ಶಂಕರಘಟ್ಟ: ಪ್ರಶ್ನೆ ಪತ್ರಿಕೆ ಗೊಂದಲದಿಂದ ಬಿ.ಎ. 6ನೇ ಸೆಮಿಸ್ಟರ್ ಕನ್ನಡ ಐಚ್ಛಿಕ ಪರೀಕ್ಷೆಯನ್ನು (Examination) ಮುಂದೂಡಲಾಗಿದೆ. ಪರೀಕ್ಷೆಯ ದಿನಾಂಕವನ್ನು ಮುಂದೆ ತಿಳಿಸಲಾಗುತ್ತದೆ. ಇನ್ನು, ಗೊಂದಲಕ್ಕೆ ಕಾರಣರಾದ ಅಧ್ಯಾಪಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಪ್ರಶ್ನೆ ಪತ್ರಿಕೆಯಲ್ಲಿ ಉಂಟಾಗಿದ್ದ ಗೊಂದಲದಿಂದ ಇಂದು ನಡೆಯಬೇಕಿದ್ದ ಪರೀಕ್ಷೆ ದಿಢೀರ್ ಮುಂದೂಡಿಕೆಯಾಗಿತ್ತು. ಈ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಮಾಡಿತ್ತು. ಈಗ ಗೊಂದಲಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿವಿ ಪ್ರಕಟಣೆಯಲ್ಲಿ ಏನಿದೆ?
ಕನ್ನಡ ವಿಷಯದ ಪರೀಕ್ಷಾ ಮಂಡಳಿಯ ಅಧ್ಯಕ್ಷರನ್ನು ಕರೆಯಿಸಿ ಪರೀಕ್ಷಾ ವಿಭಾಗದಲ್ಲಿ ವಿಚಾರಣೆ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ, ಪರಿಶೀಲನೆ ನಡೆಸಿದ ಅಧ್ಯಾಪಕರು ಮತ್ತು ಅಧ್ಯಕ್ಷರು ಹೊಣೆಗಾರರಾಗಿರುತ್ತಾರೆ. ಈ ಕುರಿತು ಪರೀಕ್ಷಾ ಮಂಡಳಿಯ ಅಧ್ಯಕ್ಷರು ತಪ್ಪೊಪ್ಪಿಗೆಯ ಪತ್ರ ಸಲ್ಲಿಸಿದ್ದು, ಸಂಬಂಧಪಟ್ಟವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.ಎಂ.ಗೋಪಿನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ವಿಶ್ವವಿದ್ಯಾಲಯದ ಘನತೆಗೆ ಕುಂದು ತಂದಿರುವ ಮತ್ತು ವಿದ್ಯಾರ್ಥಿಗಳಿಗೆ ತೊಡಕು ಉಂಟು ಮಾಡಿರುವ ಈ ಪ್ರಕರಣಕ್ಕೆ ಸಂಬಂಧಪಟ್ಟವರ ಮೇಲೆ ಪರೀಕ್ಷಾ ಕಾಯ್ದೆಯ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಹಣ್ಣು ಮೇಳ, ಅಪರೂಪದ ಮಾವು, ಹಲಸು ಮಾರಾಟ, ಯಾವೆಲ್ಲ ವೆರೈಟಿಯ ಹಣ್ಣುಗಳಿವೆ?

LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು





