ಶಿವಮೊಗ್ಗದಲ್ಲಿ ರೋಬೋ ರೇಸ್‌, ಹೇಗಿತ್ತು ರೇಸ್‌? ಇಲ್ಲಿದೆ ಫೋಟೊ ಸಹಿತ ವರದಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 23 DECEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

EDUCATION NEWS : ಅಲ್ಲಿ ವಿದ್ಯಾರ್ಥಿಗಳೇ ನಿರ್ಮಿಸಿದ್ದ ರೋಬೊಗಳು ರಸ್ತೆಯ ಉಬ್ಬು ತಗ್ಗುಗಳ ಲೆಕ್ಕಿಸದೇ ಮುನ್ನುಗುತ್ತಿತ್ತು. ವಿವಿಧ ಸರ್ಧೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ತಂಡದ ರೋಬೊಗಳ ಪ್ರದರ್ಶನ ನೋಡುಗರನ್ನು ರೋಮಾಂಚನಗೊಳಿಸಿತ್ತು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗ, ಐಇಟಿಇ ವಿದ್ಯಾರ್ಥಿಗಳ ವೇದಿಕೆ ಹಾಗೂ ಐಇಇಇ ವಿದ್ಯಾರ್ಥಿ ಘಟಕದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ತಾಂತ್ರಿಕ ವಿಚಾರಸಂಕಿರಣ ‘ಪ್ಲಾಸ್ಮಾ – 2023’ ಕಾರ್ಯಕ್ರಮದಲ್ಲಿ ವಿವಿಧ ಬಗೆಯ ರೋಬೋಗಳು ತಮ್ಮ ಕಾರ್ಯಕ್ಷಮತೆ ಪ್ರದರ್ಶಿಸಿದವು.

ರೋಬೊ ಲೈನ್ ಫಾಲೊವರ್, ರೋಬೊ ಸಾಸರ್, ರೋಬೊ ರೇಸ್, ಹ್ಯಾಕಥಾನ್, ಸುಮೊ ವಾರ್ ಸ್ಪರ್ಧೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 150 ಕ್ಕು ಹೆಚ್ಚು ಎಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡ ತಾವೇ ನಿರ್ಮಿಸಿದ ರೋಬೊಗಳೊಂದಿಗೆ ಭಾಗವಹಿಸಿದ್ದರು.

Robot Race in JNNCE college in Shimoga

ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರಿನ ಎವನ್ ಲಾಜಿಕ್ಸ್ ಕಂಪನಿ ಸ್ಥಾಪಕರಾದ ಪ್ರವೀಣ್ ಉಡುಪ ಮಾತನಾಡಿ, ಪ್ರಯೋಗಾತ್ಮಕ ಕಲಿಕೆಯಿಂದ ಮಾತ್ರ ನಿಜವಾದ ಜ್ಞಾನದ ವಿಕಸನವಾಗಲಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಪಕ್ಕದವರೇ ನಮಗೆ ಸ್ಪರ್ಧಿಗಳಾಗಿರುತ್ತಾರೆ ಎಂಬ ಅರಿವು ಬೇಕಿದೆ ಎಂದು ಹೇಳಿದರು.

