ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ರಾಷ್ಟ್ರೀಯ ಔಷಧ (Pharmacy) ಮಹಾವಿದ್ಯಾಲಯದ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಎನ್.ಸಿ.ಪಿ ಕಲಾ ಸಂಗಮ- 2025 ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಕಾರ್ಯಕ್ರಮ ಉದ್ಘಾಟಿಸಿದರು.
ನಾರಾಯಣರಾವ್ ಏನೆಲ್ಲ ಹೇಳಿದರು?
- ಆಧುನಿಕತೆಯ ಆಕರ್ಷಣೆಗಳು ಕ್ಷಣಿಕವಾಗಿದ್ದು, ಅದರಿಂದ ಹೊರಬಂದು ಇತಿಹಾಸ ಸೃಷ್ಟಿಸುವ ಆದರ್ಶ ಗುಣಗಳನ್ನು ಯುವ ಸಮೂಹ ರೂಡಿಸಿಕೊಳ್ಳಬೇಕಿದೆ.
- ಕಲಾತ್ಮಕತೆ ಬದುಕಿಗೆ ಅತ್ಯವಶ್ಯಕ. ರಂಗೋಲಿ, ಕಸೂತಿ, ಅಡಿಗೆ, ಸಿಂಗಾರ, ಮನೆಯನ್ನು ಒಪ್ಪ ಮಾಡುವ ಬಗೆ, ಇವೆಲ್ಲವೂ ಒಂದು ಕಲೆ. ಕಲಾತ್ಮಕ ಬದುಕು ಸಂಪನ್ನಗೊಳ್ಳಲು ಅಧ್ಯಯನದ ಬಗೆಗೆ ಆಸಕ್ತಿ ಹಾಗೂ ಎಲ್ಲಾ ರಂಗದಲ್ಲಿ ಮುಕ್ತವಾಗಿ ತೊಡಗಿಸಿಕೊಳ್ಳಿ.
- ಸಾಹಿತಿಗಳು, ಕಲಾವಿದರು, ರಾಜರು ಎಲ್ಲರು ತಮ್ಮದೆ ವಿದ್ವತ್ ಮೂಲಕ ಸಾಂಸ್ಕೃತಿಕವಾಗಿ ಗಟ್ಟಿಯಾದ ಶಕ್ತಿಯನ್ನು ನಾಡಿಗೆ ನೀಡಿದ್ದಾರೆ. ಅಂತಹ ಸಾಂಸ್ಕೃತಿಕ ಹಿನ್ನಲೆಯನ್ನು ಸದಾ ನೆನಸಿಕೊಳ್ಳಬೇಕು. ವ್ಯಕ್ತಿತ್ವವನ್ನು ನಿರೂಪಿಸಿಕೊಳ್ಳುವಲ್ಲಿ ಕ್ರಿಯಾಶೀಲತೆ ಕಾಪಾಡಲಿದೆ.
- ಹಿರಿತನಕ್ಕೆ ಗೌರವ ನೀಡುವ ಕಲೆ ನಿಮ್ಮದಾಗಲಿ. ಶಿಕ್ಷಣ ಮತ್ತು ಆರೋಗ್ಯ ಜನ ಸಾಮಾನ್ಯರ ಕೈಗೆ ಸಿಗದೆ ದುಬಾರಿಯಾಗುತ್ತದೆ. ಅದರೆ ಎನ್ಇಎಸ್ ಸಂಸ್ಥೆ ಇಂದಿಗೂ ಕೈಗೆಟುಕುವ ಬೆಲೆಯಲ್ಲಿ ಶಿಕ್ಷಣ ನೀಡುತ್ತಿದೆ.
- ಒಳ್ಳೆಯ ಸ್ನೇಹಿತ ಬದುಕಿನ ಔಷಧ. ಕನಸು ಮತ್ತು ಗುರಿಗೆ ಒಂದೇ ವ್ಯತ್ಯಾಸ, ಕನಸು ಕಾಣಲು ನಿದ್ರೆ ಬೇಕು, ಆದರೆ ಗುರಿ ತಲುಪಲು ನಿದ್ದೆಯಿಲ್ಲದೆ ದುಡಿಯಬೇಕು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿದೆ 10 ಸುದ್ದಿಗಳು | 22 ಆಗಸ್ಟ್ 2025
ಕಾಲೇಜಿನ ಪ್ರಾಂಶುಪಾಲ ಡಾ.ಜಿ.ನಾರಾಯಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಕಲಾವಿದ ಪೃಥ್ವಿ ಗೌಡ ಮುಖ್ಯ ಅತಿಥಿಯಾಗಿದ್ದರು.
Pharmacy college programme
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು





