| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಏಡ್ಸ್ ವಿರುದ್ಧ ಜಾಗೃತಿಗೆ ನಗರದ ATNCC ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿ, ಬೀದಿ ನಾಟಕ ಮಾಡಿದರು. ಎಟಿಎನ್ಸಿ ಕಾಲೇಜು ಆವರಣದಿಂದ ಬಸವೇಶ್ವರ ವೃತ್ತದವರೆಗೆ ಪಥ ಸಂಚಲನ ಮಾಡಿದರು.
ಗಾಂಧಿ ಪಾರ್ಕ್ ಮುಂಭಾಗ ಬಸವೇಶ್ವರ ಪ್ರತಿಮೆ ಎದುರು ಹೆಚ್ಐವಿ, ಏಡ್ಸ್ ಪೀಡಿತರ ವಿರುದ್ಧದ ತಾರತಮ್ಯ ತೊಡೆದು ಹೋಗುವುದಾಗಿ ಪ್ರಮಾಣವಚನ ಬೋಧಿಸಲಾಯಿತು.
ಯಾರೆಲ್ಲ ಏನೆಲ್ಲ ಹೇಳಿದರು?
ಹೆಚ್ಐವಿ, ಏಡ್ಸ್ಗೆ ಯುವಜನರು ಬಲಿ ಆಗುತ್ತಿದ್ದಾರೆ. ಇದು ಅತ್ಯಂತ ಕಳವಳಕಾರಿಯಾಗಿದೆ. ಜಾಗೃತಿಯಿಂದ ಮಾತ್ರ ಇದನ್ನು ತಡೆಯಲು ಸಾಧ್ಯ. ಸೊಳ್ಳೆ ಕಚ್ಚುವುದು, ಗಾಳಿ, ನೀರಿನಿಂದ, ಕೈ ಕುಲುಕುವುದರಿಂದ ಈ ರೋಗ ಹರಡುವುದಿಲ್ಲ.
- ಪ್ರೊ. ಮಮತಾ.ಪಿ.ಆರ್, ಎಟಿಎನ್ಸಿ ಕಾಲೇಜು ಪ್ರಾಂಶಪಾಲರು
![]()
ಏಡ್ಸ್ ಕುರಿತು ಅರಿವಿನ ಕೊರತೆಯೆ ಹೆಚ್ಚು ಯುವಕರು ಈ ಕಾಯಿಲೆ ತುತ್ತಾಗಿ ಬಲಿಯಾಗುತ್ತಿದ್ದಾರೆ. ಆದ್ದರಿಂದ ಕಾಲೇಜು ಹಂತದಲ್ಲಿಯೇ ಹೆಚ್ಐವಿ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಏಡ್ಸ್ ರೋಗಿ ಬಳಸಿದ ಚುಚ್ಚುಮದ್ದನ್ನು ಮತ್ತೊಬ್ಬರು ಬಳಸಿದರೆ ಹೆಚ್ಐವಿ ಸೋಂಕು ಹರಡಲಿದೆ. ಅವರನ್ನು ಮುಟ್ಟುವುದರಿಂದ, ಮಾತನಾಡವುದರಿಂದ ರೋಗ ಹರಡುವುದಿಲ್ಲ.
- ಮಂಗಳಾ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಅಧಿಕಾರಿ
![]()
![]()
ಎಟಿಎನ್ಸಿ ಕಾಲೇಜಿನ ಎನ್ಎಸ್ಎಸ್ ಘಟಕ ಮತ್ತು ರೆಡ್ ರಿಬ್ಬನ್ ಕ್ಲಬ್ನ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು. ಎನ್ಎಸ್ಎಸ್ ಅಧಿಕಾರಿಗಳಾದ ಮಂಜುನಾಥ್.ಎನ್, ಪ್ರವೀಣ್.ಬಿ.ಎನ್, ಗಾಯತ್ರಿ.ಟಿ ಹಾಗೂ ರೆಡ್ ಕ್ರಾಸ್ ವಿಭಾಗದ ಸಂಚಾಲಕಿ ಸೌಪರ್ಣಿಕ ಉಮೇಶ್, ಶ್ರುತಿ.ಕೆ ಉಪಸ್ಥಿತರಿದ್ದರು.

ಇದನ್ನೂ ಓದಿ » ಜಾತಿ ಸಮೀಕ್ಷೆ, ಹಿಂದೂ ಧರ್ಮಿಯರಿಗೆ ಶಾಸಕ ಚನ್ನಬಸಪ್ಪ ಸಲಹೆ, ಏನದು? ಇಲ್ಲಿದೆ ಸುದ್ದಿಗೋಷ್ಠಿಯ ಹೈಲೈಟ್ಸ್
![]()
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()