SHIVAMOGGA LIVE NEWS | 8 AUGUST 2023
SHANKARAGHATTA : ಐಎಎಸ್ ಅಧಿಕಾರಿಯೊಬ್ಬರಿಗೆ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾಗಿ (Registrar) ಹೆಚ್ಚುವರಿ ಜವಾಬ್ದಾರಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಈ ನಡೆ ಕುತೂಹಲ ಮೂಡಿಸಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಲೋಖಂಡೆ ಸ್ನೇಹಲ್ ಸುಧಾಕರ್ ಅವರಿಗೆ ಕುವೆಂಪು ವಿವಿಯ ಕುಲಸಚಿವ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಇವತ್ತು ಮಧ್ಯಾಹ್ನ ಲೋಖಂಡೆ ಸ್ನೇಹಲ್ ಸುಧಾಕರ್ ಅವರು ಕುವೆಂಪು ವಿವಿಯಲ್ಲಿ ಅಧಿಕಾರ ವಹಿಸಿಕೊಂಡರು.
ಈಚೆಗಷ್ಟೆ ಪ್ರೊ. ಕಣ್ಣನ್ ನೇಮಕವಾಗಿತ್ತು
ಇತ್ತೀಚೆಗಷ್ಟೆ ಕುವೆಂಪು ವಿವಿಯ ಕುಲಸಚಿವರಾಗಿ (Registrar) ಪ್ರೊ. ಪಿ.ಕಣ್ಣನ್ ಅವರು ನೇಮಿಸಲಾಗಿತ್ತು. ಜು.28ರಂದು ಪ್ರೊ. ಕಣ್ಣನ್ ಅವರು ಅಧಿಕಾರ ವಹಿಸಿಕೊಂಡಿದ್ದರು. ಉಪನ್ಯಾಸಕರೊಬ್ಬರನ್ನು ಕುಲಸಚಿವ ಸ್ಥಾನಕ್ಕೆ ನೇಮಕ ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು. ಈ ಮಧ್ಯೆ ಕುಲಸಚಿವರನ್ನು ದಿಢೀರ್ ಬದಲಾವಣೆ ಮಾಡಿದ್ದು ಕುತೂಹಲ ಮೂಡಿಸಿದೆ. ಸಾಮಾನ್ಯವಾಗಿ ಕೆಎಎಸ್ ಅಧಿಕಾರಿಯನ್ನು ಕುಲುಸಚಿವರನ್ನಾಗಿ ನೇಮಿಸಲಾಗುತ್ತಿತ್ತು.3
ಇದನ್ನೂ ಓದಿ – ವೆರೈಟಿ ಡ್ರೆಸ್, ಬಗೆಬಗೆ ಸ್ಟೈಲ್, ಶಿವಮೊಗ್ಗದಲ್ಲಿ ಜೋರಿತ್ತು ವಿಜ್ಞಾನ ವಿದ್ಯಾರ್ಥಿಗಳ ಟ್ರೆಡೀಷನಲ್ ಡೇ ಸೆಲಬ್ರೇಷನ್
.jpeg)
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು






