BREAKING NEWS – ಕುವೆಂಪು ವಿವಿ, ಪ್ರಶ್ನೆ ಪತ್ರಿಕೆಯಲ್ಲಿ ಯಡವಟ್ಟು, ಕನ್ನಡ ಪರೀಕ್ಷೆ ದಿಢೀರ್‌ ರದ್ದು, ಏನಿದು ಪ್ರಕರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಶಿವಮೊಗ್ಗ: ಪ್ರಶ್ನೆ ಪತ್ರಿಕೆಯಲ್ಲಿನ ಗೊಂದಲದಿಂದಾಗಿ ಕುವೆಂಪು ವಿಶ್ವವಿದ್ಯಾಲಯದ ಬಿ.ಎ. ಕನ್ನಡ ಐಚ್ಛಿಕ ಪರೀಕ್ಷೆ (Examination) ದಿಢೀರ್‌ ರದ್ದಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆಗಳನ್ನು ಹಿಂಪಡೆದು ಕಳುಹಿಸಲಾಗಿದೆ.  

ಬಿ.ಎ. 6ನೇ ಸೆಮಿಸ್ಟರ್‌ ಐಚ್ಛಿಕ ಕನ್ನಡ ಪರೀಕ್ಷೆ (ಪ್ರಶ್ನೆ ಪತ್ರಿಕೆ ಸಂಖ್ಯೆ 30632) ಇವತ್ತು ನಿಗದಿಯಾಗಿತ್ತು. ಆದರೆ ಪ್ರಶ್ನೆ ಪತ್ರಿಕೆ ಬದಲಾದ ಹಿನ್ನೆಲೆ ಗೊಂದಲ ಉಂಟಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಲಕೋಟೆ ತೆರೆದಾಗ ಪ್ರಶ್ನೆ ಪತ್ರಿಕೆಯಲ್ಲಿನ ಸಮಸ್ಯೆ ಗೊತ್ತಾಗಿದೆ.

ಆತಂಕ, ಗೊಂದಲದಲ್ಲಿ ಸಿಬ್ಬಂದಿ, ವಿದ್ಯಾರ್ಥಿಗಳು

Kuvempu University General Image 1

ಬೆಳಗ್ಗೆ 9 ಗಂಟೆಯಿಂದ ಇವತ್ತು ಐಚ್ಛಿಕ ವಿಷಯಗಳ ಪರೀಕ್ಷೆ ನಿಗದಿಯಾಗಿತ್ತು. ಐಚ್ಛಿಕ ಕನ್ನಡ ವಿಷಯ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲು ಲಕೋಟೆ ತೆರೆದಾಗ ಶಿರೋನಾಮ ಸರಿ ಇತ್ತು. ಆದರೆ ಪ್ರಶ್ನೆಗಳು ಬದಲಾಗಿದ್ದವು. ಇವತ್ತು ಪ್ರಶ್ನೆ ಪತ್ರಿಕೆ 14ರ ಪರೀಕ್ಷೆ ನಡೆಯಬೇಕಿತ್ತು. ಆದರೆ ಈ ಪ್ರಶ್ನೆ ಪತ್ರಿಕೆಯಲ್ಲಿ ಈಗಾಗಲೇ ಪರೀಕ್ಷೆ ನಡೆದಿರುವ ಪ್ರಶ್ನೆ ಪತ್ರಿಕೆ 12ರ ಪ್ರಶ್ನೆಗಳು ಇದ್ದವು ಎಂದು ತಿಳಿದು ಬಂದಿದೆ.

JNNCE-ADMISSION-2025-26

ಇನ್ನು, ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಬೆಳಗ್ಗೆ ಉತ್ತರ ಪತ್ರಿಕೆ ನೀಡಲಾಗಿತ್ತು. ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್‌ ನಂಬರ್‌ ಸೇರಿದಂತೆ ಅಗತ್ಯ ಮಾಹಿತಿ ಬರೆದಿದ್ದರು. ಆದರೆ ಪ್ರಶ್ನೆ ಪತ್ರಿಕೆಯಲ್ಲಿ ಗೊಂದಲ ಉಂಟಾಗಿದೆ ಎಂಬ ವಿಷಯ ತಿಳಿದು ಆತಂಕಗೊಂಡರು. ಇತ್ತ ಪರೀಕ್ಷೆ ರದ್ದುಪಡಿಸಬೇಕೆ, ಬೇರೆ ಪ್ರಶ್ನೆ ಪತ್ರಿಕೆ ಬರುತ್ತದೆಯೇ ಎಂಬುದು ಗೊತ್ತಾಗದೆ ಉಪನ್ಯಾಸಕರು, ಕಾಲೇಜು ಆಡಳಿತ ಮಂಡಳಿಗಳು ಗೊಂದಲಕ್ಕೀಡಾಗಿದ್ದವು.

ಪರೀಕ್ಷೆ ಮುಂದೂಡಿಕೆ ಮಾಹಿತಿ

ಇನ್ನೊಂದೆಡೆ ಸಮಸ್ಯೆಯ ಮಾಹಿತಿ ತಿಳಿಯುತ್ತಿದ್ದಂತೆ ಕುವೆಂಪು ವಿಶ್ವವಿದ್ಯಾಲಯ ಪರೀಕ್ಷೆಯನ್ನು ಮುಂದೂಡಿದೆ. ಎಲ್ಲ ಕಾಲೇಜುಗಳಿಗೆ ವಾಟ್ಸಪ್‌ ಮೂಲಕ ಮಾಹಿತಿ ರವಾನಿಸಲಾಗಿದೆ. ‘ತಾಂತ್ರಿಕ ಕಾರಣದಿಂದಾಗಿ ಇಂದು ನಿಗದಿಯಾಗಿದ್ದ ಐಚ್ಛಿಕ ಕನ್ನಡ ವಿಷಯದ (ಪ್ರಶ್ನೆ ಪತ್ರಿಕೆ ಸಂಖ್ಯೆ 30632) ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುತ್ತದೆ. ವಿದ್ಯಾರ್ಥಿಗಳಿಂದ ಪ್ರಶ್ನೆ ಮತ್ತು ಉತ್ತರ ಪತ್ರಿಕೆ ಹಿಂಪಡೆಯುವಂತೆ’ ತಿಳಿಸಲಾಗಿದೆ.

ಇದನ್ನೂ ಓದಿ » ಗಾಜನೂರಿನ ತುಂಗಾ ಡ್ಯಾಮ್‌ನಿಂದ ಯಾವುದೇ ಸಂದರ್ಭ ನೀರು ಹೊರಕ್ಕೆ ಬಿಡುವ ಸಾಧ್ಯತೆ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 24, 2025

Bus falls off bridge near Bhadravathi, 30 injured

Bus falls off bridge near Bhadravathi, 30 injured

ಸೇತುವೆಯಿಂದ ಕೆಳಗೆ ಹಾರಿದ ಖಾಸಗಿ ಬಸ್‌, ಹೇಗಾಯ್ತು ಘಟನೆ?

ಸೇತುವೆಯಿಂದ ಕೆಳಗೆ ಹಾರಿದ ಖಾಸಗಿ ಬಸ್‌, ಹೇಗಾಯ್ತು ಘಟನೆ?

BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

Leave a Comment