ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 31 AUGUST 2024 : ನಗರದ ಪೇಸ್ ಪಿಯು ಕಾಲೇಜಿನಲ್ಲಿ ಸಂಸ್ಕೃತದಲ್ಲಿ ವಿಜ್ಞಾನ (Sanskrit) ವಿಷಯದ ಸಂಸ್ಕೃತೋತ್ಸವ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಸಂಸ್ಕೃತದಲ್ಲಿ ಅಡಕವಾಗಿವ ವೈಜ್ಞಾನಿಕ ವಿಷಯಗಳನ್ನು ಪ್ರಸ್ತಾಪಿಸಿದರು.
ವೇದಗಣಿತ, ಗಣಿತಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಹಾಗೂ ಆಯುರ್ವೇದ ವಿಜ್ಞಾನದ ಸಂಗತಿಗಳನ್ನು ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದರು. ಅಲ್ಲದೆ ಸಂಸ್ಕೃತ ಗ್ರಂಥಗಳಲ್ಲಿ ಉಲ್ಲೇಖಿತವಾದ ಅಂಶಗಳನ್ನು ತಿಳಿಸಿದರು. ದ್ವಿತೀಯ ಪಿ.ಯು ವಿದ್ಯಾರ್ಥಿಗಳಾದ ನಂದನ್ ಕೌಡಿಕಿ, ನಚಿಕೇತ್, ಸನಕ ಕೆ. ಎಂ, ಅಭಿನವ್ ಶರ್ಮಾ, ಚನ್ನರಾಜ್, ಶ್ರಿಯಾ, ಅಮೃತ ಹಾಗೂ ಕೇದಾರ್ ವಿಷಯ ಪ್ರಸ್ತಾಪಿಸಿದರು.
ಸಂಸ್ಕೃತ ದಿನದ ಪ್ರಯುಕ್ತ ನಡೆದ ಸಂಸ್ಕೃತೋತ್ಸವ ಕಾರ್ಯಕ್ರಮ ಅರ್ಥಗರ್ಭಿತವಾಗಿತ್ತು. ವೈಜ್ಞಾನಿಕವಾದ ಈ ಸಂಸ್ಕೃತ ಭಾಷೆಯ ಮಹತ್ವವನ್ನು ಭಾರತದಲ್ಲಿ ಎಲ್ಲರೂ ತಿಳಿದು ಇನ್ನಷ್ಟು ಅಧ್ಯಯನ ಮಾಡುವಂತೆ ಆಗಬೇಕು.ಪ್ರೊ. ಬಿ.ಎನ್.ವಿಶ್ವನಾಥಯ್ಯ, ಕಾಲೇಜು ಪ್ರಚಾರ್ಯ
ಕಾರ್ಯಕ್ರಮದಲ್ಲಿ ಸಂಸ್ಕೃತ ಉಪನ್ಯಾಸಕಿ ಡಾ. ಮೈತ್ರೇಯಿ ಹೆಚ್. ಎಲ್ , ಕೇಶವಮೂರ್ತಿ, ಬಸವರಾಜು ಕೆ.ಆರ್, ಪ್ರಭಂಜನ ಜಿ. ಜಿ ಅವರು ಉಪಸ್ಥಿತರಿದ್ದರು.
ಸೈಯದ್ ಮೂಸಾ ಸ್ವಾಗತಿಸಿದರು, ಕುಮಾರಿ ಶರಣ್ಯ ಪ್ರಾರ್ಥಿಸಿದರು, ಸೂರ್ಯಕುಮಾರ್ ವಂದಿಸಿದರು, ರಿಷಿ ಹಾಗೂ ಫಲ್ಗುಣಿ ಕಾರ್ಯಕ್ರಮ ನಿರೂಪಿಸಿದರು. ಸಮೃದ್ಧಿ ನಾಯಕ್, ಮುಂಗಾರು, ಅಮೂಲ್ಯ ಬಾಯರ್ ಹಾಗೂ ರಕ್ಷಾ ರಾವ್ ಸಂಸ್ಕೃತ ಗೀತೆಗಳ ಗಾಯನ ಮಾಡಿದರು.


ಇದನ್ನೂ ಓದಿ ⇒ ಶಿವಮೊಗ್ಗ ಸಿಟಿಯ ಬಹುಭಾಗದಲ್ಲಿ ನಾಳೆ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






