ್ಎಸ್ ಘಟಕ ಮತ್ತು ರೆಡ್ ರಿಬ್ಬನ್ ಕ್ಲಬ್ನ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು. ಎನ್ಎಸ್ಎಸ್ ಅಧಿಕಾರಿಗಳಾದ ಮಂಜುನಾಥ್.ಎನ್, ಪ್ರವೀಣ್.ಬಿ.ಎನ್, ಗಾಯತ್ರಿ.ಟಿ ಹಾಗೂ ರೆಡ್ ಕ್ರಾಸ್ ವಿಭಾಗದ ಸಂಚಾಲಕಿ ಸೌಪರ್ಣಿಕ ಉಮೇಶ್, ಶ್ರುತಿ.ಕೆ ಉಪಸ್ಥಿತರಿದ್ದರು.

ಇದನ್ನೂ ಓದಿ » ಜಾತಿ ಸಮೀಕ್ಷೆ, ಹಿಂದೂ ಧರ್ಮಿಯರಿಗೆ ಶಾಸಕ ಚನ್ನಬಸಪ್ಪ ಸಲಹೆ, ಏನದು? ಇಲ್ಲಿದೆ ಸುದ್ದಿಗೋಷ್ಠಿಯ ಹೈಲೈಟ್ಸ್

LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





