ATNC ಕಾಲೇಜಿನಲ್ಲಿ ನಾಯಕತ್ವ ತರಬೇತಿ, ವಿದ್ಯಾರ್ಥಿಗಳಿಗೆ ಯಾರೆಲ್ಲ ಏನೆಲ್ಲ ಸಲಹೆ ನೀಡಿದರು? ಇಲ್ಲಿದೆ ಪಾಯಿಂಟ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಕುವೆಂಪು ವಿಶ್ವವಿದ್ಯಾಲಯ, ರಾಷ್ಟ್ರೀಯ ಶಿಕ್ಷಣ ಸಮಿತಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತಾಶ್ರಯದಲ್ಲಿ ನಾಯಕತ್ವ ತರಬೇತಿ (Leadership Training) ಕಾರ್ಯಾಗಾರದಲ್ಲಿ ‘ನಾಯಕತ್ವ ಕೌಶಲ್ಯಗಳು : ನಾಯಕ/ಕಿ ಎಂದರೆ ಯಾರು?’ ವಿಷಯದ ಕುರಿತು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ವಿಶೇಷ ಉಪನ್ಯಾಸ ನೀಡಿದರು.

ನಾರಾಯಣ ರಾವ್‌ ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್‌

Point 1 F1F1F1ನಮಗೆ ನಾವೇ ನಿಜವಾದ ನಾಯಕರು. ರಾಜಕೀಯ ರಂಗದಲ್ಲಿ ಪ್ರವೇಶ ಮಾಡಿ ಜನಪ್ರತಿನಿಧಿ ಆದವರು ಮಾತ್ರ ನಾಯಕರಲ್ಲ, ಕ್ರೀಡೆ, ಚಲನಚಿತ್ರ, ಕುಟುಂಬ ಎಲ್ಲಾ ಕಡೆಗಳಲ್ಲಿ ನಾಯಕರಿದ್ದಾರೆ‌.

Point 2 F1F1F1ಸಮಾಜದ ನಾಯಕನಾಗಲು ಉತ್ತಮ ಕೌಶಲ್ಯತೆ ಹಾಗೂ ಪ್ರಬುದ್ಧತೆ ಬೇಕು. ಸಂಸ್ಕಾರ ಅತಿ ಮುಖ್ಯ. ಎಲ್ಲಿ ಒಳ್ಳೆಯ ಸಂಸಾರವಿದೆ, ಅಲ್ಲಿ ಒಳ್ಳೆಯ ಸಂಸ್ಕಾರವಿರುತ್ತದೆ. ಸಂಸ್ಕಾರದ ತಳಹದಿ ಇರುವುದು ಕುಟುಂಬದಲ್ಲಿ, ನಂತರ ಸಿಗುವುದು ಶಿಕ್ಷಣ ಮತ್ತು ಅನುಭವ ಆಧಾರಿತ ಸಂಸ್ಕಾರ.

Point 3 F1F1F1ಸರಳತೆ, ಸಜ್ಜನಿಕೆ, ಪ್ರಾಮಾಣಿಕತೆ, ಪಾರದರ್ಶಕತೆ, ಸಮಯ ಪಾಲನೆ, ಪ್ರಬುದ್ಧ ಮಾತುಗಾರಿಕೆಯ ಜೊತೆಯಲ್ಲಿ ಸಹನೆ ಮತ್ತು ಅಧ್ಯಯನಶೀಲತೆ ಉತ್ತಮ ನಾಯಕತ್ವಕ್ಕೆ ಅತಿ ಮುಖ್ಯ.

Point 4 F1F1F1ನಾಯಕತ್ವ ಎಂದರೆ ಬದ್ಧತೆಯ ಸಂಕೇತ. ಅಹಂಕಾರ, ಹಣ ದಾಹ, ಸ್ವಹಿತಾಸಕ್ತಿ, ಸ್ವಾರ್ಥ ಪರವಾದ ನಡೆ ನಾಯಕತ್ವಕ್ಕೆ ಶೋಭೆ ತರುವುದಿಲ್ಲ. ವಿರೋಧಿಗಳನ್ನು ಅವಹೇಳನ ಮಾಡುವ ಗುಣ ನಾಯಕನಿಗೆ ಇರಬಾರದು. ಮನುಷ್ಯನಲ್ಲಿ ಅತಿ ಭಾರವಾದ ವಸ್ತುವೆಂದರೆ ಅದು ಅಹಂಕಾರ. ನಾಯಕ ಹಿಂಬಾಲಕರನ್ನು ಸೃಷ್ಟಿಸಿದೆ ನಾಯಕರನ್ನು ರೂಪಿಸುವ ಶಕ್ತಿ ಇರಬೇಕು.

Point 5 F1F1F1ಇನ್ನೊಬ್ಬರ ಕೌಶಲ್ಯತೆ ಸಾಮರ್ಥ್ಯಗಳನ್ನು ಗುರುತಿಸುವವರು ನಿಜವಾದ ನಾಯಕ. ನಾಯಕ ಸುದ್ದಿಯಲ್ಲಿರಬೇಕು ವಿನಃ ಸುದ್ದಿಯಾಗಲು ನಾಯಕರಾಗಬಾರದು. ಸೋಲಿನ ಜವಾಬ್ದಾರಿಯನ್ನು ತಾನು ವಹಿಸಿಕೊಂಡು, ಗೆಲುವನ್ನು ಎಲ್ಲರಿಗೂ ಹಂಚುವ ಸಾಮರ್ಥ್ಯ ಬೇಕು.

ಸೇವೆ ಎನ್ನುವುದು ಒಂದು ದಿನಕ್ಕೆ ಸೀಮಿತವಾದ ಪರಿಕಲ್ಪನೆಯಲ್ಲ. ಗಾಂಧೀಜಿಯವರು ಹೇಳುವ ಹಾಗೆ, ನಮ್ಮ ಜೀವನದಲ್ಲಿ ಸಾಮಾಜಿಕ ಬದಲಾವಣೆಗೆ ನಿರಂತರ ಶ್ರಮಿಸಿದಾಗ ಮಾತ್ರ ನಿಜವಾದ ಸೇವಾ ಮನೋಭಾವ ಸಾಧ್ಯವಾಗುತ್ತದೆ.‌

  • ಎಸ್.ಎನ್.ನಾಗರಾಜ, ಎನ್ಇಎಸ್ ಕಾರ್ಯದರ್ಶಿ

RED-LINE-

ಪ್ರಾಂಶುಪಾಲರಾದ ಪ್ರೊ.ಪಿ.ಆರ್.ಮಮತ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಕಾರ್ಯಕ್ರಮಾಧಿಕಾರಿ ಮಂಜುನಾಥ. ಎನ್, ಸ್ವಯಂ ಸೇವಕರಾದ ಪ್ರಜ್ವಲ್, ಸಿಂಚನ, ಪ್ರಿಯಾಂಕಾ, ಇಂದ್ರಸೇನಾ, ಹೇಮಂತ್, ರಶ್ಮಿತ, ಅದಿತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leadership training at ATNCC

Leadership training at ATNCC

Leadership Training

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 8, 2025

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment