ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 APRIL 2021
ಖೇಲೋ ಇಂಡಿಯಾ ಯೋಜನೆ ಅಡಿ ಸಹ್ಯಾದ್ರಿ ಕಾಲೇಜು ಕ್ಯಾಂಪಸ್ನಲ್ಲಿ ವಿಶೇಷ ಕ್ರೀಡಾ ತರಬೇತಿ ಕೇಂದ್ರ (ಎಸ್ಟಿಸಿ) ಸ್ಥಾಪನೆ ಮಾಡಲಾಗುತ್ತಿದೆ. ಈ ಸಂಬಂಧ ಇವತ್ತು ಉಪನ್ಯಾಸಕರ ಸಭೆ ಆಯೋಜಿಸಲಾಗಿತ್ತು.

ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ, ಕುಲಸಚಿವ ಎಸ್.ಎಸ್.ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಒಳಾಂಗಣದಲ್ಲಿ ಸಭೆ ನಡೆಸಲಾಗುತ್ತಿದ್ದು, ಐವತ್ತಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇದು ಕೋವಿಡ್ ನಿಯಮದ ಉಲ್ಲಂಘನೆಯಾಗಿದೆ.
ಸಹ್ಯಾದ್ರಿ ಕಾಲೇಜಿನ ಪ್ರಾಂಶುಪಾಲರುಗಳು, ಉಪನ್ಯಾಸಕರು ಸಭೆಯಲ್ಲಿ ಭಾಗವಹಿಸಿದ್ದಾರೆ.
ಮದುವೆಯಲ್ಲಿ ಐವತ್ತು ಮಂದಿ, ಅಂತ್ಯಕ್ರಿಯೆಯಲ್ಲಿ ಐವರು ಮಾತ್ರ ಪಾಲ್ಗೊಳ್ಳಬೇಕು ಎಂದು ಸರ್ಕಾರ ನಿಯಮ ರೂಪಿಸಿದೆ. ಅಗತ್ಯ ವಸ್ತುಗಳ ಹೊರತು ಉಳಿದ್ಯಾವ ಅಂಗಡಿಗಳ ಬಾಗಿಲು ತೆಗೆಯಬಾರದು ಎಂದು ಸೂಚಿಸಿದೆ. ಕರೋನ ಹರಡುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಆದರೆ ಕುವೆಂಪು ವಿವಿ ಕುಲಪತಿ, ಕುಲಸಚಿವರ ನೇತೃತ್ವದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಸಭೆ ನಡೆಸಿರುವುದು ಪ್ರಶ್ನಾರ್ಹವಾಗಿದೆ.
ಸಭೆಯ ವಿಡಿಯೋ ವರದಿ ಇಲ್ಲಿದೆ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






