ಕರೋನ ರಿಪೋರ್ಟ್ ಗೊಂದಲ, ಶಿವಮೊಗ್ಗದ ವರದಿ ಪ್ರಕಾರ 210 ಕೇಸ್, ರಾಜ್ಯ ಸರ್ಕಾರದ ಪ್ರಕಾರ 0 ಕೇಸ್, ಯಾವುದು ಸರಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಆಗಸ್ಟ್ 2020

ಕರೋನ ಸೋಂಕಿತರ ವಿಚಾರದಲ್ಲಿ ಎರಡು ಪ್ರತ್ಯೇಕ ಹೆಲ್ತ್ ಬುಲೆಟಿನ್ ಪ್ರಕಟಗೊಳ್ಳುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಗೊಂದಲ ಮುಂದುವರೆದಿದೆ. ಅದರಲ್ಲೂ ಸೋಮವಾರದ ರಿಪೋರ್ಟ್, ಜನರನ್ನು ಚಕಿತಗೊಳಿಸಿದೆ.

ಸೋಮವಾರದ ರಿಪೋರ್ಟ್ ಏನು?

ಶಿವಮೊಗ್ಗ ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ಪ್ರಕಟಿಸಿದ್ದು. ಅದರಲ್ಲಿ 210 ಮಂದಿಗೆ ಕರೋನ ಪಾಸಿಟಿವ್ ಎಂದು ದಾಖಲಾಗಿದೆ. ರಾಜ್ಯ ಸರ್ಕಾರ ಸೋಮವಾರ ಪ್ರಟಿಸಿರುವ ವರದಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ತಿಳಿಸಿದೆ. ಇದು ಗೊಂದಲ ಸೃಷ್ಟಿಸಿದೆ. ತಾಂತ್ರಿಕ ಕಾರಣದಿಂದ ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಸೋಂಕಿತರ ಸಂಖ್ಯೆ ಸೊನ್ನೆ ಎಂದು ಪ್ರಕಟವಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

ಯಾರ ವರದಿ ಸರಿ?

ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ಗಳು ಪ್ರತಿದಿನವು ತಾಳೆ ಆಗುವುದಿಲ್ಲ. ಇದು ಗೊಂದಲ ನಿರ್ಮಿಸಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2811 ಇದೆ. ಗುಣವಾಗಿ ಬಿಡುಗಡೆಯಾದವರ ಸಂಖ್ಯೆ 1212 ಇದೆ. ಜಿಲ್ಲಾಡಳಿತದ ವರದಿಯಲ್ಲಿ ಸೋಂಕಿತರ ಸಂಖ್ಯೆ 3057, ಗುಣವಾದವರ ಸಂಖ್ಯೆ 1827 ಇದೆ. ಇವೆರಡಲ್ಲಿ ಯಾವುದು ಸರಿ ಅನ್ನುವುದು ಜನರ ಗೊಂದಲವಾಗಿದೆ.

200520 Shimoga DC KB Shivakumar 1 1

ಜಿಲ್ಲಾಡಳಿತ ಹೇಳೋದು ಏನು?

ಸೋಂಕಿತರ ವಿವರನ್ನು ಪ್ರತಿದಿನ ಜಿಲ್ಲಾಡಳಿತ ರಾಜ್ಯ ಸರ್ಕಾರಕ್ಕೆ ಕಳುಹಿಸುತ್ತದೆ. ಆದರೆ ರಾಜ್ಯ ಸರ್ಕಾರದ ವರದಿಯಲ್ಲಿ ಮಾಹಿತಿ ಪ್ರಕಟಿಸಲು ಕೆಲವು ಮಾನದಂಡ ಅನುಸರಿಸಲಾಗುತ್ತಿದೆ. ಇದೆ ಕಾರಣಕ್ಕೆ ಅಲ್ಲಿ ವಿವರ ತಡವಾಗುತ್ತಿದೆ. ಜಿಲ್ಲಾಡಳಿತ ಆಯಾ ದಿನದ ಮಾಹಿತಿಯನ್ನು ಪ್ರತಿದಿನ ಸಂಜೆ 6.30ರವರೆಗೆ ಬಂದ ರಿಪೋರ್ಟ್‍ನ ಆಧಾರದಲ್ಲಿ ವರದಿ ಪ್ರಕಟಿಸುತ್ತಿದೆ. ಹಾಗಾಗಿ ಎರಡು ವರದಿಯಲ್ಲಿ ವ್ಯತ್ಯಾಸ ಬರುತ್ತಿದೆ ಅನ್ನುತ್ತಾರೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್.

ರಾಜ್ಯ ಮಟ್ಟದ ಟಿವಿ ಚಾನೆಲ್‍ಗಳು ಬೆಂಗಳೂರಿನಲ್ಲಿ ಬಿಡುಗಡೆಯಾಗುವ ಸರ್ಕಾರದ ವರದಿ ಅಧಾರದಲ್ಲಿ ಅಂಕಿ, ಸಂಖ್ಯೆಯನ್ನು ಪ್ರಕಟಿಸುತ್ತಿವೆ. ಇದನ್ನು ಗಮನಿಸುವ ವೀಕ್ಷಕರು ಗೊಂದಲಕ್ಕೆ ಸಿಲುಕುತ್ತಿದ್ದಾರೆ. ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ಒಂದೇ ರೀತಿ ಪ್ರಕಟವಾಗುವವರೆಗೆ ಈ ಗೊಂದಲ ಮುಂದುವರೆಯಲಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 11, 2020

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

Leave a Comment