ಶಿಕ್ಷಣದ ಜೊತೆಗೆ ವಿಶ್ಲೇಷಣಾತ್ಮಕ ಚಿಂತನೆಗಳು ಹಾಗೂ ಎದುರಾಗುವ ಸಮಸ್ಯೆಗಳನ್ನು ಆತ್ಮವಿಶ್ವಾಸದಿಂದ ಬಗೆಹರಿಸುವ ಕೌಶಲ್ಯತೆಗಳ ಅವಶ್ಯಕತೆಯಿದೆ. ಉದ್ಯೋಗ ನೀಡುವ ಸಂಸ್ಥೆಗಳು ನಮ್ಮಿಂದ ಬಯಸುವುದೇ ಇಂತಹ ಪ್ರಯೋಗಾತ್ಮಕ ಕೌಶಲ್ಯಗಳನ್ನು. ನಾವು ತಲುಪಬೇಕಿರುವ ಗುರಿ ಮತ್ತು ಎದುರಿಸುವ ಸ್ಪರ್ಧಾತ್ಮಕ ವಾತಾವರಣಕ್ಕೆ ವಿದ್ಯಾರ್ಥಿ ದೆಸೆಯಿಂದಲೇ ಸಿದ್ದರಾಗಿ. ಕೃತಕ ಬುದ್ಧಿಮತ್ತೆ ಮತ್ತು ರೋಬೊಟಿಕ್ಸ್ ಕ್ಷೇತ್ರ ಅನೇಕ ಉದ್ಯೋಗವಕಾಶಗಳನ್ನು ಹೊಂದಿದೆ. ನಿಮ್ಮ ನಾವೀನ್ಯ ಯೋಜನೆಗಳಿಗೆ ಹೊಸ ತಂತ್ರಜ್ಞಾನಗಳ ಸ್ಪರ್ಶ ನೀಡಿ. ಸಾಧ್ಯವಾದಷ್ಟು ಆರಾಮದಾಯಕ ಮನಸ್ಥಿತಿಗಳಿಂದ ಹೊರಬಂದು ನಿರಂತರ ಕಲಿಕೆಯಲ್ಲಿ ಮುಕ್ತವಾಗಿ ತೊಡಗಿಸಿಕೊಳ್ಳಿ ಎಂದು ಸಲಹೆ ನೀಡಿದರು.

Robot Race in JNNCE college in Shimoga

ವಿದ್ಯಾರ್ಥಿಗಳು ಕಲಿಯುತ್ತಿರುವ ಶಿಕ್ಷಣಕ್ಕೂ ಉದ್ಯೋಗ ನೀಡುವ ಸಂಸ್ಥೆಗಳ ಅವಶ್ಯಕತೆಗಳ ನಡುವಿನ ಅಂತರವನ್ನು ಕಡಿಮೆಗೊಳಿಸಲು ಇಂತಹ ಕಾರ್ಯಕ್ರಮಗಳು ಬೇಕಿದೆ. ಹೇಗೆ ಪ್ಲಾಸ್ಮಾ ಮಾನವನಲ್ಲಿ ಹೊಸ ರಕ್ತ ಉತ್ಪಾದನೆಗೆ ಅವಶ್ಯಕವೊ ಹಾಗೆಯೇ ಹೊಸ ಆಲೋಚನೆಗಳಿಗೆ ಇಂತಹ ಪ್ಲಾಸ್ಮಾ ಕಾರ್ಯಕ್ರಮ ಪೂರಕವಾಗಲಿಡಾ.ಪಿ.ನಾರಾಯಣ್, ಸಹ ಕಾರ್ಯದರ್ಶಿ, ರಾಷ್ಟ್ರೀಯ ಶಿಕ್ಷಣ ಸಮಿತಿ

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಡಾ.ಎಸ್.ಸುರೇಂದ್ರ ಅಧ್ಯಕ್ಷತೆ ವಹಿಸಿದ್ದರು. ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಎಸ್.ವಿ.ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಯೋಜಕರಾದ ಅನಿಲ್ ಕುಮಾರ್.ಜೆ, ಪ್ರದೀಪ್. ಎಸ್.ಸಿ, ಪ್ರಶಾಂತ.ಜಿ.ಎಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ – ಬಂಗಾರಧಾಮದಲ್ಲಿ ಸ್ಮಾರಕ ರೆಡಿ, ಲೋಕಾರ್ಪಣೆಗೆ ದಿನಾಂಕ ನಿಗದಿ, ಯಾರೆಲ್ಲ ಭಾಗವಹಿಸ್ತಿದ್ದಾರೆ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment