ಶಿವಮೊಗ್ಗ: ಕೇಂದ್ರ ಶಿಕ್ಷಣ ಇಲಾಖೆಯ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಪ್ರವೇಶ ಪ್ರಕ್ರಿಯೆ (Admissions) ಆರಂಭವಾಗಿದೆ ಎಂದು ವಿವಿ ಪ್ರಾದೇಶಿಕ ನಿರ್ದೇಶಕ ಡಾ.ಎಂ.ಷಣ್ಮುಗಂ ತಿಳಿಸಿದರು.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಂದಿರಾ ಗಾಂಧಿ ಮುಕ್ತ ವಿವಿ ನ್ಯಾಕ್ ನಿಂದ ಎ++ ಶ್ರೇಣಿ ಪಡೆದಿದೆ. ದೇಶಾದ್ಯಂತ ಪ್ರತಿ ವರ್ಷ ಆರು ಲಕ್ಷಕ್ಕೂ ಹೆಚ್ಚು ಜನ ವಿವಿ ಪ್ರವೇಶ ಪಡೆಯುತ್ತಾರೆ. ದೇಶದಲ್ಲಿ 1500 ವಿವಿಗಳು, 45 ಸಾವಿರಕ್ಕೂ ಹೆಚ್ಚು ಕಾಲೇಜುಗಳಿವೆ. ಉನ್ನತ ಶಿಕ್ಷಣಕ್ಕೆ ಬೇಡಿಕೆ ಇದೆ. ಆದರೆ, ಶಿಕ್ಷಣದ ಶೇಕಡಾವಾರು ದರ ಮಾತ್ರ ವಿದೇಶಗಳಿಗಿಂತ ಕಡಿಮೆ ಇದೆ ಎಂದರು.
ಶಿಕ್ಷಣ ಅರ್ಧಕ್ಕೆ ನಿಲ್ಲಿಸಿದವರೂ ವಿವಿಯ ಮೂಲಕ ತಮ್ಮ ಶಿಕ್ಷಣ ಮುಂದುವರಿಸಬಹುದು. ನಮ್ಮಲ್ಲಿ ಪ್ರವೇಶ ಶುಲ್ಕ ಹೊರತುಪಡಿಸಿ ಬೇರೆ ಯಾವುದೆ ಶುಲ್ಕ ಇರುವುದಿಲ್ಲ. ಉತ್ತಮ ಅಧ್ಯಯನ ಪಠ್ಯಗಳನ್ನು ನೀಡುತ್ತೇವೆ ಎಂದು ತಿಳಿಸಿದರು.
ಏನೇನೆಲ್ಲ ವಿಶೇಷತೆ ಇದೆ?
ಬಿಪಿಎಲ್ ಕಾರ್ಡ್ ಹೊಂದಿರುವ, ವಾರ್ಷಿಕ ₹2.50 ಲಕ್ಷ ಒಳಗೆ ಕುಟುಂಬದ ಆದಾಯದ ಇರುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕದಲ್ಲಿ ಶೇ.50 ರಿಯಾಯಿತಿ ನೀಡಲಾಗುವುದು.
ಫೆಬ್ರವರಿ 28ರ ವರೆಗೆ ಪ್ರವೇಶ ಪಡೆಯಲು ಅವಕಾಶವಿದೆ. ಡಿವಿಎಸ್ ಪದವಿ ಕಾಲೇಜಿನಲ್ಲಿ ಇಗ್ನೋ ಅಧ್ಯಯನ ಕೇಂದ್ರವಿದೆ.
ಪದವಿ ಓದುತ್ತಿರುವ ವಿದ್ಯಾರ್ಥಿಗಳು, ಮುಕ್ತ ವಿವಿಯಲ್ಲಿ ಇನ್ನೊಂದು ಪದವಿ ಪಡೆಯಬಹುದು.
ದೂರದರ್ಶನದಂತೆ ಇಗ್ನೋಗೆ ಪ್ರತ್ಯೇಕ ಟಿವಿ ಚಾನಲ್ ಆರಂಭವಾಗಲಿದ್ದು, ಈ ಮೂಲಕ ಶಿಕ್ಷಣಕ್ಕೆ ಮೀಸಲಾದ ವಿಷಯಗಳನ್ನು ಬಿತ್ತರಿಸಲಾಗುವುದು.
ಶಿಕ್ಷಣ ಅರ್ಧಕ್ಕೆ ನಿಲ್ಲಿಸಿದವರೂ ವಿವಿಯ ಮೂಲಕ ತಮ್ಮ ಶಿಕ್ಷಣ ಮುಂದುವರಿಸಬಹುದು. ನಮ್ಮಲ್ಲಿ ಪ್ರವೇಶ ಶುಲ್ಕ ಹೊರತುಪಡಿಸಿ ಬೇರೆ ಯಾವುದೆ ಶುಲ್ಕ ಇರುವುದಿಲ್ಲ. ಉತ್ತಮ ಅಧ್ಯಯನ ಪಠ್ಯಗಳನ್ನು ನೀಡುತ್ತೇವೆ ಎಂದು ತಿಳಿಸಿದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