ಶಿವಮೊಗ್ಗದಲ್ಲಿ ATNCC ವಿದ್ಯಾರ್ಥಿಗಳಿಂದ ಪಥ ಸಂಚಲನ, ಯಾರೆಲ್ಲ ಇದ್ದರು? ಏನೆಲ್ಲ ಮಾತನಾಡಿದರು?

ಶಿವಮೊಗ್ಗ: ಏಡ್ಸ್‌ ವಿರುದ್ಧ ಜಾಗೃತಿಗೆ ನಗರದ ATNCC ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿ, ಬೀದಿ ನಾಟಕ ಮಾಡಿದರು. ಎಟಿಎನ್‌ಸಿ ಕಾಲೇಜು ಆವರಣದಿಂದ ಬಸವೇಶ್ವರ ವೃತ್ತದವರೆಗೆ ಪಥ ಸಂಚಲನ ಮಾಡಿದರು.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಗಾಂಧಿ ಪಾರ್ಕ್‌ ಮುಂಭಾಗ ಬಸವೇಶ್ವರ ಪ್ರತಿಮೆ ಎದುರು ಹೆಚ್‌ಐವಿ, ಏಡ್ಸ್‌ ಪೀಡಿತರ ವಿರುದ್ಧದ ತಾರತಮ್ಯ ತೊಡೆದು ಹೋಗುವುದಾಗಿ ಪ್ರಮಾಣವಚನ ಬೋಧಿಸಲಾಯಿತು.

ಯಾರೆಲ್ಲ ಏನೆಲ್ಲ ಹೇಳಿದರು?

Shivamogga Live Promotion

ಹೆಚ್‌ಐವಿ, ಏಡ್ಸ್‌ಗೆ ಯುವಜನರು ಬಲಿ ಆಗುತ್ತಿದ್ದಾರೆ. ಇದು ಅತ್ಯಂತ ಕಳವಳಕಾರಿಯಾಗಿದೆ. ಜಾಗೃತಿಯಿಂದ ಮಾತ್ರ ಇದನ್ನು ತಡೆಯಲು ಸಾಧ್ಯ. ಸೊಳ್ಳೆ ಕಚ್ಚುವುದು, ಗಾಳಿ, ನೀರಿನಿಂದ, ಕೈ ಕುಲುಕುವುದರಿಂದ ಈ ರೋಗ ಹರಡುವುದಿಲ್ಲ.

  • ಪ್ರೊ. ಮಮತಾ.ಪಿ.ಆರ್‌, ಎಟಿಎನ್‌ಸಿ ಕಾಲೇಜು ಪ್ರಾಂಶಪಾಲರು

RED-LINE-

ಏಡ್ಸ್‌ ಕುರಿತು ಅರಿವಿನ ಕೊರತೆಯೆ ಹೆಚ್ಚು ಯುವಕರು ಈ ಕಾಯಿಲೆ ತುತ್ತಾಗಿ ಬಲಿಯಾಗುತ್ತಿದ್ದಾರೆ. ಆದ್ದರಿಂದ ಕಾಲೇಜು ಹಂತದಲ್ಲಿಯೇ ಹೆಚ್‌ಐವಿ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಏಡ್ಸ್‌ ರೋಗಿ ಬಳಸಿದ ಚುಚ್ಚುಮದ್ದನ್ನು ಮತ್ತೊಬ್ಬರು ಬಳಸಿದರೆ ಹೆಚ್‌ಐವಿ ಸೋಂಕು ಹರಡಲಿದೆ. ಅವರನ್ನು ಮುಟ್ಟುವುದರಿಂದ, ಮಾತನಾಡವುದರಿಂದ ರೋಗ ಹರಡುವುದಿಲ್ಲ.

  • ಮಂಗಳಾ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಅಧಿಕಾರಿ

RED-LINE-

ATNCC-Students-rally-in-Shimoga-city.

ಎಟಿಎನ್‌ಸಿ ಕಾಲೇಜಿನ ಎನ್‌ಎಸ್‌ಎಸ್‌ ಘಟಕ ಮತ್ತು ರೆಡ್‌ ರಿಬ್ಬನ್‌ ಕ್ಲಬ್‌ನ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು. ಎನ್‌ಎಸ್‌ಎಸ್‌ ಅಧಿಕಾರಿಗಳಾದ ಮಂಜುನಾಥ್.ಎನ್, ಪ್ರವೀಣ್.ಬಿ.ಎನ್, ಗಾಯತ್ರಿ.ಟಿ ಹಾಗೂ ರೆಡ್ ಕ್ರಾಸ್ ವಿಭಾಗದ ಸಂಚಾಲಕಿ ಸೌಪರ್ಣಿಕ ಉಮೇಶ್, ಶ್ರುತಿ.ಕೆ ಉಪಸ್ಥಿತರಿದ್ದರು.

ATNCC-Students-rally-in-Shimoga-city.

ಇದನ್ನೂ ಓದಿ » ಜಾತಿ ಸಮೀಕ್ಷೆ, ಹಿಂದೂ ಧರ್ಮಿಯರಿಗೆ ಶಾಸಕ ಚನ್ನಬಸಪ್ಪ ಸಲಹೆ, ಏನದು? ಇಲ್ಲಿದೆ ಸುದ್ದಿಗೋಷ್ಠಿಯ ಹೈಲೈಟ್ಸ್‌

JNNCE-Admission-Advt-scaled

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment