SHIVAMOGGA LIVE NEWS | 2 FEBRUARY 2024
SHIMOGA : ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರನ್ನು ನೇಮಿಸಿದ್ದ ಸರ್ಕಾರ ಎರಡನೇ ದಿನದಲ್ಲಿ ಆದೇಶ ಬದಲಿಸಿದೆ. ಮತ್ತೊಬ್ಬ ಅಧಿಕಾರಿಯನ್ನು ಆ ಸ್ಥಾನಕ್ಕೆ ನೇಮಿಸಿದೆ.
ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ವಿಜಯ ಕುಮಾರ್.ಹೆಚ್.ಬಿ ಅವರನ್ನು ನೇಮಿಸಲಾಗಿದೆ.
ಎರಡೆ ದಿನದಲ್ಲಿ ಆದೇಶ ಬದಲು

ಜ.31ರಂದು ಕೆಎಎಸ್ ಅಧಿಕಾರಿ ಶಿವರಾಜು.ಪಿ ಅವರನ್ನು ಕುವೆಂಪು ವಿವಿ ಆಡಳಿತ ಕುಲಸಚಿವರಾಗಿ ನೇಮಿಸಿ ಸರ್ಕಾರ ಆದೇಶಿಸಿತ್ತು. ಶಿವರಾಜು ಅವರು ಅವರು ಇನ್ನೂ ಅಧಿಕಾರ ಸ್ವೀಕರಿಸಿಲ್ಲ. ಆಗಲೆ ಅವರ ಆದೇಶ ಬದಲಿಸಿರುವ ಸರ್ಕಾರ, ವಿಜಯಕುಮಾರ್ ಅವರನ್ನು ನೇಮಿಸಿದೆ. ಜ.31ರ ಆದೇಶದಲ್ಲಿ ವಿಜಯ ಕುಮಾರ್ ಅವರನ್ನು ಯಾದಗಿರಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ ಆಗಿ ನೇಮಿಸಲಾಗಿತ್ತು.
ಡಿವೈಎಸ್ಪಿ ವಿಚಾರದಲ್ಲು ಹೀಗೆ ಆಗಿದೆ
ಶಿವಮೊಗ್ಗ ಉಪ ವಿಭಾಗದಲ್ಲಿ ಖಾಲಿ ಇದ್ದ ಡಿವೈಎಸ್ಪಿ ಹುದ್ದೆಗೆ ಲೋಕಾಯುಕ್ತ ಡಿವೈಎಸ್ಪಿ ಜೆ.ಜೆ.ತಿರುಮಲೇಶ್ ಅವರನ್ನು ಸರ್ಕಾರ ನೇಮಿಸಿತ್ತು. ಆದರೆ ಎರಡೆ ದಿನದಲ್ಲಿ ತಿರುಮಲೇಶ್ ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಲಾಗಿತ್ತು. ಆ ಸ್ಥಾನಕ್ಕೆ ರಾಜ್ಯ ಗುಪ್ತವಾರ್ತೆ ಡಿವೈಎಸ್ಪಿ ಬಾಬು ಆಂಜನಪ್ಪ ಅವರನ್ನು ನೇಮಿಸಲಾಗಿದೆ. ಈ ಬೆಳವಣಿಗೆ ಬೆನ್ನಿಗೆ ಕುವೆಂಪು ವಿವಿ ಆಡಳಿತ ಕುಲಸಚಿವರ ನೇಮಕಾತಿ ಆದೇಶವು ಎರಡೆ ದಿನಕ್ಕೆ ಬದಲಾಗಿದೆ.
ಇದನ್ನೂ ಓದಿ – ಡಿವೈಎಸ್ಪಿಗಳ ವರ್ಗಾವಣೆ, ಜಿಲ್ಲೆಯಲ್ಲಿ ಯಾರೆಲ್ಲರ ವರ್ಗವಾಗಿದೆ? ತಿರುಮಲೇಶ್ ವರ್ಗಾವಣೆ ರದ್ದಾಗಿದ್ದೇಕೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200