ಪಿಯುಸಿ ಫಲಿತಾಂಶ, ಶಿವಮೊಗ್ಗದ ಮೂವರಿಗೆ ರ‍್ಯಾಂಕ್‌, ಯಾರೆಲ್ಲ ರ‍್ಯಾಂಕ್‌ ಪಡೆದಿದ್ದಾರೆ? ಎಷ್ಟು ಅಂಕ ಗಳಿಸಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 APRIL 2024

EDUCATION NEWS : 2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಶಿವಮೊಗ್ಗ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟದ ರ‍್ಯಾಂಕ್‌ ಪಡೆದಿದ್ದಾರೆ.

ಯಾರೆಲ್ಲ ರ‍್ಯಾಂಕ್‌ ಗಳಿಸಿದ್ದಾರೆ?

ಪವನ್‌ಗೆ ಎರಡನೇ ರ‍್ಯಾಂಕ್‌

ಕಾಮರ್ಸ್‌ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ ಎರಡನೇ ರ‍್ಯಾಂಕ್‌ ಪಡೆದಿದ್ದಾರೆ. ಶಿಕಾರಿಪುರದ ಕುಮದ್ವತಿ ಕಾಂಪೊಸಿಟ್‌ ಪಿಯು ಕಾಲೇಜು ವಿದ್ಯಾರ್ಥಿ. ತಂದೆ ಎಸ್‌.ಮಂಜುನಾಥ್‌ ಕುಮದ್ವತಿ ಬಿ.ಇಡ್‌ ಕಾಲೇಜಿನಲ್ಲಿ ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಾಯಿ ಅನಿತಾ.ಎಂ.ಎಸ್‌. ಗೃಹಿಣಿ.

ಕಾಲೇಜು ಆಡಳಿತ ಮತ್ತು ಪೋಷಕರಿಂದ ಉತ್ತಮ ಸಹಕಾರ ಇತ್ತು. ಸ್ವ ಅಧ್ಯಯನ ಮಾಡುತ್ತಿದ್ದೆ. ರಾತ್ರಿ ವೇಳೆ ಓದುವುದು ನನಗೆ ಅಭ್ಯಾಸ. ತಡರಾತ್ರಿವರೆಗೂ ಓದುತ್ತಿದ್ದೆ. ಈಗ ರಾಜ್ಯಕ್ಕೆ ರ‍್ಯಾಂಕ್‌ ಬಂದಿರುವುದು ಖುಷಿ ತಂದಿದೆ.ಪವನ್‌, ಕುಮದ್ವತಿ ಪಿಯು ಕಾಲೇಜು

pawan puc college

ಚುಕ್ಕಿಗೆ ನಾಲ್ಕನೆ ರ‍್ಯಾಂಕ್‌

ಕಲಾ ವಿಭಾಗದಲ್ಲಿ ಶಿವಮೊಗ್ಗದ ಡಿವಿಎಸ್‌ ಸ್ವತಂತ್ರ ಪಿಯು ಕಾಲೇಜು ವಿದ್ಯಾರ್ಥಿನಿ ಚುಕ್ಕಿ.ಕೆ.ಸಿ 593 ಅಂಕ ಗಳಿಸಿ 4ನೇ ರ‍್ಯಾಂಕ್‌ ಪಡೆದಿದ್ದಾರೆ. ಇವರು ಶಿವಮೊಗ್ಗದ ಕನ್ನಡ ಮೀಡಿಯಂ ನ್ಯೂಸ್‌ ಚಾನೆಲ್‌ನ ಸಂಪಾದಕ ಹೊನ್ನಾಳಿ ಚಂದ್ರಶೇಖರ್‌ ಮತ್ತು ವಕೀಲರಾದ ಪೂರ್ಣಮಾ ಹೆಚ್‌.ಎಂ ಅವರ ಪುತ್ರಿ.

ದಿನಕ್ಕೆ 4-5 ಗಂಟೆ ಅಧ್ಯಯನ ಮಾಡುತ್ತಿದ್ದೆ.‌ ಸಹಪಾಠಿಗಳು, ಉಪನ್ಯಾಸಕರ ಜತೆ ವಿಷಯದ ಕುರಿತು ಚರ್ಚೆ ನಡೆಸಿದ್ದು ಹೆಚ್ಚಿನ ಅಂಕ ಪಡೆಯಲು ಸಹಕಾರಿಯಾಯಿತು. ಯುಪಿಎಸ್‌ಸಿ ಪರೀಕ್ಷೆ ಬರೆಯುವ ಹಂಬಲವಿದೆ. ಮುಂದೆ ಕಾನೂನು ಪದವಿ ಪಡೆದು ಜಡ್ಜ್ ಆಗುವ ಕನಸು ಕಂಡಿದ್ದೇನೆ.ಕೆ.ಸಿ.ಚುಕ್ಕಿ, ಡಿವಿಎಸ್ ಪಿಯು ಕಾಲೇಜು, ಶಿವಮೊಗ್ಗ.

chukki puc rank

ಸಾತ್ವಿಕ್‌ಗೆ 4ನೇ ರ‍್ಯಾಂಕ್‌

ವಿಜ್ಞಾನ ವಿಭಾಗದಲ್ಲಿ ಶಿವಮೊಗ್ಗದ ಪೇಸ್‌ ಪಿಯು ಕಾಲೇಜಿನ ಸಾತ್ವಿಕ್‌ ಕೆ.ವೈ. 595 ಅಂಕ ಗಳಿಸಿ ರಾಜ್ಯಕ್ಕೆ 4ನೇ ರ‍್ಯಾಂಕ್‌ ಪಡೆದಿದ್ದಾರೆ. ಮೂಲತಃ ಹೊಸನಗರ ತಾಲೂಕು ಕೋಡೂರು ಗ್ರಾಮದವರು. ತಂದೆ ಯೋಗೇಶ್‌ ಕೃಷಿಕರು, ತಾಯಿ ಅಪರ್ಣಾ ಗೃಹಿಣಿ.

ಉಪನ್ಯಾಸಕರು, ಪೋಷಕರ ಸಹಕಾರದಿಂದ ರ‍್ಯಾಂಕ್‌ ಪಡೆಯಲು ಸಾಧ್ಯವಾಯಿತು. ನಿರಂತರ ಓದಿನಿಂದ ಪರೀಕ್ಷೆ ಎದುರಿಸುವುದು ಸುಲಭವಾಯಿತು. ಇಂಜಿನಿಯರಿಂಗ್‌ ಮಾಡುವ ಗುರಿಯಿದೆ.ಸಾತ್ವಿಕ್‌, ಪೇಸ್‌ ಪಿಯು ಕಾಲೇಜು

ಜಿಲ್ಲೆಗೆ 8ನೇ ಸ್ಥಾನ

ಇನ್ನು, ಶಿವಮೊಗ್ಗ ಜಿಲ್ಲೆ ಫಲಿತಾಂಶದಲ್ಲಿ ಸುಧಾರಣೆ ಕಂಡಿದೆ. ಕಳೆದ ವರ್ಷ ಶೇ.83.13ರಷ್ಟು ಫಲಿತಾಂಶ ಬಂದಿತ್ತು. ಈ ವರ್ಷ ಶೇ.88.58ರಷ್ಟು ಫಲಿತಾಂಶ ಬಂದಿದೆ. ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆಗೆ 8ನೇ ಸ್ಥಾನ ಲಭಿಸಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ನಿನ್ನೆಗಿಂತಲು ಇವತ್ತು ತಾಪಮಾನ ತುಸು ಏರಿಕೆ, ಎಷ್ಟಿರುತ್ತೆ ಇವತ್ತು ಉಷ್ಣಾಂಶ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 10, 2024

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment