Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಅವಮಾನ ಮೀರಿ ನಿಂತಾಗ ಸನ್ಮಾನ, ಓರಿಯಂಟೇಷನ್‌ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಲಹೆ

ಅವಮಾನ ಮೀರಿ ನಿಂತಾಗ ಸನ್ಮಾನ, ಓರಿಯಂಟೇಷನ್‌ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಲಹೆ

11/10/2023 1:05 PM
Vanitha

SHIVAMOGGA LIVE NEWS | 11 OCTOBER 2023

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ಬದುಕಿನಲ್ಲಿ ಎದುರಾಗುವ ಪ್ರತಿ ಅವಮಾನವನ್ನು ಮೀರಿ ನಿಲ್ಲುವ ಆತ್ಮವಿಶ್ವಾಸ ನಿಮ್ಮದಾಗಬೇಕಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರಾದ ಪ್ರೊ.ಎಸ್.ಎಂ.ಗೋಪಿನಾಥ ಅಭಿಪ್ರಾಯಪಟ್ಟರು.

ಮಂಗಳವಾರ ನಗರದ ಎಸ್.ಆರ್.ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಪ್ರಥಮ ವರ್ಷದ ಬಿಸಿಎ ಹಾಗೂ ಬಿಎಸ್ಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಅಭಿವಿನ್ಯಾಸ (ಓರಿಯಂಟೇಷನ್) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅನುಭವದಿಂದ ಮಾತ್ರ ಬದುಕಿನಲ್ಲಿ ನಿಜವಾದ ಪರಿಪಕ್ವತೆ ಸಾಧ್ಯ. ಅಂತಹ ಪರಿಪಕ್ವತೆಯನ್ನು ಯಾವುದೇ ಪುಸ್ತಕಗಳು ನೀಡಲಾರದು. ಅವಮಾನಕ್ಕೆ ಒಳಗಾದ ವ್ಯಕ್ತಿ ಮಾತ್ರ ಸನ್ಮಾನಕ್ಕೆ ನಿಜವಾಗಿಯೂ ಅರ್ಹ. ಅಂತಹ ಅವಮಾನಗಳನ್ನು ಸಮರ್ಥವಾಗಿ ಎದುರಿಸಿ. ಕಲಿಕೆಯಲ್ಲಿ ಯಾರು ದಡ್ಡರಲ್ಲ. ಕಲಿಕೆಯ ಸ್ಥಿತಿ ನಿಧಾನವಾಗಿರುತ್ತದೆ. ಅಂತಹ ಕಲಿಕಾ ಗುಣಮಟ್ಟವನ್ನು ಪೋಷಕರು ಮತ್ತು ಶಿಕ್ಷಕ ವರ್ಗ ಅವಲೋಕಿಸಿ ಕಲಿಕೆಯ ಪ್ರೇರಣಾ ವಿಧಾನಗಳನ್ನು ಬಳಸಿ. ಪದವಿ ಹಂತದಲ್ಲಿ ನಿಮ್ಮ ಗುರಿ ತಲುಪುವ ತವಕ‌ ಇರಬೇಕು. ಪೋಷಕರ ಕಷ್ಟಗಳಿಗೆ ಹೆಗಲು ನೀಡುವ ಜವಾಬ್ದಾರಿ ಬರಬೇಕು. ಸಮಾಜಮುಖಿ ಚಿಂತನೆಗಳ ಮನೋಭೂಮಿಕೆ ನಿಮ್ಮದಾಗಲಿ ಎಂದರು.

ಇದನ್ನೂ ಓದಿ- 144 ಸೆಕ್ಷನ್‌, ಶಿವಮೊಗ್ಗ ಜಿಲ್ಲಾಧಿಕಾರಿಯಿಂದ ಪರಿಷ್ಕೃತ ಆದೇಶ, ಏನಿದೆ ಆದೇಶದಲ್ಲಿ?

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣರಾವ್ ಮಾತನಾಡಿ, ದೀಪ ತಾನು ಬೆಳಗಿ ಇತರರಿಗೆ ಬೆಳಕು ನೀಡುವಂತೆ ಶಿಕ್ಷಕರು ತಾವು ಕಲಿತು ಇತರರಿಗೂ ಕಲಿಸುತ್ತಾರೆ. ಅಂತಹ ಶಿಕ್ಷಕರಿಗೆ ಸದಾ ಕೃತಜ್ಞರಾಗಿರಬೇಕು. ತಂದೆ ತಾಯಿಯ ಕೊಡುಗೆ ಎಂದಿಗೂ ಮರೆಯಲಾಗದು. ತಾಯಿ ತನ್ನ ಮಕ್ಕಳಿಗೆ ಆ ಹೊತ್ತಿನ ಅವಶ್ಯಕತೆ ಪೂರೈಸಿದರೆ, ತಂದೆ ನಾಳೆಯ ಅವಶ್ಯಕತೆಗಳನ್ನು ಪೂರೈಸುತ್ತಾರೆ. ಪೋಷಕರು ಹೆಮ್ಮೆ ಪಡುವ ಮಕ್ಕಳಾಗಿ ಬಾಳಿ. ಉತ್ತಮ ಸಂಸಾರ ಮತ್ತು ಸಂಸ್ಕಾರ ನಿಮ್ಮದಾಗಲಿ ಎಂದರು.

ಎಸ್.ಆರ್.ಎನ್.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ‌.ಎಲ್.ಅರವಿಂದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಸಂಗೀತ ಪ್ರಾರ್ಥಿಸಿ, ಉಪನ್ಯಾಸಕರಾದ ಲಕ್ಷ್ಮಣ್ ಸ್ವಾಗತಿಸಿ, ಡಾ.ಮುಕುಂದ ನಿರೂಪಿಸಿದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Previous Article D-Manjunath-Sahitya-Parishad-Press-Meet ಶಿವಮೊಗ್ಗ ದಸರಾ, ಜಾನಪದ ಗೀತೆ ಸ್ಪರ್ಧೆ, ಕವಿಗೋಷ್ಠಿಗೆ ಹೆಸರೂ ನೋಂದಣಿಗೆ ಸೂಚನೆ
Next Article one-minute-news-notifications.webp ಡಿವಿಎಸ್‌ ರಂಗಮಂದಿರದಲ್ಲಿ ‘ಕನ್ಯಾದಾನ’, ಪಾಸ್‌ ಇದ್ದವರಿಗಷ್ಟೆ ಪ್ರವೇಶ

ಇದನ್ನೂ ಓದಿ

140525 JNNCE engineering college in Shimoga
COLLEGE NEWS

CET, ಕಾಮೆಡ್‌-ಕೆ ಸೀಟು ಆಯ್ಕೆ ಹೇಗೆ? ಶಿವಮೊಗ್ಗದಲ್ಲಿ ತಜ್ಞರ ಜೊತೆ ಜುಲೈ 13ಕ್ಕೆ ಸಂವಾದ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/07/2025
Professor-Chandrshekar-felicitated-at-Shimoga
COLLEGE NEWSSHIVAMOGGA CITY

ಕುವೆಂಪು ವಿವಿ ನಿವೃತ್ತ ಪ್ರೊಫೆಸರ್‌ ಚಂದ್ರೇಶೇಖರ್‌ ಅಭಿನಂದನಾ ಸಮಾರಂಭ, ಹೇಗಿತ್ತು? ಯಾರೆಲ್ಲ ಏನೆಲ್ಲ ಮಾತನಾಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Kuvempu-University-Examination-Registrar-sm-gopinath
COLLEGE NEWS

ಪ್ರಶ್ನೆ ಪತ್ರಿಕೆ ಗೊಂದಲ ವಿಚಾರ, ಕುವೆಂಪು ವಿವಿ ಪರೀಕ್ಷಾಂಗ ಕುಲಸಚಿವರಿಂದ ಮಹತ್ವದ ಪ್ರಕಟಣೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/05/2025
Kuvempu-University-File-Image
COLLEGE NEWS

BREAKING NEWS – ಕುವೆಂಪು ವಿವಿ, ಪ್ರಶ್ನೆ ಪತ್ರಿಕೆಯಲ್ಲಿ ಯಡವಟ್ಟು, ಕನ್ನಡ ಪರೀಕ್ಷೆ ದಿಢೀರ್‌ ರದ್ದು, ಏನಿದು ಪ್ರಕರಣ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/05/2025
Tech-zone-at-Shimoga-JNNCE-college.
COLLEGE NEWS

ಶಿವಮೊಗ್ಗದ JNN ಕಾಲೇಜಿನಲ್ಲಿ ಟೆಕ್‌ ಜೋನ್‌ ಸಮಾರೋಪ, ಯಾರೆಲ್ಲ ಏನೆಲ್ಲ ಸಲಹೆ ನೀಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
kuvempu-University-
COLLEGE NEWS

ಕುವೆಂಪು ವಿವಿ ಘಟಿಕೋತ್ಸವ, ಅಭ್ಯರ್ಥಿಗಳಿಂದ ಪದವಿ ಪ್ರಮಾಣ ಪತ್ರಕ್ಕೆ ಅರ್ಜಿ ಆಹ್ವಾನ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/05/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?